ಕೆಸಿಎನ್ ಪರ “ತುಪ್ಪದ ಹುಡುಗಿ’ ಪ್ರಚಾರ
Team Udayavani, Nov 30, 2019, 9:42 PM IST
ಕೆ.ಆರ್.ಪೇಟೆ: ಕೆ.ಆರ್.ಪೇಟೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡರ ಪರ “ತುಪ್ಪದ ಹುಡುಗಿ’ ಎಂದೇ ಹೆಸರಾಗಿರುವ ರಾಗಿಣಿ ದ್ವಿವೇದಿ ಪ್ರಚಾರ ನಡೆಸಿದರು. ಇವರಿಗೆ ಕಿರುತೆರೆ ನಟಿಯರು ಸಾಥ್ ನೀಡಿದರು.
ತಾಲೂಕಿನ ಬಂಡಿಹೊಳೆ, ಕುಪ್ಪಳ್ಳಿ, ಮಾಕವಳ್ಳಿ, ಹಿರಿಕಳಲೆ, ಅಕ್ಕಿಹೆಬ್ಟಾಳು, ಸಂತೇಬಾಚಹಳ್ಳಿ, ಕಿಕ್ಕೇರಿ ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ನಟಿ ರಾಗಿಣಿ ದ್ವಿವೇದಿ ಪ್ರಚಾರ ನಡೆಸಿದರು. ರಾಗಿಣಿಗೆ “ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾಶ, “ಕಮಲಿ’ ಧಾರಾವಾಹಿಯ ಆಶಿಕಾ ಸಾಥ್ ನೀಡಿದರು. ಹಾಸ್ಯ ನಟರಾದ ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ಮೂಗೂರು ಸುರೇಶ್, ಬುಲೆಟ್ ಪ್ರಕಾಶ್ ಕೂಡ ಪ್ರಚಾರದಲ್ಲಿ ಪಾಲ್ಗೊಂಡರು.
ತಾರೆಯರನ್ನು ನೋಡಿದ ತಾಲೂಕಿನ ಯುವಜನ, ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಈ ವೇಳೆ, ಜನಜಂಗುಳಿ ನಿಯಂತ್ರಿಸಲು ಪೋಲಿಸರು ಹರಸಾಹಸ ನಡೆಸಿದರು. ರಾಗಿಣಿ ಪುಟ್ಟ ಮಕ್ಕಳನ್ನು ಎತ್ತಿಕೊಂಡು ಮುದ್ದಾಡಿದರಲ್ಲದೆ, ಹೆಣ್ಣು ಮಕ್ಕಳು, ಯುವಕ, ಯುವತಿಯರೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು
Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ