ಶೀತ ಪೀಡಿತ ಗ್ರಾಮಕ್ಕೆ ಅಧಿಕಾರಿಗಳ ಭೇಟಿ
Team Udayavani, Dec 1, 2019, 11:28 AM IST
ಹೊಳೆನರಸೀಪುರ: ರಾಜ್ಯ ಹೈಕೋರ್ಟ್ ಸೂಚನೆ ಮೇರೆಗೆ ವಿಭಾಗೀಯ ಆಯುಕ್ತರಾದ ಯಶವಂತ್, ಜಿಲ್ಲಾಧಿಕಾರಿ ಗಿರೀಶ್, ಉಪವಿಭಾಗಾಧಿಕಾರಿ ನವೀನ್ ಭಟ್ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ತಾಲೂಕಿನ ಶೀತ ಪೀಡಿತ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ತೆವಡಳ್ಳಿ, ಬಿಲ್ಲೇನಹಳ್ಳಿ,ಚನ್ನರಾಯಪಟ್ಟಣದ ತಾಲೂಕಿನಸಿಂಗೇಮಹಳ್ಳಿ ಗ್ರಾಮಸ್ಥರು ರಾಜ್ಯ ಹೋಕೋರ್ಟ್ಗೆ ಮನವಿ ಸಲ್ಲಿಸಿ ಹೇಮಾವತಿ ಅಣೆಕಟ್ಟೆ ಮತ್ತು ಅದರನಾಲೆಗಳು ನಮ್ಮ ಗ್ರಾಮದ ಸುತ್ತ ಹೋಗಿರುವುದರಿಂದ ನಮ್ಮ ಗ್ರಾಮಗಳು ಶೀತಪೀಡಿತವಾಗಿ ಮನೆಗಳು ಕುಸಿಯುತ್ತಿವೆ. ಆದ್ದರಿಂದ ನಮ್ಮ ಗ್ರಾಮಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಬೇಕು ಹಾಗೂಸರ್ಕಾರದಿಂದ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು.
ಗ್ರಾಮಸ್ಥರು ಸಲ್ಲಿಸಿದ್ದ ಅರ್ಜಿಯನ್ನುಪುರಸ್ಕರಿಸಿದ ನ್ಯಾಯಾಲಯ ಶೀತ ಪೀಡಿತ ಗ್ರಾಮಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು. ನ್ಯಾಯಾಯಲದ ಆದೇಶದ ಮೇರೆಗೆ ಶನಿವಾರ ತಾಲೂಕಿನ ತೆವಡಳ್ಳಿ, ಬಿಲ್ಲೇನಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಪುನರ್ವಸತಿ ಕಲ್ಪಿಸಲು ಒತ್ತಾಯಿಸಿದರು. ತಹಶೀಲ್ದಾರ್ ಕೆ.ಆರ್. ಶ್ರೀನಿವಾಸ್, ಕಾವೇರಿ ನೀರಾವರಿ ನಿಗಮದ ಇಇ ಪುಟ್ಟರಾಜು, ತಾ ಪಂ ಇಒ ಕೆ.ಯೋಗೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ