ರಾಜ್ಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣ: ಎಇಇ


Team Udayavani, Dec 1, 2019, 11:43 AM IST

kolar-tdy-2

ಬೇತಮಂಗಲ: ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ರಾಜ್ಯ ಹೆದ್ದಾರಿ ದ್ವಿಪಥ ಕಾಮಗಾರಿಯನ್ನು 15 ದಿನಗಳೊಳಗೆ ಡಾಂಬರೀಕರಣಗೊಳಿಸಲಾಗುವುದುಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ಮಲ್ಲಿಕಾರ್ಜುನ ಮೊಲಕೇರಿ ಭರವಸೆ ನೀಡಿದರು.

ಹೋಬಳಿಯ ಮೂಲಕ ಆಂಧ್ರ ಗಡಿವರೆಗೂ ಕೈಗೊಂಡಿರುವ ಈ ಕಾಮಗಾರಿಯನ್ನು ಶಾಸಕಿಎಂ.ರೂಪಕಲಾ ವೀಕ್ಷಣೆಗೆ ಆಗಮಿಸಿದ್ದ ವೇಳೆ ರಸ್ತೆಅಭಿವೃದ್ಧಿಯ ಬಗ್ಗೆ ವಿವರಣೆ ನೀಡಿದರು. ಬಿಲ್‌ ಬಾಕಿಇದ್ದ ಕಾರಣ ಕಾಮಗಾರಿಯನ್ನು ಗುತ್ತಿಗೆದಾರರು ನಿಲ್ಲಿಸಿದ್ದರು. ಶಾಸಕಿ ಎಂ.ರೂಪಕಲಾ ಮತ್ತು ಹಿಂದಿನ ಸಂಸದ ಕೆ.ಎಚ್‌.ಮುನಿಯಪ್ಪ ಈ ಬಗ್ಗೆ ಅನೇಕ ಬಾರಿ ಚರ್ಚಿಸಿದ್ದ ಪರಿಣಾಮ ಕಾಮಗಾರಿ ಪ್ರಾರಂಭಿಸಲಾಗಿದೆ. ಈಗಾಗಲೇ ಕಾಮಗಾರಿ ಪ್ರಾರಂಭಿಸಿದ್ದು, 15 ದಿನಗಳಲ್ಲಿ ಡಾಂಬರೀಕರಣಗೊಳಿಸಿ ಪೂರ್ಣಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಶಾಸಕಿ ಎಂ.ರೂಪಕಲಾ ಮಾತನಾಡಿ, ಬೆಂಗಳೂರಿನಿಂದ ಚೆನೈಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಲೋಕೊಪಯೋಗಿ ಇಲಾಖೆಯ ರಸ್ತೆಯನ್ನು ರಾಜ್ಯ ಹೆದ್ದಾರಿ ರಸ್ತೆಯಾಗಿ ಮೇಲ್ದಜೇಗೇರಿಸಲಾಗಿದೆ. ಬಂಗಾರಪೇಟೆಯ ನೆರಳೇಕೆರೆಯಿಂದ ಬೇತಮಂಗಲ ಮೂಲಕ ವಿ.ಕೋಟೆಯ ಗಡಿವರೆಗೂ ಮತ್ತು ಕ್ಯಾಸಂಬಳ್ಳಿಯಿಂದ ರಾಜಪೇಟೆ ರಸ್ತೆವರೆಗೂ ಒಟ್ಟು44 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

ಬಹುದಿನಗಳ ಕನಸು: ಬೇತಮಂಗಲದಿಂದ ವಿ. ಕೋಟೆವರೆಗಿನ ರಸ್ತೆಯಲ್ಲೇ ದಶಕಗಳಿಂದಲೂ ಗುಂಡಿ ಬಿದ್ದು, ಸವಾರರಿಗೆ ಸಮಸ್ಯೆ ಆಗುತ್ತಿತ್ತು. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡರೆ ಸಮಸ್ಯೆಯಾಗುತ್ತಿತ್ತು. ಬಿಸಿಲುಗಾಲದಲ್ಲಿಯೂರಸ್ತೆಯ ದೂಳು, ಜೆಲ್ಲಿ, ಮಣ್ಣಿನ ಸಮಸ್ಯೆಎದುರಿಸುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದರು. ಈ ರಸ್ತೆಯ ಬಹುದಿನಗಳ ಕನಸು ಇದೀಗ ಈಡೇರಲು ಕಾಲ ಕೂಡಿ ಬಂದಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

ಈ ರಸ್ತೆಯ ಕಾಮಗಾರಿಯ ತಡೆ ಬಗ್ಗೆ ವಿವಿಧ ತಲೆ ಬರಹದಡಿಯಲ್ಲಿ ಪ್ರಕಟಿಸಿದ್ದ ವರದಿಯನ್ನು ಕಟ್‌ಮಾಡಿ ಅಧಿಕಾರಿಗಳ ಗಮನಕ್ಕೆ ತಂದು ಪ್ರತಿನಿತ್ಯ ಸವಾರರ ನರಕಯಾತನೆ ಬಗ್ಗೆ ವಿವರಿಸಿದ್ದೇವೆ. ತಾವು ಸಹ ಅಧಿಕಾರಿಗಳನ್ನು ಅನೇಕ ಬಾರಿ ಭೇಟಿ ಮಾಡಿ ಈ ಕೂಡಲೇ ಕಾಮಗಾರಿ ಆರಂಭಿಸುವಂತೆ ಮನವಿ ಮಾಡಿದ್ದೆ, ಕಳೆದ ವಾರದಿಂದ ಕಾಮಗಾರಿ ಪ್ರಾರಂಭಿಸಿದ್ದು, ಇದೀಗ ಎಇಇ ಅಧಿಕಾರಿಗಳು ಭೇಟಿ ನೀಡಿ 15 ದಿನಗಳೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ಈ ಕೂಡಲೇ ಆಂಧ್ರದ ಗಡಿಭಾಗವಾದ ವೆಂಗಸಂದ್ರ ಕ್ರಾಸ್‌ ಮತ್ತು ಎನ್‌.ಜಿ ಹುಲ್ಕೂರುಮಾರ್ಗ ಮಧ್ಯೆ ರಸ್ತೆಯನ್ನು ಮೊದಲು ಡಾಂಬರೀಕರಣಗೊಳಿಸಿ ಈ 1 ಕಿ.ಮೀ. ರಸ್ತೆ ತೀರ ಹದಗಟ್ಟಿದ್ದು, ಸವಾರರಿಗೆ ತೀವ್ರ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಶಾಸಕಿ ಎಂ.ರೂಪಕಲಾ ಸೂಚಿಸಿದರು. ನಾಳೆಯಿಂದಲೇ ಈ ರಸ್ತೆ ದುರಸ್ತಿ ಮಾಡಿ ಡಾಂಬರು ಹಾಕುವುದಾಗಿ ಎಇಇ ಮಲ್ಲಿಕಾರ್ಜುನ್‌ ತಿಳಿಸಿದರು.

ಹಳೇ ಮದ್ರಾಸ್‌ ರಸ್ತೆ, ರಾಜ್ಯ ಹೆದ್ದಾರಿ: ಬೇತಮಂಗಲ ಬಸ್‌ ನಿಲ್ದಾಣದಿಂದ ಆಂಧ್ರಗಡಿಗೆ ಹಾದು ಹೋಗುವ ಹಳೇ ಮದ್ರಾಸ್‌ ರಸ್ತೆಯನ್ನು ಈ ಹಿಂದೆ ಬಳಸಲಾಗುತ್ತಿತ್ತು. ಆದರೆ, ಕಾಲಕ್ರಮೇಣ ಈ ರಸ್ತೆ ಬಿಟ್ಟು ಬದಲಿ ರಸ್ತೆ ಕೈಗೊಂಡಿದ್ದು, ಈ ಹಳೇಮದ್ರಾಸ್‌ ರಸ್ತೆ ಸಂಪೂರ್ಣವಾಗಿ ಒತ್ತುವರಿಯಾಗಿದೆಎಂದು ಹಲವರು ಆರೋಪಿಸಿದರು. ನಕಾಶೆಯಲ್ಲಿ ಇದೇ ರಸ್ತೆಯಲ್ಲೇ ರಾಜ್ಯ ಹೆದ್ದಾರಿ ಇದ್ದು, ಈ 300 ಮೀಟರ್‌ ರಸ್ತೆಯ ಮೂಲಕವೇ ಅಭಿವೃದ್ಧಿಪಡಿಸುವುದಾಗಿ ಅಧಿಕಾರಿಗಳು ತಿಳಿಸಿದರು.

ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ್‌, ತಾಪಂ ಮಾಜಿ ಸದಸ್ಯ ವೆಂಕಟರಾಮ್‌,ಮುಖಂಡರಾದ ಬಲಿಜಪಲ್ಲಿ ಕೃಷ್ಣಮೂರ್ತಿ, ರಾಯಸಂದ್ರ ಮುನಿರಾಮ್‌, ಇತರೆ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.