ಭಾರವಾಗುತ್ತಿದೆ ಈರುಳ್ಳಿ ಖರೀದಿ: ಗ್ರಾಹಕ ಅಳಲು


Team Udayavani, Dec 2, 2019, 5:06 PM IST

rn-tdy-1

ಮಾಗಡಿ: ಎಲ್ಲಾ ಮಾದರಿಯ ಅಡುಗೆ ತಯಾರಿಗೆ ಈರುಳ್ಳಿ ಬೇಕೇ ಬೇಕು. ಈರುಳ್ಳಿ ಇಲ್ಲದಿದ್ದರೆ ಯಾವುದೇ ಬಗೆಯ ಆಹಾರವೂ ಪರಿ ಪೂರ್ಣವಾಗದು. ಆದರೆ ಈರುಳ್ಳಿ ಖರೀದಿಸಲು ಗ್ರಾಹಕರು ಮಾರುಕಟ್ಟೆಗೆ ಹೋಗಿ ಈರುಳ್ಳಿ ಬೆಲೆ ಕೇಳಿದರೆ ಸಾಕು ಗ್ರಾಹಕರಲ್ಲಿ ಕಣ್ಣೀರು ಬಾರದೆ ಇರದು. ಈರುಳ್ಳಿ ಬೆಲೆ ಏರಿಕೆಯ ಗ್ರಾಹಕರಲ್ಲಿ ತಳಮಳ ಉಂಟುಮಾಡಿದ್ದು, ಪರಿಪೂರ್ಣ ಆಹಾರಕ್ಕಾಗಿ ಪರಿತಪಿಸುವಂತಾಗಿದೆ.

ಕಳೆದ ವಾರವಷ್ಟೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಕೆ.ಜಿಗೆ 40 ರಿಂದ 50 ರೂ. ಗಳ ಆಸುಪಾಸಿನಲ್ಲಿ ಇತ್ತು. ಈಗ ದಿಢೀರ್‌ ಈರುಳ್ಳಿ ಬೆಲೆ ಕೆ.ಜಿಗೆ 100 ರಿಂದ 150 ರೂಗೆ ದಾಟಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ ಎಂಬುದು ವರ್ತಕರ ಅಭಿಪ್ರಾಯವಾಗಿದೆ.

ಕಾರ್ತೀಕ ಮಾಸ ಮುಗಿದ ನಂತರ ರೈತರು ಬೆಳೆ ಅವರೆ, ಅಲಸಂದೆ, ತೊಗರಿಕಾಯಿ ಹಾಗೂ ಬಗೆ ಬಗೆಯತರಕಾರಿಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಇವೆಲ್ಲದಕ್ಕೂ ಈರುಳ್ಳಿ ಮಾತ್ರ ಗಗನಕ್ಕೇರಿದೆ. ಸದ್ಯ ಈರುಳ್ಳಿ ಬೆಲೆ ರೂ.100 ರಿಂದ 150ಕ್ಕೆ ದಾಟಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಬೆಲೆ 150 ರೂ ಆಗಿದ್ದು, ಸಾಧಾರಣ ಈರುಳ್ಳಿ 120 ರಿಂದ 130 ರೂಗೆ ದೊರಕುತ್ತಿದೆ. ಸಣ್ಣ ಈರುಳ್ಳಿ 100 ರೂ.ಗೆ ವ್ಯಾಪಾರಿ ಗಳು ಮಾರಾಟ ಮಾಡುತ್ತಿದ್ದಾರೆ. ಬರಗಾಲವಿದ್ದರೂ ಸಹ ಇತಿಹಾಸದಲ್ಲೇ ಇಷ್ಟೊಂದು  ಬೆಲೆ ಕಂಡಿರಲಿಲ್ಲ. ಎಂಬ ಮಾತು ವರ್ತಕರಲ್ಲೇ ಕೇಳಿಬಂದಿದೆ.

ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೇಳಿ ಗ್ರಾಹಕರಲ್ಲಿನಿಜಕ್ಕೂ ಕಣ್ಣೀರು ತರಿಸಿದೆ. ಕಳೆದ ತಿಂಗಳಿಗೆ ಹೊಲಿಸಿದರೆ ಮೂರು ಪಟ್ಟು ಬೆಲೆ ಏರಿಕೆಯಾಗಿದೆ. ದಿಢೀರ್‌ ಬೆಲೆ ಏರಿಕೆಯಿಂದ ಗ್ರಾಹಕರು ಗ್ರಾಂ ಲೆಕ್ಕದಲ್ಲಿ ಈರುಳ್ಳಿ ಖರೀಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಬೆಳ್ಳುಳ್ಳಿಯೂ ಸಹ ದುಬಾರಿಯಾಗಿದೆ. ಕೆ.ಜಿ.ಬೆಳ್ಳುಳ್ಳಿ 200 ರೂ ದಾಟಿದೆ. ಇದರ ಖರೀದಿಗೂ ಜನ ಬೆಸ್ತುಬಿದ್ದಾರೆ. ಈರುಳ್ಳಿ ಬೆಳ್ಳುಳ್ಳಿಗಾಗಿ ಗ್ರಾಹಕರ ಜೇಬು ಮಾತ್ರ ಸುಡುತ್ತಿದೆ.

ಬೇಡಿಕೆಗೆ ಅನುಗುಣವಾಗಿ ಈರುಳ್ಳಿ ಲಭ್ಯವಿಲ್ಲ: ಬೇಡಿಕೆಯಷ್ಟು ಈರುಳ್ಳಿ ಮಾರುಕಟ್ಟೆ ಬರುತ್ತಿಲ್ಲ. ದಿನೇದಿನೇ ಈರುಳ್ಳಿ ಚೀಲವೂ ಕಡಿಮೆಯಾಗುತ್ತಿದ್ದು, ಗ್ರಾಹಕರಿಗೆ ಅಗತ್ಯ ಈರುಳ್ಳಿ ಒದಗಿಸಲು ಸಾಧ್ಯ ವಾಗುತ್ತಿಲ್ಲ ಎಂಬ ಆತಂಕವೂ ವ್ಯಕ್ತವಾಗಿದೆ.

ಕೊಳೆತ ಈರುಳ್ಳಿ ಮಾರಾಟ: ಚಿಲ್ಲರೆ ಮಾರುಕಟ್ಟೆಯಲ್ಲಿ ಅತ್ಯಂತ ಕಳಪೆ ದರ್ಜೆಯ ಈರುಳ್ಳಿ ಕೆ.ಜಿಗೆ 80 ಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರುಕೆ.ಜಿ. ಈರುಳ್ಳಿ ಖರೀದಿಸಿ ಮನೆ ತಂದಿರೆ, ಕನಿಷ್ಠ ನಾಲ್ಕೈದು ಈರುಳ್ಳಿ ಕೊಳೆತಿರುತ್ತದೆ ಎಂಬುದು ಗ್ರಾಹಕರ ದೂರಾಗಿದೆ.

 

-ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.