ಎನ್ಆರ್ಸಿಗೆ 2024ರ ಗಡುವು ನೀಡಿದ ಅಮಿತ್ ಶಾ
Team Udayavani, Dec 2, 2019, 7:38 PM IST
ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ.
ಯಾವುದೇ ಧರ್ಮವನ್ನು ಲೆಕ್ಕಿಸದೆ ಎಲ್ಲ ನಾಗರಿಕರು ಈ ಪ್ರಕ್ರಿಯೆಯ ಭಾಗವಾಗಲಿ¨ªಾರೆ. ಮುಂಬರುವ 2024ರ ಚುನಾವಣೆಗಿಂತ ಮೊದಲು ದೇಶದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿದೆ. ಹೀಗಾಗಿ ರಾಷ್ಟ್ರಾದ್ಯಂತ ಎನ್ಆರ್ಸಿಯನ್ನು ವಿಸ್ತರಿಸಲಾಗುವುದು ಎಂದಿದ್ಧಾರೆ. ಎನ್ಆರ್ಸಿಗೆ ಯಾವುದೇ ನಿಬಂಧನೆಗಳಿಲ್ಲ, ಯಾವುದೇ ಧರ್ಮಗಳು ಬರುವುದಿಲ್ಲ. ಭಾರತದ ಎಲ್ಲ ನಾಗರಿಕರು, ಧರ್ಮವನ್ನು ಲೆಕ್ಕಿಸದೆ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುತ್ತಾರೆ.
ಕರಡು ಪಟ್ಟಿಯಲ್ಲಿ ಯಾರ ಹೆಸರು ಕಾಣಿಸಿಕೊಂಡಿಲ್ಲವೋ ಅವರು ನ್ಯಾಯಾಲಯದ ಮೊರೆ ಹೋಗುವ ಹಕ್ಕನ್ನು ಹೊಂದಿ¨ªಾರೆ ಎಂದು ಇದೇ ವೇಳೆ ಶಾ ಹೇಳಿದ್ದಾರೆ.
ಅಸ್ಸಾಂನಲ್ಲಿ ಎನ್ಆರ್ಸಿ ಕುರಿತು ಗೊಂದಲ ಉಂಟಾಗಿದ್ದು, ನವೀಕರಿಸಿದ ಅಂತಿಮ ಎನ್ಆರ್ಸಿ ಪಟ್ಟಿಯಲ್ಲಿ 19 ಲಕ್ಷಕ್ಕೂ ಅಧಿಕ ಅರ್ಜಿದಾರರನ್ನು ಕೈ ಬಿಡಲಾಗಿದೆ ಎಂದು ಆರೋಪಿಸಲಾಗಿದೆ.
ಅಕ್ರಮವಾಗಿ ವಲಸೆ ಬಂದವರನ್ನು ಪ್ರಮುಖವಾಗಿ ಮಾರ್ಚ್ 25, 1971ರಂದು ಬಾಂಗ್ಲಾದೇಶದಿಂದ ಅಸ್ಸಾಂಗೆ ಪ್ರವೇಶಿಸಿ, ಇಲ್ಲಿಯೇ ನೆಲೆಸಿದ್ದರು. ಅಂತಹವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಉದ್ದೇಶವನ್ನು ಈ ನೂತನ ಎನ್ಆರ್ಸಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ