ಒಡಕು ತರಲಿದೆಯೇ ಮರುಮೈತ್ರಿ ಕನಸು?

ತೆನೆ ಜತೆ "ಕೈ' ಜೋಡಿಸಿದ್ರೆ ಸಿದ್ದು ನಡೆ ಕೂಡ ನಿರ್ಣಾಯಕ

Team Udayavani, Dec 3, 2019, 4:11 AM IST

Congress JDS

ಬೆಂಗಳೂರು: ನೆರೆಯ ಮಹಾಮೈತ್ರಿ ಯಶಸ್ಸಿನ ಪರಿಣಾಮ ರಾಜ್ಯದಲ್ಲಿ “ಮರು ಮೈತ್ರಿ’ಯ ಜಪ  ಶುರುವಾಗಿದೆ. ಆದರೆ, ಇದರ ಒಗ್ಗೂಡುವಿಕೆಯು ಪ್ರಮುಖವಾಗಿ ಜೆಡಿಎಸ್‌ ಪಕ್ಷದಲ್ಲಿ ಒಡಕು ಉಂಟುಮಾಡುವ ಆತಂಕವನ್ನೂ ಸೃಷ್ಟಿಸಿದೆ.

ಬಿಜೆಪಿಯೇತರ ಸರ್ಕಾರ ರಚನೆಯು ಮಹಾರಾಷ್ಟ್ರದಲ್ಲಿ ಸಾಧ್ಯವಾದ ಬೆನ್ನಲ್ಲೇ ಅಂತಹುದೇ ಪ್ರಯತ್ನದ ಉಮೇದಿನಲ್ಲಿ ಕಾಂಗ್ರೆಸ್‌ನ ಒಂದು ಗುಂಪು ಮುಂದಾಗಿದೆ. ಇದಕ್ಕೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಪೂರಕವಾಗಿ ಸ್ಪಂದಿಸಿದ್ದಾರೆ. ಆದರೆ, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಒಲವು ಇದಕ್ಕೆ ವ್ಯತಿರಿಕ್ತ ವಾಗಿದೆ. “ಬಿಜೆಪಿ ಸರ್ಕಾರವನ್ನು ಬೀಳಲು ಬಿಡುವುದಿಲ್ಲ’ ಎಂಬ ಈ ಹಿಂದಿನ ಹೇಳಿಕೆ ಕೂಡ ಅವರ ಭಿನ್ನ ನಡೆಗೆ ಪುಷ್ಠಿ ನೀಡುತ್ತದೆ.

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಪತನದ ಸಂದರ್ಭದಲ್ಲಿ ಬಹುತೇಕ ಜೆಡಿಎಸ್‌ ಶಾಸಕರು ಕುಮಾರಸ್ವಾಮಿ ಅವರೊಂದಿಗೆ ಮುನಿಸಿಕೊಂಡಿದ್ದರು. ಸಾ.ರಾ.ಮಹೇಶ್‌, ಡಿ.ಸಿ.ತಮ್ಮಣ್ಣ ಸೇರಿದಂತೆ ಕೆಲವರ ಗುಂಪು ಕುಮಾರಸ್ವಾಮಿ ನಿಲುವಿನ ವಿರುದಟಛಿವಾಗಿತ್ತು ಎನ್ನಲಾಗಿದೆ. ಜತೆಗೆ, ಜೆಡಿಎಸ್‌ನ ವಿಧಾನಪರಿಷತ್‌ ಸದಸ್ಯರು ಪ್ರತ್ಯೇಕ ಸಭೆಗಳನ್ನು ನಡೆಸಿ ಮಾರಸ್ವಾಮಿ ವಿರುದಟಛಿ ಹೇಳಿಕೆಗಳನ್ನೂ ನೀಡಿದ್ದರು. ಅದರ ಹಿಂದೆ ಆ ಪಕ್ಷದ ವಿಧಾನಸಭೆ ಸದಸ್ಯರೂ ಇದ್ದರು ಎಂದು ಹೇಳಲಾಗಿದೆ.

ದೋಸ್ತಿ ಕಡಿದುಕೊಂಡವರೊಂದಿಗೇ ಮತ್ತೆ ಕೈಜೋಡಿಸಲು ದೇವೇಗೌಡರು ಮುಂದಾದರೆ, ಅತ್ತ ಪುತ್ರನೊಂದಿಗೆ ಮುನಿಸು ಕಟ್ಟಿಕೊಳ್ಳಬೇಕಾಗುತ್ತದೆ. ಅದರೊಂದಿಗೆ ಕುಮಾರಸ್ವಾಮಿ ಅವರ ಬೆಂಬಲಿಗ ಜೆಡಿಎಸ್‌ ಶಾಸಕರಲ್ಲೂ ಅಸಮಾಧಾನದ ಹೊಗೆಯಾಡುತ್ತದೆ. ಅಕಸ್ಮಾತ್‌ ಕುಮಾರಸ್ವಾಮಿ ಕಮಲದೊಂದಿಗೆ ಹೋದರೆ, ತಂದೆಯ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಇದರಿಂದ ದಳ ಒಡೆದ ಮನೆ ಆಗಲಿದೆ. ಆಗ, ಕಮಲದ ಜತೆ ಕೈಜೋಡಿಸಿದ ಪುತ್ರನನ್ನು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರಂತೆ ದಿಟ್ಟತನದಿಂದ ವಾಪಸ್‌ ಕರೆತರುವ ಪ್ರಯತ್ನ ಮಾಡುತ್ತಾರೆಯೇ? ಅಥವಾ 2006ರಲ್ಲಿ ನಡೆದುಕೊಂಡಂತೆ ಮೌನಕ್ಕೆ ಶರಣಾಗುತ್ತಾರೆಯೇ? ಎಂಬುದು ಕುತೂಹಲಕರ ಸಂಗತಿ.

“ಉಪ ಚುನಾವಣೆ ಘೋಷಣೆಯಾದ ದಿನದಿಂದಲೂ ಮತ್ತೆ ನಮ್ಮದೇ (ಜೆಡಿಎಸ್‌ನದ್ದು) ಪಕ್ಷ ಅಧಿಕಾರಕ್ಕೆ ಬರಲಿದೆ’ ಎಂದು ಮೈತ್ರಿ ಮುರಿದ ಕೆಲವೇ ದಿನಗಳ ನಂತರ ದೇವೇಗೌಡರು ಹೇಳಿದ್ದರು. ಈಗ ಅಂದರೆ ಮತದಾನಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ, ಯಾರೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂಬುದರ ಸುಳಿವು ನೀಡಿದ್ದಾರೆ. ಈ ಮಧ್ಯೆ, ಮಹಾಮೈತ್ರಿಯಲ್ಲಿ ಕಾಂಗ್ರೆಸ್‌ ನೇತೃತ್ವ ವಹಿಸಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅದೇ ಹುರುಪಿನಲ್ಲಿ ಉಪಚುನಾವಣೆಯಲ್ಲಿ ರಂಗಪ್ರವೇಶ ಮಾಡಿದ್ದಾರೆ. ಅಂದುಕೊಂಡಂತೆ ಫ‌ಲಿತಾಂಶ ಬಂದು ಮರುಮೈತ್ರಿಗೆ ಮುಂದಾದರೆ, ಈ ಬಾರಿ ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನ ಒಲಿಯುವ ನಿರೀಕ್ಷೆ ಇದೆ. ಡಿಸಿಎಂ ಸ್ಥಾನ ಜೆಡಿಎಸ್‌ಗೆ ಒಲಿಯಬಹುದು. ಆಗ, ಸಿದ್ದರಾಮಯ್ಯ ನಡೆ ನಿಗೂಢವಾಗಲಿದೆ.

“ದೇಶದಲ್ಲಿ ಈಗ ಬಿಜೆಪಿ ಸರ್ಕಾರ ಇರುವ ದೊಡ್ಡ ರಾಜ್ಯಗಳು ಬೆರಳೆಣಿಕೆಯಷ್ಟು ಮಾತ್ರ. ಅದರಲ್ಲಿ ಕರ್ನಾಟಕ ಕೂಡ ಒಂದಾಗಿದ್ದು, ದಕ್ಷಿಣ ಭಾರತದಲ್ಲಿ ಏಕೈಕ ರಾಜ್ಯವಾಗಿದೆ. ಮರುಮೈತ್ರಿಯಿಂದ ಬಿಜೆಪಿಯನ್ನು ಹೊರಗಿಡಲು ಸಾಧ್ಯವಾಗುವುದಾದರೆ, ಭಿನ್ನಮತಗಳನ್ನು ಬದಿಗೊತ್ತಿ ಒಗ್ಗಟ್ಟಿನ
ಮಂತ್ರ ಜಪಿಸಲು ಸಿದಟಛಿ. ಆದರೆ, ಈ ಎಲ್ಲ ನಡೆಯು ನ.9ರ ಫ‌ಲಿತಾಂಶವನ್ನು ಅವಲಂಬಿಸಿದೆ. ಹಾಗಾಗಿ, ಈಗ ನೀಡುವ ಯಾವುದೇ ಪ್ರತಿಕ್ರಿಯೆಗಳು ನಿರ್ಣಾಯಕ ಆಗುವುದಿಲ್ಲ’ ಎಂದು ಜೆಡಿಎಸ್‌ ನಾಯಕರೊಬ್ಬರು ಹೇಳುತ್ತಾರೆ.

ಸಿದ್ದು ನಡೆ ನಿರ್ಣಾಯಕ
ಕಾಂಗ್ರೆಸ್‌ನಲ್ಲಿ ಸಹ ಆಂತರಿಕ ಭಿನ್ನಾಭಿಪ್ರಾಯಗಳಿದ್ದು, ಅಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಏಕಾಂಗಿ ಹೋರಾಟ ನಡೆಸಿದ್ದಾರೆ. (ಈಗಷ್ಟೇ ಉಳಿದ ನಾಯಕರು ಕಾಣಿಸಿಕೊಂಡಿದ್ದಾರೆ). ಹೀಗಿರುವಾಗ ಒಂದು ವೇಳೆ ಇವೆರಡೂ ಪಕ್ಷಗಳು ಮರುಮೈತ್ರಿಗೆ ಮುಂದಾದರೆ, ಸಿದ್ದರಾಮಯ್ಯ ನಡೆ ಕೂಡ ನಿರ್ಣಾಯಕವಾಗಲಿದೆ. ಈ ನಿಟ್ಟಿನಲ್ಲಿ ಒಗ್ಗೂಡುವಿಕೆ ಸಣ್ಣ ಕಂಪನ ಸೃಷ್ಟಿಸುವ ಸಾಧ್ಯತೆಯೂ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

● ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.