ಉಳ್ಳಾಲ ದರ್ಗಾ ಆಡಳಿತಾಧಿಕಾರಿ ನೇಮಕ ವಿಚಾರ; ಮುಂದುವರಿದ ವಿರೋಧ


Team Udayavani, Dec 3, 2019, 12:07 AM IST

ullala-darga

ಉಳ್ಳಾಲ: ಇಲ್ಲಿನ ಪ್ರಸಿದ್ಧ ಸಯ್ಯದ್‌ ಮದನಿ ದರ್ಗಾಕ್ಕೆ ರಾಜ್ಯ
ಸರಕಾರವು ನೇಮಿಸಿರುವ ಆಡಳಿತಾಧಿ ಕಾರಿಯು ಆಡಳಿತ ವಹಿಸಿಕೊಳ್ಳಲು ಆಗಮಿಸುವ ಮಾಹಿತಿ ಲಭಿಸಿ ಸರಕಾರದ ಈ ನಡೆಯನ್ನು ವಿರೋಧಿಸುತ್ತಿರುವ ಸ್ಥಳೀಯರು ದರ್ಗಾದ ಮುಖ್ಯ ದ್ವಾರದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಆದರೆ ಅಧಿಕಾರಿ ಸೋಮವಾರವೂ ಆಗಮಿಸಿಲ್ಲ.
ಸೋಮವಾರ ನೂತನ ಆಡಳಿತಾಧಿ ಕಾರಿ ಅಧಿಕಾರ ಸ್ವೀಕರಿಸಲು ಆಗಮಿ ಸುವ ನಿರೀಕ್ಷೆಯಿತ್ತು. ಬಿಗುವಿನ ವಾತಾವರಣ ಇದ್ದುದರಿಂದ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ರಾಜ್ಯ ಸರಕಾರ ದರ್ಗಾಕ್ಕೆ ನಿವೃತ್ತ ಅಧಿಕಾರಿ ಇಬ್ರಾಹಿಂ ಕೂರ್ನಡ್ಕ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿದ್ದು, ನ. 20ರಂದು ಅವರು ದರ್ಗಾಕ್ಕೆ ಆಗಮಿಸಿದಾಗ ಸ್ಥಳೀಯರು ಹಿಂದಕ್ಕೆ ಕಳುಹಿಸಿದ್ದರು. ಈ ಸಂಬಂಧ ದರ್ಗಾ ಅಧ್ಯಕ್ಷರು ಕಾನೂನು ನೆರವು ಪಡೆದ ಸಂದರ್ಭದಲ್ಲೇ ಸಹಾಯಕ ಆಯುಕ್ತರು ದರ್ಗಾ ಪದಾಧಿಕಾರಿಗಳ ಸಭೆ ನಡೆಸಿ ಡಿ. 2ರಂದು ಅಧಿಕಾರ ಬಿಟ್ಟುಕೊಡುವಂತೆ ಸೂಚಿಸಿದ್ದರು. ಈ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆಯೇ ಆಕ್ರೋಶಿತರಾದ ಸ್ಥಳೀಯರು ಒಂದು ವಾರದಿಂದ ದರ್ಗಾದ ಎಲ್ಲ ಗೇಟುಗಳನ್ನು ಮುಚ್ಚಿ ಮುಖ್ಯದ್ವಾರದ ಮುಂಭಾಗದಲ್ಲಿ ಆಡಳಿತಾಧಿಕಾರಿ ಯನ್ನು ತಡೆಯಲು ಕಾಯುತ್ತಿದ್ದಾರೆ.

ಚಾರಿಟೆಬಲ್‌ ಟ್ರಸ್ಟ್‌ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ ಮಾತನಾಡಿ, ದರ್ಗಾ ಸಮಿತಿಗೆ ಜನರೇ ಪ್ರತಿನಿಧಿ ಗಳನ್ನು ಆಯ್ಕೆ ಮಾಡಿದ್ದರೂ ಸರಕಾರವು
ಆಡಳಿತಾಧಿ ಕಾರಿಯನ್ನು ನೇಮಿಸಿರುವುದರಿಂದ ಉಳ್ಳಾಲದ ಸರ್ವ ಧರ್ಮೀಯರು ಬೇಸರಗೊಂಡಿದ್ದಾರೆ. ದರ್ಗಾ ಆಡಳಿತ ಬಿಟ್ಟುಕೊಡಲು ಜಿಲ್ಲಾಧಿಕಾರಿ ಸೂಚಿಸಿದ್ದು, ಅಧಿಕಾರಿ ಬಂದರೆ ಅವರಿಗೆ ತೊಂದರೆ ಉಂಟು ಮಾಡಬೇಡಿ. ಅವರು ಬಂದಾಗ ಆಡಳಿತ ವಹಿಸಿಕೊಳ್ಳಲು ಅವಕಾಶ ನೀಡದೆ ಶಾಂತಿಯಿಂದ ಹಿಂದಕ್ಕೆ ಕಳುಹಿಸೋಣ ಎಂದರು.

ಭರವಸೆ ಕಾರ್ಯರೂಪಕ್ಕೆ ಬರಲಿ
ಸದಸ್ಯ ಫಾರೂಕ್‌ ಉಳ್ಳಾಲ ಮಾತ ನಾಡಿ, ಮೂರೂವರೆ ವರ್ಷಗಳಲ್ಲಿ ಒಂದೇ ಒಂದು ಕೋಮು ಗಲಭೆ ಉಳ್ಳಾಲದಲ್ಲಿ ನಡೆದಿಲ್ಲ ಎನ್ನುವುದನ್ನು ಪೊಲೀಸ್‌ ಇಲಾಖೆಯ ದಾಖಲೆಗಳು ಹೇಳುತ್ತಿವೆ. ಉಳ್ಳಾಲದ ಜನರ ಭಾವನೆ
ಗಳನ್ನು ಸಂಸದರು, ಉಸ್ತುವಾರಿ ಸಚಿವರು, ಶಾಸಕರು ಅರ್ಥಮಾಡಿಕೊಂ ಡಿದ್ದಾರೆಂಬ ವಿಶ್ವಾಸವಿದೆ. ಅವರು ನೀಡಿರುವ ಭರವಸೆ ಕಾರ್ಯರೂಪಕ್ಕೆ ಬರಬೇಕು, ಅಧ್ಯಕ್ಷ ಅಬ್ದುಲ್‌ ರಶೀದ್‌ ಮತ್ತು ಹಾಲಿ ಸಮಿತಿ ಉರೂಸ್‌ವರೆಗೆ ಮುಂದುವರಿಯಬೇಕು ಎಂದರು.

ಸ್ಥಳದಲ್ಲಿ ಉಳ್ಳಾಲ ಪೊಲೀಸರು, ಕೆಎಸ್‌ಆರ್‌ಪಿ ಪೊಲೀಸ್‌ ಪಡೆ ಭದ್ರತೆ ಯನ್ನು ನಿಯೋಜಿಸಲಾಗಿದೆ.

ಮದನಿ ಅವರಿಂದಲೇ ದರ್ಗಾ ರಕ್ಷಣೆ
ದರ್ಗಾ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್‌ ರಶೀದ್‌ ಪ್ರತಿಕ್ರಿಯಿಸಿ, ದರ್ಗಾಕ್ಕೆ
ಚುನಾಯಿತ ಪ್ರತಿನಿಧಿಗಳಿದ್ದರೂ ರಾಜ್ಯ ಸರಕಾರದ ಆದೇಶದಂತೆ ವಕ್ಫ್ ಸಮಿತಿ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸುವಂತೆ ಸೂಚಿಸಿದೆ. ಈ ವಿಚಾರದಲ್ಲಿ ಕಾನೂನು ನೆರವು ಪಡೆಯಲಾಗುತ್ತಿದೆ. ಇದೇವೇಳೆ ಆಡಳಿತಾಧಿಕಾರಿ ಮಕದ
ಬಗ್ಗೆ ಅರಿತ ಭಕ್ತರು ಕೆಲವು ದಿನಗಳಿಂದ ದರ್ಗಾದ ಮುಂಭಾಗದಲ್ಲಿ ಸೇರಿದ್ದು, ಅಧಿಕಾರಿ ಕೈಗೆ ದರ್ಗಾದ ಆಡಳಿತ ಕೊಡುವುದಿಲ್ಲ ಎನ್ನುವ ಪಣ ತೊಟ್ಟಿದ್ದಾರೆ. ದರ್ಗಾ ರಕ್ಷಣೆಯನ್ನು ಸಯ್ಯದ್‌ ಮದನಿ ತಂಙಳ್‌ ಅವರೇ ಮಾಡುತ್ತಾರೆ ಎಂಬ ನಂಬಿಕೆಯಿಂದ ಸೋಮವಾರ ಗೇಟು ತೆರೆದು, ಸೇರಿದ್ದ ಜನರನ್ನು ಹಿಂದಕ್ಕೆ
ಕಳುಹಿಸಲಾಗಿದೆ. ಸೋಮವಾರದವರೆಗೆ ಆಡಳಿತಾಧಿ ಕಾರಿ ಬಂದಿಲ್ಲ ಎಂದರು.

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.