ಖರ್ಗೆ ಸಿಎಂ: ಸಿದ್ದು ಮನವೊಲಿಕೆಗೆ ಕಸರತ್ತು


Team Udayavani, Dec 4, 2019, 6:01 AM IST

Siddu 1

ಬೆಂಗಳೂರು: ಉಪಚುನಾವಣೆ ಫ‌ಲಿತಾಂಶದ ಬಳಿಕ ಬಿಜೆಪಿಗೆ ಸರ್ಕಾರ ನಡೆಸುವುದು ಕಷ್ಟವಾದರೆ, ಕೈ-ತೆನೆ ಮರುಮೈತ್ರಿ ಮಾಡಿಕೊಂಡು ಎಂ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡಲು ರಮೇಶ್‌ಕುಮಾರ್‌ ಪೌರೋಹಿತ್ಯ ವಹಿಸಲು ಸಿದ್ಧರಾಗಿದ್ದಾರೆಯೇ? ಅಂತಹ ಸಂದರ್ಭದಲ್ಲಿ ಖರ್ಗೆ ಅವರ ಹೆಸರನ್ನು ತಪ್ಪಿಸದಂತೆ ಮಾಡಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನವೊಲಿಸಲು ಅವರ ಆಪ್ತ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರಿಗೆ ಹೊಣೆ ನೀಡಲಾಗಿದೆ ಎಂದು ಹೇಳಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹಮತ ಇದೆ. ಒಂದು
ವೇಳೆ ಆ ಪರಿಸ್ಥಿತಿ ಉದ್ಭವವಾದರೆ, ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷಗಿರಿ ವಹಿಸಿಕೊಂಡು ಪಕ್ಷ ಮುನ್ನಡೆಸಲಿ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ಬಂದರೆ ತಪ್ಪಿಸುವುದು ಬೇಡ. ಈ ಬಗ್ಗೆ ಮಾತನಾಡಿ ಎಂದು ರಮೇಶ್‌ ಕುಮಾರ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಮೂಲಕ ಜೆಡಿ ಎಸ್‌ ಒತ್ತಡ ಹೇರುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದಾದರೆ ದೇವೇಗೌಡರುಒಪ್ಪುವುದಿಲ್ಲ. ಎಚ್‌.ಡಿ.ಕುಮಾರಸ್ವಾಮಿ
ಬಿಜೆಪಿಯತ್ತ ಒಲವು ತೋರುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಎಂದಾದರೆ ಕುಮಾರಸ್ವಾಮಿಯವರು ಸಹ
ವಿರೋಧ ವ್ಯಕ್ತಪಡಿಸಲಾರರು ಎಂದು ವಿಶ್ಲೇಷಿಸಲಾಗಿದೆ. ಕೆ.ಆರ್‌.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮುಗಿಸುವವರೆಗೂ ಸಿದ್ದರಾಮಯ್ಯ
ನವರು ಪ್ರಚಾರ ವಾಹನ ಏರದ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಕಾಂಗ್ರೆಸ್‌ ಹೈಕಮಾಂಡ್‌, ಇದೇ ರೀತಿ
ಮುಂದುವರಿದರೆ ಕಷ್ಟವಾಗುತ್ತದೆ ಎಂದು ರಮೇಶ್‌ ಕುಮಾರ್‌ಗೆ ತಿಳಿಸಿತ್ತು ಎನ್ನಲಾಗಿದೆ.

ಇದಾದ ನಂತರವೇ ರಮೇಶ್‌ ಕುಮಾರ್‌ ಅವರು ಚಿಕ್ಕಬಳ್ಳಾಪುರದ ಪ್ರಚಾರ ಸಭೆಗೆ ಸಿದ್ದರಾಮಯ್ಯ
ಹಾಗೂ ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಒಂದೇ ವಾಹನ ಏರಿ ಉಪ ಚುನಾವಣೆಯಲ್ಲಿ ಮೊದಲ
ಬಾರಿಗೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಂಡರು. ಇಬ್ಬರೂ ನಾಯಕರ ಪ್ರಚಾರದ
ಸಮಯ ಬೇರೆ ಇದ್ದರೂ, ರಮೇಶ್‌ ಕುಮಾರ್‌ ಹಾಗೂ ಮಾಜಿ ಸಚಿವ ಕೃಷ್ಣ ಬೈರೇಗೌಡ ಇಬ್ಬರೂ
ಒಂದೇ ವಾಹನದಲ್ಲಿ ಪ್ರಚಾರ ಮಾಡುವಂತೆ ಮನವೊಲಿಸಿ ಯಶಸ್ವಿಯಾದರು. ಇದಾದ ನಂತರ
ಶಿವಾಜಿನಗರದಲ್ಲೂ ಒಂದೇ ವೇದಿಕೆಯಲ್ಲಿ ಪ್ರಚಾರ ಮಾಡಿದರು ಎಂದು ಹೇಳಲಾಗಿದೆ.

ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರ ಮಾತನ್ನು ಸಿದ್ದರಾಮಯ್ಯ ಕೇಳುತ್ತಾರೆ. ಜತೆಗೆ, ಕೃಷ್ಣ
ಬೈರೇಗೌಡರ ಬಗ್ಗೆಯೂ ಸಿದ್ದರಾಮಯ್ಯ ಅವರಿಗೆ ಪ್ರೀತಿ. ಹೀಗಾಗಿ, ಇಬ್ಬರೂ ಮಲ್ಲಿಕಾರ್ಜುನ ಖರ್ಗೆ
ಅವರ ಜತೆಯೇ ಪ್ರಚಾರ ಮಾಡಲು ಮನವೊಲಿಸಿದರು ಎಂದು ಮೂಲಗಳು ತಿಳಿಸಿವೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬರುವ ಅವಕಾಶ ಇದ್ದರೆ ಅದಕ್ಕೆ ಅಡ್ಡಿ
ಮಾಡುವುದು ಬೇಡ. ಅವರಿಗೆ ಅವಕಾಶ ಕೊಡುವಂತೆ ನೀವೇ ಮುಂದೆ ನಿಂತು ಮನವಿ ಮಾಡಿ. ಆಗ ನಿಮ್ಮ ವರ್ಚಸ್ಸು ಬೆಳೆಯುತ್ತದೆ. ಅಹಿಂದ ನಾಯಕರಾಗಿರುವ ನೀವು ಮಲ್ಲಿಕಾರ್ಜುನ ಖರ್ಗೆ ಅವರಿಗೆ
ಮುಖ್ಯಮಂತ್ರಿಯಾಗಲು ಸಹಕಾರ ನೀಡಿದರೆ ಉತ್ತಮ ಸಂದೇಶ ರವಾನೆಯಾಗುತ್ತದೆ. ಬಿಜೆಪಿಯನ್ನು
ದೂರ ಇಟ್ಟಂತೆಯೂ ಆಗುತ್ತದೆ ಎಂದು ರಮೇಶ್‌ ಕುಮಾರ್‌ ಸಹ ಸಿದ್ದರಾಮಯ್ಯ ಅವರಿಗೆ ಆಪ್ತವಾಗಿ
ಹೇಳಿದ್ದಾರೆ ಎಂದು ಹೇಳಲಾಗಿದೆ.

ಡಿ.5ರಂದು ಮತದಾನ ಮುಗಿದ ನಂತರ ಹೈಕಮಾಂಡ್‌ ಕಾಂಗ್ರೆಸ್‌ ನಾಯಕರಿಗೆ ಬುಲಾವ್‌
ನೀಡಿದೆ. ಇದರ ಬೆನ್ನಿಗೇ ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡರು ದೆಹಲಿಗೆ ಹೋಗಿ ಕಾಂಗ್ರೆಸ್‌
ಮುಖಂಡರ ಜತೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

● ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.