ನಾಯಕತ್ವದ ಅಗ್ನಿಪರೀಕ್ಷೆ

ಮತದಾನಕ್ಕೆ 24 ಗಂಟೆ ಮೊದಲು ನಾನಾ ಲೆಕ್ಕಾಚಾರ

Team Udayavani, Dec 4, 2019, 6:30 AM IST

rt-47

ಬೆಂಗಳೂರು: ಕಾಂಗ್ರೆಸ್‌- ಜೆಡಿಎಸ್‌ ಸರಕಾರ ಪತನಗೊಳಿಸುವ ಸಲುವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ನಾಲ್ಕು ತಿಂಗಳ ಕಾಲ ಹೋರಾಟ ನಡೆಸಿ ಸ್ಪರ್ಧೆಗೆ ಅವಕಾಶ ಪಡೆದ ಅನರ್ಹರು ಎದುರಿಸುತ್ತಿರುವ ಉಪ ಚುನಾವಣೆ ಈಗ ಮೂರೂ ಪಕ್ಷಗಳ ನಾಯಕತ್ವದ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ.

ಮತದಾನಕ್ಕೆ 24 ಗಂಟೆಗಳು ಬಾಕಿ ಇದ್ದು ಮೂರೂ ಪಕ್ಷಗಳ ಕಾರ್ಯ ತಂತ್ರ, ರಣತಂತ್ರ, ಅಭ್ಯರ್ಥಿ ಗಳ ನಾಮಬಲ, ಪಕ್ಷದ ವರ್ಚಸ್ಸು, ಜಾತಿ-ಸಮುದಾಯಗಳ ಸಮೀ ಕರಣ ಎಲ್ಲದಕ್ಕೂ ಗುರುವಾರ ಮತ ದಾರ ನೀಡುವ ಉತ್ತರವೇ ಅಂತಿಮ ವಾಗಲಿದೆ. ಮಂಗಳವಾರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ.

“ಅನರ್ಹತೆ’ ಪ್ರಮುಖ ವಿಷಯ ವಾಗಿದ್ದ ಈ ಉಪ ಚುನಾವಣೆಯು ಮಹಾರಾಷ್ಟ್ರದ ನಾಟಕೀಯ ರಾಜಕೀಯ ವಿದ್ಯಮಾನಗಳಿಂದಲೂ ಪ್ರಭಾವಿತವಾಗಿದ್ದು, ಈಗ ಯಾರ ಜತೆ ಮೈತ್ರಿ, ಯಾರ ನಾಯಕತ್ವ ಎಂಬ ರಾಜ ಕೀಯ ಚರ್ಚೆಯವರೆಗೆ ಬಂದು ತಲುಪಿದೆ.

ಉಪ ಚುನಾವಣೆ ಕಣ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಅವರ ಪ್ರತಿಷ್ಠೆಯ ಜತೆಗೆ ಅಸ್ತಿತ್ವದ ಪ್ರಶ್ನೆಯೂ ಆಗಿದೆ. ಜತೆಗೆ, ಒಂದು ಸರಕಾರ ಪತನಗೊಳಿಸಿ ಹೊಸ ಸರಕಾರ ಪ್ರತಿಷ್ಠಾಪಿಸಿದ ಅನರ್ಹರು ಈಗ ಬಿಜೆಪಿ ಸರಕಾರದ ಭವಿಷ್ಯ ವನ್ನೂ ನಿರ್ಧರಿಸಲಿದ್ದಾರೆ.

ಉಪ ಚುನಾವಣೆ ಘೋಷಣೆ ಯಾದ ದಿನಕ್ಕೂ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಮಂಗಳ ವಾರಕ್ಕೂ ರಾಜಕೀಯ ಪರಿಸ್ಥಿತಿ ಸಾಕಷ್ಟು ಬದಲಾಗಿದೆ. ಆರೋಪ-ಪ್ರತ್ಯಾರೋಪ, ವಾಕ್ಸಮರ, ವೈಯಕ್ತಿಕ ಟೀಕೆ-ನಿಂದನೆ, ಜಾತಿ, ಅನರ್ಹತೆ, ಸಾಮೂಹಿಕ ರಾಜೀನಾಮೆ, ಸೇರ್ಪಡೆ, ಒಪ್ಪಂದ, ಒಳ ಒಪ್ಪಂದ ಎಲ್ಲದಕ್ಕೂ ಸಾಕ್ಷಿಯಾಗಿ ಮತದಾರನ ತೀರ್ಮಾನದವರೆಗೆ ಬಂದು ನಿಂತಿದೆ.

ಮತದಾನಕ್ಕೆ ನಾಲ್ಕೈದು ದಿನಗಳು ಇರುವಾಗ ಚರ್ಚೆಗೆ ಬಂದ ಮರು ಮೈತ್ರಿ ಜೋರು ಸದ್ದು ಮಾಡುತ್ತಿದೆ. ಅದಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಾನಾ ರೀತಿಯ ವಿಶ್ಲೇಷಣೆಗಳೂ ನಡೆಯುತ್ತಿವೆ.

15 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿಗೆ 6 ಸ್ಥಾನಕ್ಕಿಂತ ಕಡಿಮೆ ಬಂದರೆ ಸರಕಾರ ಅಲ್ಪಮತಕ್ಕೆ ಕುಸಿಯುತ್ತದೆ. ಆಗ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮರು ಮೈತ್ರಿ ಮಾಡಿಕೊಳ್ಳಬಹುದು. ಇಲ್ಲವೇ ಬಿಜೆಪಿ ಸರಕಾರ ಉಳಿಸಿಕೊಳ್ಳಲು ಜೆಡಿಎಸ್‌ ನೆರವು ಬಯಸಬಹುದು ಎಂಬೆಲ್ಲ ಮಾತುಗಳು ಕೇಳಿಬರುತ್ತಿವೆ. ಜತೆಗೆ ಕಾಂಗ್ರೆಸ್‌-ಜೆಡಿಎಸ್‌ ಸರಕಾರ ವಾದರೆ ಯಾರು ಮುಖ್ಯ ಮಂತ್ರಿ, ಬಿಜೆಪಿ-ಜೆಡಿಎಸ್‌ ಸರಕಾರ ರಚನೆ ಯಾದರೆ ಯಾರು ಮುಖ್ಯ ಮಂತ್ರಿ ಎಂಬ ಹಂತಕ್ಕೂ ಹೋಗಿದೆ.

ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಮೈತ್ರಿ ಪ್ರಸ್ತಾಪ ಇಲ್ಲ ಎಂದು ಹೇಳುತ್ತಾ ಒಳಗೊಳಗೇ ತಮ್ಮದೇ ಆದ ಲೆಕ್ಕಾಚಾರಗಳನ್ನು ಹಾಕಿಕೊಂಡಿದ್ದಾರೆ. ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿಯವರು ಮುಂದಿನ ರಾಜಕೀಯ ಭವಿಷ್ಯವು ಉಪ ಚುನಾವಣೆ ಮೇಲೆಯೇ ನಿಂತಿದೆ. ಚುನಾವಣೆಯ ಫ‌ಲಿತಾಂಶ ಡಿ. 9ರಂದು ಪ್ರಕಟವಾಗಲಿದೆ.

ಬದಲಾಗಿದೆ ಖದರ್‌
ಮಹಾರಾಷ್ಟ್ರದಲ್ಲಿ ಶಿವಸೇನೆ- ಎನ್‌ಸಿಪಿ-ಕಾಂಗ್ರೆಸ್‌ ಜತೆಗೂಡಿ ಸರಕಾರ ರಚಿಸಿದ್ದು, ಬಿಜೆಪಿ ಸರಕಾರ 80 ಗಂಟೆಗಳಲ್ಲಿ ಪತನಗೊಂಡ ಬೆಳವಣಿಗೆ ಅನಂತರ ರಾಜ್ಯ ರಾಜಕಾರಣ, ಉಪ ಚುನಾವಣೆ “ಖದರ್‌’ ಬದಲಾಗಿದೆ. ಕಾಂಗ್ರೆಸ್‌ ಪ್ರಚಾರದಿಂದ ದೂರ ಉಳಿದಿದ್ದ ಹಿರಿಯರೆಲ್ಲ ಪ್ರಚಾರದಲ್ಲಿ ತೊಡಗಿದರು. ಕೆಲವೆಡೆ ಒಳ ಒಪ್ಪಂದದಿಂದ ಕಾಂಗ್ರೆಸ್‌-ಜೆಡಿಎಸ್‌ ಹೆಚ್ಚು ಸೀಟು ಗೆಲ್ಲಲಿದೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಬಿಜೆಪಿಯಲ್ಲೂ ತಳಮಳ ಸೃಷ್ಟಿಯಾಗಿ ಕಾರ್ಯತಂತ್ರ ಬದಲಿಸಿಕೊಂಡಿದೆ. ಜೆಡಿಎಸ್‌ನಲ್ಲೂ ಕಿಂಗ್‌ ಮೇಕರ್‌ ಆಗುವ ಆಶಾಭಾವ ಮತ್ತೆ ಮೂಡಿದೆ.

ಟಾಪ್ ನ್ಯೂಸ್

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.