ನಮ್ಮನೆ ಮಳೆ ನೀರು ಕೊಯ್ಲು ರಿಯಲ್ಲಾ?


Team Udayavani, Dec 4, 2019, 10:05 AM IST

bng-tdy-1

ಸಾಂಧರ್ಬಿಕ ಚಿತ್ರ

ಬೆಂಗಳೂರು: ನೀವು ದಂಡದಿಂದ ತಪ್ಪಿಸಿಕೊಳ್ಳಲು ನೆಪಮಾತ್ರಕ್ಕೆ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಂಡಿದ್ದೀರಾ? ಹಾಗಿದ್ದರೆ, ಸದ್ಯದಲ್ಲಿಯೇ ನಿಮ್ಮ ಕೈ ಸೇರಲಿದೆ ನೋಟಿಸ್‌, ಬೀಳಲಿದೆ ಬಾರಿ ದಂಡ! ಹೌದು, ಬೆಂಗಳೂರು ಜಲಮಂಡಳಿಯು ಮಳೆನೀರು ಕೊಯ್ಲು ಅನುಷ್ಠಾನದ ಕುರಿತು ರಿಯಾಲಿಟಿ ಚೆಕ್‌ಮಾಡಲು ಮುಂದಾಗಿದೆ.

ಇದಕ್ಕಾಗಿ ಒಂದು ತಂಡವನ್ನು ಸಿದ್ಧಪಡಿಸುತ್ತಿದ್ದು, ಆ ತಂಡದ ಸದಸ್ಯರು ಈಗಾಗಲೇ ನಗರದಲ್ಲಿ ಮಳೆ ನೀರು ಕೊಯ್ಲು ಅಳವಡಿಕೆಯಾಗಿರುವ ಎಲ್ಲಾ 1.2 ಲಕ್ಷ ಕಟ್ಟಡಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಪ್ರಮುಖವಾಗಿ ಕಾಗದ ಪತ್ರದಲ್ಲಿ ದಾಖಲಾಗಿರುವಂತೆ ಆ ಕಟ್ಟದ ಮಾಲೀಕರು ನಿಜಕ್ಕೂ ಮಳೆನೀರು ಕೊಯ್ಲು ವಿಧಾನ ಅಳವಡಿಸಿ ಕೊಂಡಿದ್ದಾರಾಸಂಗ್ರಹ ವಾಗುವ ನೀರನ್ನು ಮರುಬಳಕೆ ಮಾಡುತ್ತಿದ್ದಾಯೇ? ವಿಧಾನವು ನಿಯಮ ಬದ್ಧವಾಗಿದೆಯೇ? ಎಂಬಿತ್ಯಾದಿ ಪರೀಕ್ಷೆಗಳನ್ನು ಮಾಡಲಿದ್ದಾರೆ. ಒಂದು ವೇಳೆ ದಂಡದಿಂದ ತಪ್ಪಿಸಿಕೊಳ್ಳಲು ನೆಪಮಾತ್ರಕ್ಕೆ ಅಳವಡಿಸಿಕೊಂಡಿರುವುದು ದೃಢವಾದರೆ ಸ್ಥಳದಲ್ಲೇ ನೋಟಿಸ್‌ ನೀಡುವ ಜತೆಗೆ ಇಂತಿಷ್ಟು ತಿಂಗಳ ದಂಡವನ್ನೂ ವಿಧಿಸಲಿದ್ದಾರೆ.

ನಗರದಲ್ಲಿ ಕಾವೇರಿ ನೀರಿನ ಅವಲಂಬನೆ ಕಡಿಮೆಮಾಡಿ ಮಳೆನೀರು ಸಂಗ್ರಹ ಹಾಗೂ ಬಳಕೆ ಹೆಚ್ಚಿಸಲು 40ಗಿ60 ವಿಸ್ತೀರ್ಣ ಹಾಗೂ ಅದಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ನಿರ್ಮಾಣವಾಗುವ ಎಲ್ಲ ಕಟ್ಟಡಗಳಿಗೆ ದಶಕದ ಹಿಂದೆಯೇ ಸರ್ಕಾರ ಮಳೆನೀರು ಕೊಯ್ಲು ವಿಧಾನವನ್ನು ಕಡ್ಡಾಯ ಮಾಡಿದೆ. ಈ ವಿಧಾನದಲ್ಲಿ ಸಂಗ್ರಹವಾದ ನೀರನ್ನು ಉತ್ತಮ ಟ್ಯಾಂಕ್‌ ಅಥವಾ ಸಂಪ್‌ನಲ್ಲಿ ಸಂಗ್ರಹಿಸಿ ನಿತ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವುದು ಅಥವಾ ಇಂಗುಗುಂಡಿಗೆ ಹರಿಸುವುದು ಕಡ್ಡಾಯ.

ನಗರದಲ್ಲಿ 1.2 ಲಕ್ಷ ಕಟ್ಟಡಗಳಿಗೆ ಈ ಪದ್ಧತಿ ಅಳವಡಿಸಿದ್ದು, 70 ಸಾವಿರ ಕಟ್ಟಡ ಮಾಲೀಕರು ಇಂದಿಗೂ ದಂಡ ಕಟ್ಟುತ್ತಿದ್ದಾರೆ.ಆದರೆ, ಮಳೆ ನೀರು ಕೊಯ್ಲು ಪದ್ಧತಿ ಹೊಂದಿರುವ ಬಹುತೇಕ ಕಟ್ಟಡಗಳ ಮಾಲೀಕರು ಆರಂಭದಲ್ಲಿ ಜಲ ಮಂಡಳಿ ನೀರಿನ ಸಂಪರ್ಕಕ್ಕಾಗಿ ಅಳವಡಿಸಿಕೊಂಡು ನಂತರ ತೆರವು ಮಾಡಿದ್ದಾರೆ. ಜಲಮಂಡಳಿ ಹಾಕುವ ನೀರಿನ ಮಾಸಿಕ ಶುಲ್ಕರ ಶೇ.50ರಷ್ಟು (ವಸತಿ) ಹಾಗೂ 100 ರಷ್ಟು (ವಸತಿಯೇತರ) ದಂಡದಿಂದ ತಪ್ಪಿಸಿಕೊಳ್ಳಲು ನೆಪಮಾತ್ರಕ್ಕೆ ಅಳವಡಿಸಕೊಂಡು ಬಳಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಜತೆಗೆನಗರದಲ್ಲಿ 1.2 ಲಕ್ಷ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಅಳವಡಿಕೆಯಾಗಿದ್ದರೂ ಜಲಮಂಡಳಿಗೆ ನೀರಿನ ಬೇಡಿಕೆ ಮಾತ್ರ ಎಂದಿಗೂ ಕಡಿಮೆಯಾಗಿಲ್ಲ. ಹೀಗಾಗಿ, ಮಳೆನೀರು ಕೊಯ್ಲು ಯಶಸ್ವಿ ಅನುಷ್ಠಾನವಾಗಿದೆಯೋ ಇಲ್ಲವೋ ಎಂಬ ಕುರಿತು ಮನೆ ಮನೆಗೆ ತೆರಳಿ ವಾಸ್ತವತೆ ಪರೀಕ್ಷಿಸಲು ಜಲಮಂಡಳಿಯು ಮುಂದಾಗಿದೆ.

ಒಂದು ಕಟ್ಟಡ ಪರಿಶೀಲನೆಗೆ 250 ರೂ. ವೆಚ್ಚ: ಮಳೆನೀರು ಕೊಯ್ಲು ವಿಧಾನ ಕುರಿತು ಈಗಾಗಲೇ ಕಾರ್ಯನಿರ್ವಹಿಸಿದ ಅನುಭವುಳ್ಳ ಸರ್ಕಾರೇತರ ಸಂಸ್ಥೆಗೆ ಪರಿಶೀಲನೆಯ ಗುತ್ತಿಗೆ ನೀಡುತ್ತಿದ್ದು, ಒಂದು ಕಟ್ಟಡ ಪರಿಶೀಲನೆಗೆ 250 ರೂ. ಪಾವತಿಸಲಾಗುತ್ತಿದೆ. ಗುತ್ತಿಗೆ
ಪಡೆದ ಸಂಸ್ಥೆಯ ತನ್ನ 10 ರಿಂದ 15 ಸಿಬ್ಬಂದಿಯಿಂದ ಜಲಮಂಡಳಿ ದಾಖಲೆಯಂತೆ ನಗರದಾದ್ಯಂತ ಗೃಹ ಹಾಗೂ ಗೃಹೇತರ ಕಟ್ಟಡಗಳಲ್ಲಿರುವ ಮಳೆ ನೀರು ಕೊಯ್ಲು ವಿಧಾನದ ವಾಸ್ತವ ಪರೀಶಿಲಿಸುತ್ತಾರೆ. ಪರಿಶೀಲನೆ ವೇಳೆ ಜಲಮಂಡಳಿ ಆಯಾ ಉಪವಿಭಾಗಗಳ ಮೀಟರ್‌ ರೀಡರ್‌ಗಳು, ಎಂಜಿನಿಯರ್‌ಗಳು ನೆರವು ನೀಡಲಿದ್ದಾರೆ. ಪರಿಶೀಲನೆ ಕುರಿತು ಜಲಮಂಡಳಿ ನಿತ್ಯ ವರದಿ ಪಡೆಯಲಿದ್ದು, ಆರು ತಿಂಗಳಲ್ಲಿ ಪರಿಶೀಲನೆ ಪೂರ್ಣಗೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

-ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.