ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ


Team Udayavani, Dec 4, 2019, 4:58 PM IST

bg-tdy-1

ಬೆಳಗಾವಿ: ತಾಲೂಕಿನ ಅರಳಿಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕಟ್ಟಿ ಜನತಾ ಕಾಲೋನಿಗೆ ಮೂಲ ಸೌಲಭ್ಯ ಕಲ್ಪಿಸಬೇಕುಎಂದು ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಗ್ರಾಮದ ಬಡವರಿಗೆ ಸರ್ಕಾರ ಮಂಜೂರು ಮಾಡಿದ ಆಶ್ರಯ ಮನೆಗಳಲ್ಲಿ ಸುಮಾರು 25ವರ್ಷಗಳಿಂದ 40 ಕುಟುಂಬಗಳು ಬದುಕು ಸಾಗಿಸುತ್ತಿವೆ. ಗ್ರಾಮದಿಂದ ಜನತಾ ಕಾಲೋನಿ 3 ಕಿಮೀ ಅಂತರದಲ್ಲಿದೆ. ಈ ಕುಟುಂಬಗಳು ಕುಡಿಯುವ ನೀರು, ರಸ್ತೆ, ವಿದ್ಯುತ್‌ ಇಲ್ಲದೇ ನಿತ್ಯ ಸಮಸ್ಯೆ ಅನುಭವಿಸುತ್ತಿವೆ ಎಂದು ದೂರಿದರು.

ಜನತಾ ಕಾಲೋನಿ ಭಾಗದಲ್ಲಿ ನಿರಂತರ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಕಲ್ಲುಗಳನ್ನು ಬ್ಲಾಸ್ಟ್‌ ಮಾಡುವುದರಿಂ ಮನೆ ಗೋಡೆಗಳು ಬಿರುಕು ಬಿಡುತ್ತಿವೆ.ಕೆಲ ಮನೆಗಳಂತೂ ಬೀಳುವ ಸ್ಥಿತಿಯಲ್ಲಿವೆ.

ಹೀಗಾಗಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕಲ್ಲು ಗಣಿಗಾರಿಕೆ ಬಂದ್‌ ಮಾಡಿ ಗಣಿಗಾರಿಕೆ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಜತನಾ ಕಾಲೋನಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅವರ ಗಮನಕ್ಕೆ ತರಲಾಗಿತ್ತು. ಆದರೆ ಇದು ಇನ್ನೂವರೆಗೆ ಸಮಸ್ಯೆಯಾಗಿಯೇ ಉಳಿದಿದೆ. ಇನ್ನೂವರೆಗೆ ರಸ್ತೆ ದುರಸ್ತಿ ಮಾಡಿಲ್ಲ. ಸರ್ಕಾರದಿಂದ ಬಂದ ಹಣ ಎಲ್ಲಿಗೆ ಹೋಯಿತು ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ಛಾವಣಿ ಬಿರುಕು ಬಿಟ್ಟಿದೆ. ಇಲ್ಲಿಯ ಮಕ್ಕಳು ಜೀವ ಕೈಯಲ್ಲಿ ಹಿಡಿದು ಕಲಿಯುತ್ತಿದ್ದಾರೆ. ಯಾವ ಸಂದರ್ಭದಲ್ಲಾದರೂ ಕಟ್ಟಡ ಕುಸಿದು ಬೀಳುವ ಸ್ಥಿತಿಯಲ್ಲಿದ್ದರಿಂದ ಶಾಲೆಯನ್ನು ಮುಚ್ಚಲಾಗಿದೆ. ಕೂಡಲೇ ಶಾಲೆ ದುರಸ್ತಿಗೊಳಿಸಿ ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮಸ್ಥರಾದ ಸವರಾಜ ಸುಲಕುಂಪಿ, ಮಂಜುನಾಥ ಸಂಕಣ್ಣವರ, ಬಸವರಾಜ ರೊಟ್ಟಿ, ಬಾಳೇಶ ಮಂಗಣ್ಣವರ, ನಿಲವ್ವ ದೊಡ್ಡಗೌಡ್ರ, ರತ್ನವ್ವ ಬೇಟಗೇರಿ, ರುದ್ರಪ್ಪ ಹುಬ್ಬಳ್ಳಿ, ಗಂಗವ್ವ ಅವರೊಳ್ಳಿ ಇದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.