ಸಮ್ಮೇಳನದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ವಿಜಯ ಕುಮಾರ್‌ ಶೆಟ್ಟಿ


Team Udayavani, Dec 4, 2019, 5:56 PM IST

mumbai-tdy-1

ಮುಂಬಯಿ, ಡಿ. 3: ಪ್ರಕೃತಿಯ ಮುನಿಸು, ಹವಾಮಾನ ವೈಪರೀತ್ಯದಿಂದಾಗಿ ಹಠಾತ್‌ ಸುರಿದ ಧಾರಾಕಾರ ಮಳೆಯಿಂದ ಮೈದಾನದಲ್ಲಿ ನೀರು ತುಂಬಿದ್ದರಿಂದ ಕಳೆದ ನವೆಂಬರ್‌ 8 ರಿಂದ ನ. 10 ರವರೆಗೆ ಮೂರುದಿನಗಳ ಕಾಲ ನಡೆಯಬೇಕಿದ್ದ ಬೊಂಬಾಯಿಡ್‌ ತುಳುನಾಡ್‌ ವಿಶ್ವ ಮಟ್ಟದ ತುಳು ಸಮ್ಮೇಳನವನ್ನು ರದ್ದುಗೊಳಿಸುವುದು ಅನಿವಾರ್ಯವಾಯಿತು.

ಕೊನೆಯ ಕ್ಷಣದಲ್ಲಾದ ತೊಂದರೆಗೆ ಕ್ಷಮೆ ಯಾಚಿಸುತ್ತಿದ್ದೇವೆ. ಮತ್ತೆ ಜನವರಿ 18 ಮತ್ತು 19 ರಂದು ಬೊಂಬಾಯಿಡ್‌ ತುಳುನಾಡು ವಿಶ್ವಮಟ್ಟದ ತುಳು ಸಮ್ಮೇಳನವನ್ನು ದ್ವಿದಿನಗಳಲ್ಲಿ ಕಾಂದಿವಲಿ ಪಶ್ಚಿಮದ ಸಪ್ತಾಹ ಕ್ರೀಡಾಂಗಣದಲ್ಲಿ ಮತ್ತೆ ಅದೇ ಸಂಭ್ರಮದೊಂದಿಗೆ ನಡೆಸಲಾ ಗುವುದು ಎಂದು ಸಮ್ಮೇಳನದ ರೂವಾರಿ, ಕಲಾಜಗತ್ತು ಮುಂಬಯಿ ಸಂಸ್ಥೆಯ ಅಧ್ಯಕ್ಷ ಡಾ|ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ತಿಳಿಸಿದರು. ಡಿ. 2 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ಪೂರ್ವ ಸಿದ್ಧತಾ ಸಭೆ, ಸಮ್ಮೇಳನಕ್ಕೆ ಮುಹೂರ್ತ, ದೀಪಯಜ್ಞ ವಿಶೇಷ ಕಾರ್ಯಕ್ರಮದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೊಂಬಾಯಿಡ್‌ ತುಳುನಾಡ್‌ ಸಮ್ಮೇಳನವನ್ನು ಎರಡು ದಿನಗಳಿಗೆ ಸೀಮಿತಗೊಳಿಸಿ ಮತ್ತೆ ನಡೆಸಲಾಗುವುದು.

ಸಾಕುಇನ್ನೂ ಬೇಡವೇ ಬೇಡ ಎಂದು ದೃಢ ನಿರ್ಧಾರ ಮಾಡುವಾಗ ಮುಂಬಯಿಯ ಎಲ್ಲಾ ಜಾತೀಯ, ಕನ್ನಡಪರ ಸಂಘಟನೆಗಳ ಗಣ್ಯರು ಚಿಂತೆ ಮಾಡಬೇಡಿ, ಇದಕ್ಕಿಂತ ಅದ್ದೂರಿಯಾಗಿ ಸಮ್ಮೇಳನವನ್ನು ಮಾಡೋಣ, ಭಯಪಡುವ ಅಗತ್ಯವಿಲ್ಲ. ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ. ನಾವೆಲ್ಲರೂ ಒಂದಾಗಿ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದು ಮನೋಸ್ಥೈರ್ಯ ತುಂಬಿದ್ದಾರೆ. ನೀವೆಲ್ಲರೂ ನನ್ನ ಮೇಲಿಟ್ಟಿರುವ ಪ್ರೀತಿ, ಅಭಿಮಾನ, ಗೌರವಕ್ಕೆ ಋಣಿಯಾಗಿದ್ದೇನೆ. ಕಳೆದ ಘಟನೆಯಿಂದ ತೊಂದರೆ ಅನುಭವಿಸಿದ ಊರಪರವೂರ ಎಲ್ಲರಲ್ಲೂ ನಾನು ಕ್ಷಮೆಯಾಚಿಸುತ್ತೇನೆ. ಇದೀಗ ತುಳು ಸಮ್ಮೇಳನವು ಮತ್ತೆ ನಡೆಯಲಿರುವುದು ಸಂತೋಷದ ವಿಷಯ. ಸಮ್ಮೇಳನದ ಅದ್ಭುತ ಯಶಸ್ಸಿಗಾಗಿ ಎಲ್ಲರ ಸಹಕಾರ ಅಗತ್ಯವಾಗಿದೆ. ತುಳುವರು ಎಲ್ಲರೂ ಸಮ್ಮೇಳನದಲ್ಲಿಪಾಲ್ಗೊಳ್ಳೋಣ ಎಂದು ನುಡಿದು ಸಮ್ಮೇಳನದ ಮಾಹಿತಿಯನ್ನು ನೀಡಿದರು.

ಇದೇ ಶುಭಾವಸರದಲ್ಲಿ ಜನವರಿಯ ಸಮ್ಮೇಳನಕ್ಕೆ ಶ್ರೀ ಪೇಜಾವರ ಮಠದ ಶಿಲಾಮಯಮಂದಿರದ ಶ್ರೀಕೃಷ್ಣನ ಸನ್ನಿಧಿಯಲ್ಲಿ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕ ವಿದ್ವಾನ್‌ ಹರಿ ಭಟ್‌ ಪುತ್ತಿಗೆ ದೀಪಹಚ್ಚಿ ಪೂಜೆಯೊಂದಿಗೆ ಮುಹೂರ್ತ ನೆರವೇರಿಸಿ, ಸಕಲ ವಿಘ್ನಗಳು ದೂರವಾಗಿ ಈ ಸಮ್ಮೇಳನ ಯಶಸ್ಸುಕಂಡು ಜಾಗತಿಕವಾಗಿ ಸ್ಮರಿಸುವ ವಿಶ್ವ ತುಳು ಸಮ್ಮೇಳನವಾಗಿ ಮೆರೆಯುವಂತಾಗಲಿ ಎಂದು ಅನುಗ್ರಹಿಸಿದರು.

ಕಲಾ ಜಗತ್ತು ಇದರ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ, ಗೌ| ಕಾರ್ಯದರ್ಶಿ ಕೃಷ್ಣರಾಜ್‌ ಸುವರ್ಣ, ಜತೆ ಕಾರ್ಯದರ್ಶಿ ಲತೇಶ್‌ ಪೂಜಾರಿ, ಕೋಶಾಧಿಕಾರಿ ಜಗದೀಶ್‌ ರಾವ್‌, ಜತೆ ಕೋಶಾಧಿಕಾರಿಗಳಾದ ಪೃಥ್ವಿರಾಜ್‌ ಮುಂಡ್ಕೂರು, ಅಶೋಕ್‌ ಶೆಟ್ಟಿ ಪಣಗಲ್‌, ಬೊಂಬಾಯಿಡ್‌ ತುಳುನಾಡು ವಿಶ್ವ ತುಳುಹಬ್ಬ ಸಮಿತಿಯ ಸಂಚಾಲಕ ಶ್ಯಾಮ್‌ ಎನ್‌. ಶೆಟ್ಟಿ, ಕಾರ್ಯದರ್ಶಿ ಗಳಾದ ಪ್ರೇಮನಾಥ ಶೆಟ್ಟಿ ಕೊಂಡಳ್ಳಿ, ಪ್ರೇಮನಾಥ ಕೋಟ್ಯಾನ್‌, ರಜಿತ್‌ ಸುವರ್ಣ, ಸಾಹಿತ್ಯ ಸಮಿತಿಯ ಲತಾ ಸಂತೋಷ್‌ ಶೆಟ್ಟಿ, ಜಯಕರ ಡಿ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಗಾಯತ್ರಿ ಪರಿವಾರ ದಹಿಸರ್‌ ಬಳಗವು ಕುಮಾರಿ ಶೆಟ್ಟಿ ಅವರ ಮುಂದಾಳುತ್ವದಲ್ಲಿ ದೀಪಯಜ್ಞ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ನೆರವೇರಿಸಿ ಸಮ್ಮೇಳನದ ಸಫಲತೆ ಹೊಂದಲಿ ಎಂದು ಹಾರೈಸಿದರು.

 

ಚಿತ್ರ ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.