ಸೋಲಿನ ಭೀತಿಯಿಂದ ಐಟಿ ದಾಳಿ: ಕೋಳಿವಾಡ
Team Udayavani, Dec 4, 2019, 8:48 PM IST
ಹಾವೇರಿ:ಸೋಲುವ ಭೀತಿ ಹಾಗೂ ಹತಾಶ ಭಾವನೆಯಿಂದ ಬಿಜೆಪಿಯವರು ನನ್ನ ಮನೆ ಮೇಲೆ ಆದಾಯ ತೆರಿಗೆ ಹಾಗೂ ಅಬಕಾರಿ ದಾಳಿ ನಡೆಸಿದ್ದಾರೆ ಎಂದು ರಾಣಿಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಆರೋಪಿಸಿದರು.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಬಕಾರಿ ಹಾಗೂ ಆದಾಯ ತೆರಿಗೆ ಅಧಿ ಕಾರಿಗಳು ನನ್ನ ಮನೆ ಮೇಲೆ ದಾಳಿ ಮಾಡಿ ಏನೂ ಸಿಗದೆ ವಾಪಸ್ ಹೋಗಿದ್ದಾರೆ. ಬಿಜೆಪಿ ಸೋಲಿನ ಹತಾಶ ಭಾವನೆಯಿಂದ ಹೀಗೆಲ್ಲ ಮಾಡುತ್ತಿದ್ದು ಇದಕ್ಕೆ ನಾನು ಜಗ್ಗಲ್ಲ; ಬಗ್ಗಲ್ಲ. ನನ್ನ ಹಿಂದೆ ಜನ ಇದ್ದಾರೆ. ಬಿಜೆಪಿ ಸರ್ಕಾರದ ಮಂತ್ರಿಗಳೆಲ್ಲ ಕೂಡಿ ದಾಳಿ ಮಾಡಿಸಿದ್ದಾರೆ. ನನ್ನ ಮೇಲೆ ಆಪಾದನೆ ಹೊರೆಸಿ, ಸೋಲಿಸಲು ಯತ್ನಿಸಿದ್ದಾರೆ. ನನ್ನ ಮನೆ ಮುಂದೆ ಸಿಸಿ ಕ್ಯಾಮೆರಾ ಸಹ ಹಾಕಿದ್ದಾರೆ. ಎಲ್ಲಿವರೆಗೆ ನನ್ನ ಹಿಂದೆ ಜನಬೆಂಬಲ ಇದೆಯೋ ಅಲ್ಲಿವರೆಗೆ ಯಾರಿಗೂ ಏನೂ ಮಾಡಲು ಆಗಲ್ಲ ಎಂದರು.
ಬಿಜೆಪಿ ದ್ವೇಷ ರಾಜಕೀಯ ಅತಿರೇಕಕ್ಕೇರಿದೆ. ಇಡಿ, ಐಟಿಯಂಥ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಕಿಸೆಯಲ್ಲಿಟ್ಟುಕೊಂಡವರಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಈ ರೀತಿ ದಾಳಿ ನಡೆಸುವ ಕೆಲಸ ಮಾಡುತ್ತಿದೆ. ಈ ಕೆಲಸ ಮಾಡಿಸುವ ಮೂಲಕ ಚಿದಂಬರಂ, ಡಿಕೆಶಿ ಅವರನ್ನು ಬಂಧನದಲ್ಲಿರುವಂತೆ ಮಾಡಿದ ಬಿಜೆಪಿ, ಈಗ ನನ್ನ ಮನೆಗೆ ಮೇಲೆ ದಾಳಿ ನಡೆಯುವಂತೆ ಮಾಡಿದೆ. ಕ್ಷೇತ್ರದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಜೆಪಿಯವರು ನನ್ನ ಮನೆ ಮೇಲೆ ದಾಳಿಸಿದ್ದರಿಂದ ನನಗೆ ಒಳ್ಳೆಯದೇ ಆಗಿದೆ. ಗೆಲ್ಲುವ ಮತಗಳ ಅಂತರ ಹೆಚ್ಚಾಗಿದೆ. 20-30 ಸಾವಿರ ಮತಗಳೂ ಹೆಚ್ಚಾಗಿವೆ. ಅತ್ಯಧಿ ಕ ಮತಗಳ ಅಂತರದಿಂದ ಜನ ಗೆಲ್ಲಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ