ಚಿರತೆ ನನ್ನನ್ನು ಹಿಂಬಾಲಿಸುತ್ತಿದೆ ಕಾಪಾಡಿ ಎಂದ ಗಾರ್ಡ್ ಮತ್ತೆ ಸಂಪರ್ಕಕ್ಕೆ ಸಿಕ್ಕಿಲ್ಲ
Team Udayavani, Dec 4, 2019, 11:24 PM IST
ಹೊಸದುರ್ಗ: ತಾಲೂಕಿನ ಶ್ರೀರಾಂಪುರ ಬಳಿಯ ಮೈಲಾರಪುರ ಅರಣ್ಯಕಾವಲ್ ಪ್ರದೇಶದಲ್ಲಿ ಚಿರತೆ ಸೆರೆಗೆ ಇಟ್ಟಿದ್ದ ಬೋನ್ ವೀಕ್ಷಿಸಲು ಹೋಗಿದ್ದ ಬಸವರಾಜ್ ಎಂಬ ಅರಣ್ಯ ಇಲಾಖೆ ಗಾರ್ಡ್ ಕಾಣೆಯಾಗಿದ್ದು, ರಾತ್ರಿವರೆಗೆ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ.
ಚಿರತೆಯೊಂದು ನನ್ನನ್ನು ಹಿಂಬಾಲಿಸುತ್ತಿದೆ. ಬೇಗ ಬಂದು ಕಾಪಾಡಿ ಎಂದು ಹರೀಶ್ ಎಂಬ ಸಹೋದ್ಯೋಗಿಗೆ ಬೆಳಗ್ಗೆ ಪೋನ್ ಮಾಡಿ ಕಟ್ ಮಾಡಿದ ನಂತರ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.
ಇತ್ತೀಚೆಗೆ ಹಾರಗೊಂಡನಹಳ್ಳಿ ಸುತ್ತಮುತ್ತಲಿರುವ ಗುಡ್ಡದ ಸಮೀಪದ ತೋಟಗಳಲ್ಲಿ ಚಿರತೆ ಕಾಣಿಸಿಕೊಳ್ಳುತಿತ್ತು. ಇದರಿಂದಾಗಿ ಅಲ್ಲಿನ ಜನರು ಭಯಭೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಹಿಡಿಯಲು ಗುಡ್ಡದ ಬಳಿ ಬೋನ್ ಅಳವಡಿಸಿತ್ತು. ಈ ಸಂಬಂಧ ಮಂಗಳವಾರ ಬೆಳಿಗ್ಗೆಯೇ ಅರಣ್ಯ ವೀಕ್ಷಕ ಬಸವರಾಜಪ್ಪ ಅಳವಡಿಸಿರುವ ಬೋನ್ ವೀಕ್ಷಿಸಿ ನಂತರ ಪೋನ್ ಮೂಲಕ ನನಗೆ ಅಲ್ಲಿನ ಬಗ್ಗೆ ಮಾಹಿತಿ ನೀಡಿದರು.
ಬೆಳಿಗ್ಗೆ ಸುಮಾರು 9.30ರ ಸಮಯದಲ್ಲಿ ಫಾರೆಸ್ಟ್ಗಾರ್ಡ್ ಹರೀಶ್ ಎನ್ನುವವರಿಗೆ ಪೋನ್ ಮಾಡಿರುವ ವೀಕ್ಷಕ ಬಸವರಾಜಪ್ಪ, ನಾನು ಮೈಲಾರಪುರ ಅರಣ್ಯಕಾವಲ್ ಪ್ರದೇಶಕ್ಕೆ ಬಂದಿದ್ದು, ಚಿರತೆ ನನ್ನನ್ನೇ ಹಿಂಬಾಲಿಸಿ ಬರುತ್ತಿದೆ. ಬೇಗ ಬಂದು ನನ್ನನ್ನು ಕಾಪಾಡಿ ಎಂದು ಮಾಹಿತಿ ನೀಡಿದ್ದಾನೆ. ತಕ್ಷಣ ಪೋನ್ ಕರೆ ಬಂದ ಸ್ಥಳಕ್ಕೆ ಹೋಗಿ ನೋಡಿದರೆ ಅಲ್ಲಿ ಆತನ ಬ್ಯಾಗ್ ಮಾತ್ರ ಇತ್ತು. ಪುನಃ ಪೋನ್ ಮಾಡಿದರೇ ಸ್ವಿಚ್ ಬರುತ್ತಿದೆ. ಬೆಳಿಗ್ಗೆಯಿಂದ ಹುಡುಕಿದ್ದೇವೆ. ಬಸವರಾಜಪ್ಪನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಚಿರತೆ ದಾಳಿ ಮಾಡಿರುವ ಬಗ್ಗೆಯೂ ಸ್ಥಳದಲ್ಲಿ ಯಾವುದೇ ಕುರುಹು ದೊರಕಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೀಶ್ ತಿಳಿಸಿದ್ದಾರೆ.
ಶ್ರೀರಾಂಪುರ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!