ಇಂದು ಉಪ ಚುನಾವಣೆ: ಸರಕಾರದ ಉಳಿವು ಮತದಾರನ ತೀರ್ಪಿನ ಮೇಲೆ ನಿರ್ಧಾರ


Team Udayavani, Dec 5, 2019, 6:48 AM IST

fd-31

ಚುನಾವಣೆಗೆ ಅಂತಿಮ ಹಂತದ ಸಿದ್ಧತೆ.

ಬೆಂಗಳೂರು: ರಾಜ್ಯ ರಾಜಕಾರಣದ ಧ್ರುವೀಕರಣ ನಿರೀಕ್ಷೆ, ಅನರ್ಹಗೊಂಡವರ ಭವಿಷ್ಯ, ಮೂರೂ ಪಕ್ಷಗಳ ನಾಯಕರ ನಾಯಕತ್ವದ ಪರೀಕ್ಷೆ , ಬಿಜೆಪಿ ಸರಕಾರದ ಅಳಿವು-ಉಳಿವು…. ಈ ನಾಲ್ಕೂ ಪ್ರಶ್ನೆಗಳಿಗೆ ಉತ್ತರ ನೀಡುವ ಉಪ ಚುನಾವಣೆಯ ಮತದಾನ ಗುರುವಾರ ನಡೆಯಲಿದೆ.

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಪತನಕ್ಕೆ ರೂವಾರಿಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದಿಂದ ಹೊರ ನಡೆದಿದ್ದ ರಮೇಶ್‌ ಜಾರಕಿಹೊಳಿ, ಎಚ್‌. ವಿಶ್ವನಾಥ್‌, ಎಂ.ಟಿ.ಬಿ. ನಾಗರಾಜ್‌, ಡಾ| ಕೆ. ಸುಧಾಕರ್‌, ಎಸ್‌.ಟಿ. ಸೋಮಶೇಖರ್‌, ಗೋಪಾಲಯ್ಯ ಸಹಿತ 13 ಮಂದಿ ಅನರ್ಹ ಶಾಸಕರ ರಾಜಕೀಯ ಭವಿಷ್ಯವೇ ಈ ಚುನಾವಣೆ ಮೇಲೆ
ನಿಂತಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿ ಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಅವರ ರಾಜಕೀಯ ಪ್ರಸ್ತುತತೆಯನ್ನೂ ಈ ಉಪ ಚುನಾವಣೆ ನಿರ್ಧರಿಸಲಿದೆ. ಬಿಜೆಪಿ ಪಾಲಿಗಂತೂ “ದಕ್ಷಿಣದ ಹೆಬ್ಟಾಗಿಲು’ ಕರ್ನಾಟಕವನ್ನು ಮತ್ತೆ ಉಳಿಸಿಕೊಳ್ಳಲೇಬೇಕಾದ ಅಗ್ನಿ ಪರೀಕ್ಷೆ ಈ ಉಪಚುನಾವಣೆ.

ಮೂರೂ ಪಕ್ಷಗಳ ನಾಯಕರು ತಮ್ಮೆಲ್ಲ ಶಕ್ತಿ-ಸಾಮರ್ಥ್ಯ, ಶ್ರಮ ಹಾಕಿ ಅಭ್ಯರ್ಥಿಗಳ ಪರ ಪ್ರಚಾರ ಮುಗಿಸಿದ್ದಾರೆ. ಜಾತಿವಾರು ಲೆಕ್ಕಾಚಾರದೊಂದಿಗೆ, ಜನರ ಆಕ್ರೋಶ, ಅಭಿವೃದ್ಧಿ, ಮರು ಮೈತ್ರಿ ವಿಚಾರಗಳ ಪ್ರಸ್ತಾವಗಳ ಹಿನ್ನೆಲೆಯಲ್ಲಿ ತಮ್ಮದೇ ಆದ ಲೆಕ್ಕಾಚಾರ ಹಾಕಿಕೊಂಡು ಮತದಾರನ ತೀರ್ಪಿನತ್ತ ನೋಡುತ್ತಿದ್ದಾರೆ.

10ರಲ್ಲಿ ಗೆಲ್ಲುತ್ತೇವೆ: ಬಿಜೆಪಿ
ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿಗಳು ಕಣದಲ್ಲಿರು ವುದರಿಂದ ಲಾಭವಾಗಲಿದೆ. ಅನರ್ಹಗೊಂಡವರ ವೈಯಕ್ತಿಕ ವರ್ಚಸ್ಸು ಹಾಗೂ ಪ್ರಭಾವ, ಸಮು ದಾಯದ ಮತಗಳ ಜತೆಗೆ ಸಾಂಪ್ರದಾಯಿಕ ಬಿಜೆಪಿ ಮತಗಳು ಬೀಳಲಿವೆ ಎಂಬ ನಂಬಿಕೆ ಬಿಜೆಪಿಯದು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದರಿಂದ ಅಭಿವೃದ್ಧಿ ಮಂತ್ರ ಜಪಿಸಿರುವ ಬಿಜೆಪಿ ಕನಿಷ್ಠ 10 ಸ್ಥಾನ ಗೆಲ್ಲುವ ಭರವಸೆ ಇದೆ. ಆಂತರಿಕವಾಗಿ ಎಂಟು ಗೆದ್ದರೂ ಸರಕಾರ ಸುರಕ್ಷಿತ ಎಂಬ ಮನಃಸ್ಥಿತಿಯಲ್ಲಿದೆ. ಆದರೆ 8 ಸ್ಥಾನ ಗೆದ್ದರೆ ಸರಕಾರವೇನೋ ಉಳಿದುಕೊಳ್ಳಬಹುದು. ಉಳಿದವರು ಸೋತರೆ ಅವರ ಭವಿಷ್ಯ ಚಿಂತಾಜನಕವಾಗಲಿದೆ.

ಕೈ ಹಿಡಿದೀತೇ ಒಳಒಪ್ಪಂದ?
ಅನರ್ಹಗೊಂಡವರ ಬಗ್ಗೆ ಮತದಾರರಲ್ಲಿ ಆಕ್ರೋಶ ಇರುವುದರಿಂದ ಮತ್ತು ಬಿಜೆಪಿಗೆ ಕೆಲವು ಕಡೆ ಬಂಡಾಯ ಎದುರಾಗಿರುವುದರಿಂದ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಬಹುದು. ಜೆಡಿಎಸ್‌ ಜತೆಗಿನ ಕೆಲವು ಕ್ಷೇತ್ರಗಳ ಒಳ ಒಪ್ಪಂದ ಕೈ ಹಿಡಿಯಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್‌ನದ್ದಾಗಿದೆ.

ಜೆಡಿಎಸ್‌ಗೆ ಕಿಂಗ್‌ ಮೇಕರ್‌ ಕನಸು
ಉಪ ಚುನಾವಣೆ ಫ‌ಲಿತಾಂಶ ರಾಜ್ಯ ರಾಜಕೀಯ ದಲ್ಲಿ ಧ್ರುವೀಕರಣಕ್ಕೆ ಕಾರಣವಾಗಲಿದೆ ಎಂದು ಮೊದಲಿನಿಂದಲೂ ಪ್ರತಿಪಾದಿಸುತ್ತಿರುವ ಜೆಡಿಎಸ್‌ ಕಿಂಗ್‌ ಮೇಕರ್‌ ಆಗುವ ಕನಸು ಕಾಣುತ್ತಿದೆ.ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಹತ್ತು ಕ್ಷೇತ್ರ ಗೆದ್ದರೆ ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದರೆ ಬಿಜೆಪಿ ಸರಕಾರ ಪತನವಾಗಲಿದೆ. ಆಗ ಜೆಡಿಎಸ್‌ಗೆ ಕಿಂಗ್‌ ಮೇಕರ್‌ ಆಗುವ ಅವಕಾಶ ಸಿಗಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.