ಶಿವಮೊಗ್ಗದಲ್ಲಿ ರಾಜ್ಯದ ಮೊದಲ ಮೈಸ್‌ ಕಾಲೋನಿ!


Team Udayavani, Dec 6, 2019, 5:10 AM IST

ws-41

ಶಿವಮೊಗ್ಗ: ಮೈಸ್‌ ಕಾಲೋನಿಯ ಹೊರ ನೋಟ.

ಶಿವಮೊಗ್ಗ: ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ, ಹಂದಿಗೋಡು, ನಿಫಾ…ಹೀಗೆ ಅನೇಕ ಕಾಯಿಲೆಗಳು ಪ್ರತಿ ವರ್ಷ ಕಾಣಿಸಿಕೊಳ್ಳುತ್ತಿವೆ. ನಿಗದಿತ ಔಷಧವಿಲ್ಲದ ಈ ಎಲ್ಲ ಕಾಯಿಲೆಗಳಿಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅನೇಕ ಪ್ರಯೋಗಗಳನ್ನು ಮಾಡುತ್ತಿದೆ. ಇಂತಹ
ಪ್ರಯೋಗಗಳಿಗಾಗಿಯೇ ನಗರದಲ್ಲಿ ರಾಜ್ಯದ ಮೊದಲ “ಮೈಸ್‌ ಕಾಲೋನಿ’ ಆರಂಭಗೊಳ್ಳುತ್ತಿದೆ.

ಒಂದು ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ಸಿದ್ದವಾಗಿದ್ದು, ಅಗತ್ಯ ಯಂತ್ರೋಪಕರಣಗಳನ್ನು ತಂದು ಜೋಡಿಸಬೇಕಿದೆ. ಈ ಕಟ್ಟಡ ಪೂರ್ಣ ಪ್ರಮಾಣದಲ್ಲಿ ಹವಾ ನಿಯಂತ್ರಿತವಾಗಿರಲಿದೆ. ಪ್ರಯೋಗಕ್ಕೆ ಅಗತ್ಯ ವಾಗಿರುವ ಇಲಿ ಮರಿಗಳ ಸಾಕಣೆ, ಸಂತಾನ ಅಭಿವೃದ್ಧಿ ಹಾಗೂ ಆಹಾರ ತಯಾರಿಕೆ ಸೇರಿದಂತೆ ಆಯಾ ಉದ್ದೇಶಗಳಿಗೆ ಅನುಗುಣವಾಗಿ ಪ್ರತಿಯೊಂದಕ್ಕೂ ಪ್ರತ್ಯೇಕ ಕೋಣೆಗಳನ್ನು ಮೀಸಲಿಡಲಾಗುತ್ತಿದೆ.

ಪರೀಕ್ಷೆಗೆ ಅನುಕೂಲ: ಈಗಾಗಲೇ ನಗರದ ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯದ ಆವರಣದಲ್ಲಿ ಹಲವು ವರ್ಷಗಳಿಂದ ಇಲಿಗಳ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದೆ. ಪ್ರಯೋಗಕ್ಕೆ ಅಗತ್ಯವಿರುವ 3-4 ವಾರದ ಇಲಿಗಳನ್ನು ಬೆಂಗಳೂರಿನ ಹೆಬ್ಟಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ (ಐಎಎಚ್‌ಆ್ಯಂಡ್‌ ವಿಬಿ)ಯಿಂದ 100 ರೂ.ಗೆ ಒಂದರಂತೆ ಖರೀದಿ ಮಾಡಲಾಗುತ್ತಿದೆ. ಶಿವಮೊಗ್ಗದಲ್ಲಿ ಪ್ರತ್ಯೇಕ “ಮೈಸ್‌ ಕಾಲೋನಿ’ ಆದ ನಂತರ ಹೊಸದಾಗಿ ಪತ್ತೆಯಾಗುತ್ತಿರುವ
ಕಾಯಿಲೆಗಳಿಗೆ ಲಸಿಕೆಗಳ ಪರೀಕ್ಷೆಗೆ ಅನುಕೂಲವಾಗಲಿದೆ. ಮಂಗನ ಕಾಯಿಲೆ ಜತೆಗೆ ಡೆಂಘೀ, ಚಿಕೂನ್‌ ಗುನ್ಯಾ, ನಿಫಾ ಇತರ ರೋಗಗಳ ಬಗ್ಗೆಯೂ ಅಧಿಕ ಒತ್ತು ನೀಡಬಹುದಾಗಿದೆ. ಕೇವಲ ಸಂಶೋಧನೆಯಷ್ಟೇ ಅಲ್ಲದೇ ಬೇರೆ ವೆಟರ್ನರಿ ಕಾಲೇಜುಗಳು-ಇತರ ಸಂಶೋಧನೆಗಳಿಗೆ ಬೇಕಾದ ಅಗತ್ಯ ಇಲಿಗಳನ್ನು ಮಾರಾಟ ಮಾಡಬಹುದಾಗಿದೆ. ಇದರಿಂದ ಇಲಾಖೆಗೆ ಆದಾಯವೂ ಸಿಗಲಿದೆ. ಪ್ರಾಥಮಿಕವಾಗಿ ಸಂಶೋಧನೆಗಷ್ಟೇ ಇಲಿಗಳನ್ನು ಬಳಸಿಕೊಂಡು ನಂತರ ಮಾರಾಟದ ಬಗ್ಗೆಯೂ ಚಿಂತನೆ ನಡೆದಿದೆ.

ಕೆಲಸ ಹೇಗೆ?: ಶಿವಮೊಗ್ಗದ ಕ್ಯಾಸನೂರು ಅರಣ್ಯ ಪ್ರದೇಶದಲ್ಲಿ 1957ರಲ್ಲಿ ಮೊದಲ ಬಾರಿಗೆ ಮಂಗನ
ಕಾಯಿಲೆ ವೈರಸ್‌ ಕಾಣಿಸಿಕೊಂಡಿತ್ತು. ಅನಂತರ ಇದಕ್ಕೆ ಕೆಎಫ್‌ಡಿ ಎಂದು ಹೆಸರಿಡಲಾಯಿತು. ಅಲ್ಲಿಂದ
ಇಲ್ಲಿವರೆಗೂ ಈ ಕಾಯಿಲೆಗೆ ನಿಗದಿತ ಔಷಧ ಇಲ್ಲ. ಕೆಎಫ್‌ಡಿ ಇತರೆ ಕಾಯಿಲೆಗಳಿಗೆ ಆವಿಷ್ಕರಿಸಿದ
ಲಸಿಕೆಯನ್ನು ಮೊದಲು ಮಂಗ ಹಾಗೂ ಬಿಳಿ ಇಲಿಗಳ ಮೇಲೆ ಪ್ರಯೋಗ ಮಾಡಲಾಗುತ್ತದೆ. ಈ ಕಾಯಿಲೆ
ಕಾಣಿಸಿಕೊಂಡ ನಂತರ ಲಸಿಕೆಗಳ ಪರೀಕ್ಷೆಗಾಗಿ 1984ರಲ್ಲಿ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಬಿಳಿ ಇಲಿ ಮತ್ತು ಮಂಗಗಳ ಕಾಲೋನಿಯನ್ನು ಆರಂಭಿಸಲಾಗಿತ್ತು. ಒಂದು ಬ್ಯಾಚ್‌ ಲಸಿಕೆ ಪರೀಕ್ಷೆಗೆ 100-150 ಇಲಿಗಳು ಬೇಕಾಗುತ್ತದೆ. 2,000ರಲ್ಲಿ ಇದನ್ನು ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯದ (ವಿಡಿಎಲ್‌) ಆವರಣಕ್ಕೆ ಸ್ಥಳಾಂತರಿಸಲಾಯಿತು. ಆದರೆ, ಅಂತಾರಾಷ್ಟ್ರೀಯ ನಿಯಮಾವಳಿಗೆ
ಅನುಗುಣವಾಗಿ ಪ್ರಯೋಗಾಲಯ ಇಲ್ಲದ ಕಾರಣ ಇಲಿಗಳ ಅಭಿವೃದಿಟಛಿಗೆ ಅವಕಾಶ ಕೊಟ್ಟಿರಲಿಲ್ಲ.
ಪ್ರಯೋಗಕ್ಕೆ ಬೇಕಾದ ಇಲಿಗಳನ್ನು ಬೆಂಗಳೂರಿನಿಂದ ತರಿಸಿಕೊಳ್ಳಲಾಗಿತ್ತು. ಈ ಕೊರತೆಯನ್ನು “ಮೈಸ್‌
ಕಾಲೋನಿ’ ನೀಗಿಸಲಿ¨

ಅಂತಾರಾಷ್ಟ್ರೀಯ ಗುಣಮಟ್ಟದಂತೆ ಕಾಲೋನಿ ಅಭಿವೃದ್ಧಿಪಡಿಸಲಾಗುತ್ತಿದೆ. ಲಸಿಕೆ ಜತೆ ಇತರೆ
ಪರೀಕ್ಷೆಗಳಿಗೂ ಇದು ಅನುಕೂಲವಾಗಲಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಯಂತ್ರೋಪಕರಣಗಳನ್ನು ಸದ್ಯದಲ್ಲೇ ತರಲಾಗುವುದು. ಕೆಲವೇ ತಿಂಗಳಲ್ಲಿ ಕಾಲೋನಿ ಆರಂಭಗೊಳ್ಳಲಿದೆ.
● ಡಾ. ಎಸ್‌.ಕೆ. ಕಿರಣ್‌, ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯದ ನಿರ್ದೇಶಕ

● ಶರತ್‌ ಭದ್ರಾವತಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.