ಹಿರಿ ಜೀವಗಳ ಅಮಿತೋತ್ಸಾಹ


Team Udayavani, Dec 6, 2019, 10:28 AM IST

bng-tdy-2

ಬೆಂಗಳೂರು: ಒಂದೆಡೆ 95 ವರ್ಷದ ವೃದ್ಧೆ ಸ್ವತಃ ಸ್ಕೂಟರ್‌ ಓಡಿಸಿಕೊಂಡು ಬಂದು ಮತಚಲಾಯಿಸಿದರು. ಇನ್ನೊಂದೆಡೆ ಯುವಕರು ಮತಗಟ್ಟೆಯಿಂದ ದೂರ ಉಳಿದರು. ಕೆಲವರು ದೂರದ ಹೈದರಾಬಾದ್‌ನಿಂದ ಬಂದು ಹಕ್ಕು ಚಲಾಯಿಸಿದರು.

ಆದರೆ, ಕ್ಷೇತ್ರದ ಅಭ್ಯರ್ಥಿಗೆ ಇಲ್ಲಿ ಮತಚಲಾಯಿಸುವ ಅವಕಾಶ ಇರಲಿಲ್ಲ. ಇವುಗಳೊಟ್ಟಿಗೆ ಮತಯಂತ್ರ ಕೈಕೊಟ್ಟು ಕಿರಿಕಿರಿ, ಮತಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿ ಪರದಾಟಇವೆಲ್ಲಾ ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ವೇಳೆ ಕಂಡು ಬಂದ ದೃಶ್ಯಗಳು. ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ 270 ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಶಾಂತಿಯುತ ಮತದಾನ ನಡೆದಿಯಿತು. ಮಹಾಲಕ್ಷ್ಮೀ ಲೇಔಟ್‌ನ ಕಮಲನಗರ ಬಳಿ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ಉಮಾದೇವಿ ಎಂಬ ಕುಬ್ಜ ಮಹಿಳೆ ಬಂದು ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು, “ಓಟ್‌ ಮಾಡದವರು ಬ್ಯಾಡ್‌ ಫೇಲೋಸ್‌. ಮತದಾನ ನಮ್ಮ ಹಕ್ಕು, ಎಲ್ಲರೂ ಎದ್ದು ಬಂದು ಮತ ದಾನ ಮಾಡಿಎಂದರು.

ವಿಶೇಷವಾಗಿ ಕ್ಷೇತ್ರದ ಅಮರವಾಣಿ ಹೈಸ್ಕೂಲ್‌ ಮತಗಟ್ಟೆಯಲ್ಲಿ 97 ವರ್ಷದ ವೃದ್ಧೆ ಗಂಗಮ್ಮ, ಮಗನನ್ನು ಹಿಂದೆ ಕೂರಿಸಿಕೊಂಡು, ಸ್ವತಃ ಸ್ಕೂಟರ್‌ ಚಾಲನೆ ಮಾಡಿಕೊಂಡು ಬಂದು ಮತ ಹಾಕಿದರು. 1952ರಲ್ಲಿ ಚುನಾವಣೆ ಆರಂಭವಾದಾಗಿನಿಂದಲೂ ಮತದಾನ ಮಾಡುತ್ತಿರುವ 90 ವರ್ಷದ ವೃದ್ಧೆ ಸರೋಜಮ್ಮ, ವಿವಿಧ ಚುನಾವಣೆಯಲ್ಲಿ 30ಕ್ಕೂ ಹೆಚ್ಚು ಬಾರಿ ಮತದಾನ ಮಾಡಿದನೀಲಮ್ಮ ಈ ಬಾರಿಯೂ ತಮ್ಮ ಹಕ್ಕು ಚಲಾಯಿಸಿ ಯುವಕರಿಗೆ ಮಾದರಿಯಾದರು.

ಮತಗಟ್ಟೆಗಳ ಬಳಿ ವಯಸ್ಕರು ಹಾಗೂ ಹಿರಿಯರೇ ಹೆಚ್ಚು ಕಂಡು ಬಂದಿದ್ದು, ಯುವ ಜನತೆ ಮತದಾನದಿಂದ ದೂರ

ಉಳಿದರು.

ನಿವೃತ್ತ ನೌಕರರು, ಹಿರಿಯ ನಾಗರಿಕರು, 90 ವರ್ಷ ಮೇಲ್ವಟ್ಟ ವಯೋವೃದ್ಧರು ಬೆಳಗಿನ ಅವಧಿಯಲ್ಲಿ ಹೆಚ್ಚು

ಕಾಣಿಸಿಕೊಂಡರೆ, ಮಧ್ಯಾಹ್ನದ ನಂತರ ಮಹಿಳೆಯರ ಪ್ರಮಾಣ ಹೆಚ್ಚಿತ್ತು. ಸಂಜೆ ಬಿರುಸಿನ ಮತದಾನ ಕಂಡುಬಂತು. ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆಯಾಗಿ ನಂದಿನಿ ಲೇಔಟ್‌ 4ನೇ ಬ್ಲಾಕ್‌, 6ನೇ ಮುಖ್ಯ ರಸ್ತೆಯ ಹತ್ತಕ್ಕೂ ಹೆಚ್ಚು ಮಂದಿ ಚುನಾವಣಾ ಆಯೋಗದ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. 50 ವರ್ಷದಿಂದ ಇದೇ ಬಡಾವಣೆಯಲ್ಲಿದ್ದೇವೆ. ಕಳೆದ ಬಾರಿ ಓಟ್‌ ಹಾಕಿದ್ದೆವು. ಈ ಬಾರಿ ಪಟ್ಟಿಯಲ್ಲಿ ಹೆಸರೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ, ಕಾಂಗ್ರೆಸ್‌ ಅಭ್ಯರ್ಥಿ ಎಂ.ಶಿವರಾಜು ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.