ರಸ್ತೆ ದುರವಸ್ಥೆ: ಅಧಿಕಾರಿಗಳ ವಿರುದ್ಧ ಗರಂ


Team Udayavani, Dec 6, 2019, 11:04 AM IST

huballi-tdy-3

ಹುಬ್ಬಳ್ಳಿ: ತಾಲೂಕಿನಾದ್ಯಂತ ಮಳೆಗೆ ಎಲ್ಲ ರಸ್ತೆಗಳು ಹಾಳಾಗಿದ್ದು, ಸಮರ್ಪಕ ದುರಸ್ತಿ ಕಾರ್ಯ ಕೈಗೊಳ್ಳದ ಬಗ್ಗೆ ತಾಪಂ ಸದಸ್ಯರು ಪಕ್ಷಭೇದ ಮರೆತು ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರು, ರಸ್ತೆ ದುರಸ್ತಿಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕೆಂದು ಒತ್ತಾಯಿಸಿದರು. ರಸ್ತೆ ದುರಸ್ತಿ ಕಡೆಗೆ ಅಧಿಕಾರಿಗಳು ಗಮನ ಹರಿಸದ ಪರಿಣಾಮ ಹದಗೆಟ್ಟಿದ್ದರಿಂದ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದ್ದು, ಕೂಡಲೇ ದುರಸ್ತಿ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನೀವೇ ಜವಾಬ್ದಾರಿ: ಅದರಗುಂಚಿ ಗ್ರಾಮದಲ್ಲಿ ಜಿಎಂಪಿಎಸ್‌ ಶಾಲೆಯಲ್ಲಿ ಎರಡು ಕೊಠಡಿ ನಿಮಾರ್ಣಕ್ಕೆ ಗುಂಡಿ ತೋಡಿ ಹಾಗೇ ಬಿಟ್ಟಿದ್ದಾರೆ. ಈ ಹಿಂದೆ ಕೊಠಡಿಗಳ ಅಳತೆ ಸರಿ ಇಲ್ಲ ಎಂದು ಮುಖೋಪಾಧ್ಯಾಯರು ತಡೆ ಮಾಡಿದ್ದಾರೆ ಎಂದು ಅಧಿಕಾರಿಗಳು ಸಬೂಬು ಹೇಳಿದರು. ಆಗ ಪ್ರತಿಕ್ರಿಯಿಸಿದ ತಾಪಂ ಉಪಾಧ್ಯಕ್ಷ ಗುರುಪಾದಪ್ಪ ಕಮಡೊಳ್ಳಿ, ಅಷ್ಟು ಚಿಕ್ಕ ಕೊಠಡಿಯಲ್ಲಿ ಮಕ್ಕಳು ಅಧ್ಯಯನ ಮಾಡಲು ಸಾಧ್ಯವೇ.

ಶಾಲೆಯ ಆವರಣದಲ್ಲಿ ಏನಾದರೂ ಅವಘಡಗಳು ಸಂಭವಿಸಿದರೇ ಅದಕ್ಕೆ ನೀವೇ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಗುಂಡಳ್ಳಿ, ಈಗಾಗಲೇ ಮುಖೋಪಾಧ್ಯಾಯರು ತಡೆ ನೀಡಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಯ ಗಮನಕ್ಕೆ ತರಲಾಗಿದೆ. ಅಳತೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಕೂಡಲೇ ಕೆಲಸ ಆರಂಭಿಸುವುದಾಗಿ ಹೇಳಿದರು. ಕುಡಿವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧೀನದ ಎಲ್ಲ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪರಿಶೀಲನೆ ನಡೆಸಬೇಕು. ಎಲ್ಲೂ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳನ್ನು ಸದಸ್ಯ ಫ‌ಕೀರಪ್ಪ ಚಾಕಲಬ್ಬಿ ಒತ್ತಾಯಿಸಿದರು.

ಗ್ರಾಮೀಣ ಶಿಕ್ಷಣ ಇಲಾಖೆ: ಮಳೆಯಿಂದಾಗಿ ಶಾಲಾ ಕಟ್ಟಡಗಳು ಹಾನಿಗೀಡಾಗಿದ್ದು, ದುರಸ್ತಿ ಬಗ್ಗೆ ವರದಿ ಸಲ್ಲಿಸಲಾಗಿದೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಹರ ಹಾಗೂ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ ಹೇಳಿದರು. ಗ್ರಾಮೀಣ ಭಾಗದ 69 ಶಾಲೆಗಳಿಗೆ 2 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

3 ವರ್ಷದ ವರದಿಗೆ ಒತ್ತಾಯ: ತಾಲೂಕಿನಲ್ಲಿ ಭೂಸೇನಾ ನಿಗಮದಿಂದ ಕೈಗೊಂಡ ಕಾಮಗಾರಿ ಮಾಹಿತಿ ನೀಡುವಂತೆ ಕೆಲ ಸದಸ್ಯರು ಒತ್ತಾಯಿಸಿದರು. ಹಳೇ ಕಾಮಗಾರಿ ಹಾಗೂ ಮುಕ್ತಾಯವಾದ ಕಾಮಗಾರಿ ಕುರಿತು ಮಾಹಿತಿ ತಂದಿಲ್ಲ. ಸದ್ಯ ಕೆಲಸ ನಡೆಯುತ್ತಿರುವ ಕಾಮಗಾರಿ ಕುರಿತು ಮಾಹಿತಿ ನೀಡಬಹುದು ಎಂದು ಅಧಿಕಾರಿ ಲಕ್ಷ್ಮಣ ನಾಯ್ಕ ಹೇಳಿದಾಗ, ಸದಸ್ಯರು ಸುತಾರಾಂ ಒಪ್ಪಲಿಲ್ಲ.

ಭೂಸೇನಾ ನಿಗಮದ ಕಾಮಗಾರಿ ಕುರಿತು ಒಳ್ಳೆಯ ಅಭಿಪ್ರಾಯಗಳಿಲ್ಲ, ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ ಕೈಗೊಂಡ ಕಾಮಗಾರಿಗಳ ಹಾಗೂ ಮುಕ್ತಾಯಗೊಂಡ ಕಾಮಗಾರಿಗಳ ಸಂಪೂರ್ಣ ವರದಿ ನೀಡಬೇಕು ಎಂದು ಸದಸ್ಯ ಫರ್ವೇಜ್‌ ಬ್ಯಾಹಟ್ಟಿ ಒತ್ತಾಯಿಸಿದಾಗ, ಎಲ್ಲ ಸದಸ್ಯರು ಸಹಮತ ವ್ಯಕ್ತಪಡಿಸಿದರು. ತಾಪಂ ಅಧ್ಯಕ್ಷೆ ಚನ್ನಮ್ಮ ಗೋರ್ಲ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯರು, ಇಒ ಎಂ.ಎಂ. ಸವದತ್ತಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಿ.ಎಚ್‌. ಅದರಗುಂಚಿ ನಿರೂಪಿಸಿದರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.