ಸಂತೆ ಸುರಕ್ಷತೆ ಪರಿಶೀಲಿಸಿದ ಪಿಎಸ್‌ಐ

ಕುಡಿಯುವ ನೀರು-ಶೌಚಾಲಯ ವ್ಯವಸ್ಥೆಗೆ ವ್ಯಾಪಾರಸ್ಥರ ಒತ್ತಾಯ

Team Udayavani, Dec 6, 2019, 12:55 PM IST

6-December-9

ವಾಡಿ: ಪಟ್ಟಣದಲ್ಲಿ ನಡೆಯುವ ವಾರದ ಸಂತೆಗೆ ಬರುವ ವಿವಿಧ ಗ್ರಾಮಗಳ ತರಕಾರಿ ವ್ಯಾಪಾರಿಗಳಿಗೆ ಪುರಸಭೆ ಅಧಿಕಾರಿಗಳು ಮತ್ತು ಸ್ಥಳೀಯರು ನೀಡುವ ಕಿರಿಕಿರಿ ಪ್ರಸಂಗ ಮುಂದುವರಿದಿದ್ದು, ಈ ಗುರುವಾರವೂ ವ್ಯಾಪಾರಿಗಳು ಕೂಡಲು ಸ್ಥಳಾವಕಾಶಕ್ಕಾಗಿ ಪರದಾಡಿದ ಘಟನೆ ನಡೆಯಿತು.

ಗುರುವಾರ ಬೆಳಗ್ಗೆ ವಿವಿಧೆಡೆಯಿಂದ ತರಕಾರಿ ಗಂಟುಗಳೊಂದಿಗೆ ಮಾರುಕಟ್ಟೆಗೆ ಬಂದವರು ತಮಗೆ ಅನುಕೂಲವಾದ ಸ್ಥಳದಲ್ಲಿ ಕುಳಿತು ವ್ಯಾಪಾರಕ್ಕೆ ಅಣಿಯಾಗುತ್ತಿದ್ದರು. ಎಂದಿನಂತೆ ಇಲ್ಲಿನ ಭೀಮನಗರ-ಅಂಬೇಡ್ಕರ್‌ ವೃತ್ತ ಮಾರ್ಗದ ರಸ್ತೆ ಬೀದಿಯಲ್ಲಿ ತರಕಾರಿ ವ್ಯಾಪಾರಕ್ಕೆ ಕೂಡಲು ಸ್ಥಳೀಯ ವ್ಯಾಪಾರಿಗಳು ಅವಕಾಶ ನೀಡದೇ ಜಗಳ ನಡೆಸುತ್ತಿದ್ದ ಪ್ರಸಂಗ ಕಂಡುಬಂದಿತು.

ದೊಡ್ಡ ವ್ಯಾಪಾರಿಗಳು ಸ್ಥಳ ಕಬಳಿಸುವ ಮೂಲಕ ಚಿಲ್ಲರೆ ವ್ಯಾಪಾರಿಗಳನ್ನು ಹೆದರಿಸಿ ಓಡಿಸುವ ಕೃತ್ಯಕ್ಕೆ ಮುಂದಾಗಿದ್ದರಿಂದ ಹೊರ ಊರಿನ ತರಕಾರಿ ವರ್ತಕರು ದಿಕ್ಕು ಕಾಣದೆ ಚಿಂತೆಗೀಡಾಗಿದ್ದರು. ಪುರಸಭೆಯ ಪೌರಕಾರ್ಮಿಕರು ಬಂದು ಆಜಾದ್‌ ವೃತ್ತದ ರಸ್ತೆಯಲ್ಲಿ ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದ್ದರಿಂದ ಎಲ್ಲಿಗೆ ಹೋಗಬೇಕು ಎಂಬುದೇ ತಿಳಿಯುತ್ತಿಲ್ಲ. ಪ್ರತಿ ಗುರುವಾರ ಇದೇ ಕಿರಿಕಿರಿಯಾಗಿದೆ ಎಂದು ವ್ಯಾಪಾರಿಗಳು ಮಾಧ್ಯಮದವರ ಎದುರು ಅಳಲು ತೋಡಿಕೊಂಡರು.

ಇದೇ ವೇಳೆ ಸಂತೆ ನಡೆಯುವ ಸ್ಥಳಕ್ಕಾಗಮಿಸಿ ವ್ಯಾಪಾರದ ಬೀದಿಗಳನ್ನು ಪರಿಶೀಲಿಸಿದ ವಾಡಿ ಪೊಲೀಸ್‌ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಗಂಗಮ್ಮಾ, ಬೀದಿ ಸ್ಥಳಕ್ಕಾಗಿ ಕಾದಾಡುವವರನ್ನು ಎಚ್ಚರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇಕ್ಕಟ್ಟಾದ ಗಲ್ಲಿ ರಸ್ತೆಯಲ್ಲಿ ನಡೆಯುತ್ತಿದ್ದ ಸಂತೆ ಮಾರ್ಗದಲ್ಲಿ ಸಂಚರಿಸುವ ಮೂಲಕ ಜೇಬುಗಳ್ಳರು ಮತ್ತು ಮೊಬೈಲ್‌ ಕಳ್ಳರಿಂದ ಎಚ್ಚರದಿಂದಿರಿ. ಕಳ್ಳರು ಕಂಡುಬಂದರೆ ತಕ್ಷಣ ಠಾಣೆಗೆ ಮಾಹಿತಿ ಕೊಡಿ. ಯಾವುದೇ ಕಾರಣಕ್ಕೂ ವ್ಯಾಪಾರಿಗಳು ಸ್ಥಳಾವಕಾಶಕ್ಕಾಗಿ ಕಾದಾಡಬಾರದು.

ಎಲ್ಲರಿಗೂ ವ್ಯಾಪಾರ ಮಾಡಲು ಅವಕಾಶವಿದ್ದು, ಸಹಕರಿಸಿಕೊಂಡು ಹೋಗಿರಿ ಎಂದು ತಾಕೀತು ಮಾಡಿದರು. ವಾರದ ಸಂತೆಯೊಳಗೆ ವಾಹನಗಳು ಬರದಂತೆ ಸುರಕ್ಷತೆ ಒದಗಿಸಲಾಗುವುದು. ಸಂತೆ ನಡೆಯುವ ಕಾರಣಕ್ಕೆ ಪ್ರತಿ ಗುರುವಾರ ಒಂದು ದಿನ ಮಾತ್ರ ಮೌಲಾನಾ ಅಬ್ದುಲ್‌ ಕಲಾಂ ಆಜಾದ್‌ ಚೌಕ್‌
ಮತ್ತು ಅಂಬೇಡ್ಕರ್‌ ವೃತ್ತದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳ ಮಾರ್ಗ ಬಸವೇಶ್ವರ ವೃತ್ತದತ್ತ ಬದಲಿಸುವ ಕುರಿತು ಯೋಚಿಸುವುದಾಗಿ ಪಿಎಸ್‌ಐ ಗಂಗಮ್ಮಾ ಹಣ್ಣು-ತರಕಾರಿ ವ್ಯಾಪಾರಿಗಳಿಗೆ ತಿಳಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪುರಸಭೆ ಸದಸ್ಯ ಬಿಜೆಪಿಯ ಭೀಮಶಾ ಜಿರೊಳ್ಳಿ, ಕೊಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ ಹಾಗೂ ಮಾನವ ಬಂಧುತ್ವ ವೇದಿಕೆಯ ತಾಲೂಕು ಅಧ್ಯಕ್ಷ ಶ್ರವಣಕುಮಾರ ಮೌಸಲಗಿ, ವಾಡಿಯಲ್ಲಿ ವಾರದ ಸಂತೆಗೆ ಸೂಕ್ತವಾದ ಸ್ಥಳವಿಲ್ಲ. ಗಲ್ಲಿ ರಸ್ತೆಗಳ ಬೀದಿಯಲ್ಲಿ ತರಕಾರಿ ಸಂತೆ ನಡೆಯುತ್ತಿದೆ.

ಹೊರಗಿನಿಂದ ಬರುವ ವ್ಯಾಪಾರಿಗಳಿಗೆ ಪುರಸಭೆ ಅಧಿಕಾರಿಗಳು ಕಿರಿಕಿರಿ ನೀಡುತ್ತಿದ್ದಾರೆ. ಕೆಲ ಸ್ಥಳೀಯ ವ್ಯಾಪಾರಿಗಳು ಅಧಿಕಾರಿಗಳ ಮೂಲಕ ಪರ ಊರಿನಿಂದ ಬರುವ ವ್ಯಾಪಾರಿಗಳ ಗಂಟುಮೂಟೆಗಳನ್ನು ಜಪ್ತಿ ಮಾಡಿಕೊಂಡು ಹೋಗುತ್ತಿದ್ದಾರೆ.

ಈ ದೌರ್ಜನ್ಯ ನಿಲ್ಲಬೇಕು. ಸಂತೆಗೆ ಪೊಲೀಸ್‌ ಭದ್ರತೆ ಒದಗಿಸಬೇಕು. ಮಾರುಕಟ್ಟೆಗೆ ವಾಹನಗಳು ಬರದಂತೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಮತ್ತು ಶೌಚಾಲಯದಂತಹ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸುವಲ್ಲಿ ನಿರ್ಲಕ್ಷಿಸಿದರೇ ತರಕಾರಿಯೊಂದಿಗೆ ಬೀದಿಯಲ್ಲಿ ಕುಳಿತು ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.