ಜೆಸಿಟಿಯುನಿಂದ ಜ.8ರಂದು ಸಾರ್ವತ್ರಿಕ ಮುಷ್ಕರ
Team Udayavani, Dec 6, 2019, 3:51 PM IST
ಬಂಗಾರಪೇಟೆ: ದೇಶದಲ್ಲಿ ದುಡಿಯುವ ವರ್ಗದ ರಕ್ಷಣೆಗೆ ಪರ್ಯಾಯ ಆರ್ಥಿಕ ನೀತಿಗಳ ಅನುಷ್ಠಾನಕ್ಕಾಗಿ 12 ಅಂಶಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಜ.8 ರಂದು ಜೆಸಿಟಿಯುನಿಂದ ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ.
ಅದರಲ್ಲಿಕಾರ್ಮಿಕರು ಭಾಗವಹಿಸಬೇಕೆಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಶ್ರೀನಿವಾಸ್ ಮನವಿ ಮಾಡಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಸಭೆ ಸೇರಿ ಮುಖಂಡರೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಕಾರ್ಮಿಕರ ಹಕ್ಕುಗಳನ್ನು ಕೇಂದ್ರ ಸರ್ಕಾರವು ರಕ್ಷಣೆ ಮಾಡುತ್ತಿಲ್ಲ. ಇದರಿಂದ ಸಾಕಷ್ಟು ಸಮಸ್ಯೆ ಎದುರಿಸಬೇಕಾಗಿದೆ. ಕಾರ್ಮಿಕರ ರಕ್ಷಣೆಗಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ದೇಶದಲ್ಲಿ ಗುತ್ತಿಗೆ ಪದ್ಧತಿ ನಿಯಂತ್ರಣಕ್ಕಾಗಿ, ಕೂಲಿಕಾರ್ಮಿಕರಿಗೆ ಸಮಾನ ವೇತನಕ್ಕಾಗಿ, ಗುತ್ತಿಗೆಯನ್ನು ಕಾಯಂಗೆ ಶಾಸನ ಮಾಡಲು ಹಾಗೂ ಎಫ್ಟಿಇ, ನೀಮ್, ನೀಸಾ ಮುಂತಾದ ಪದ್ಧತಿ ರದ್ದು ಮಾಡಬೇಕು. ಕಾರ್ಪೊರೇಟ್ ಬಂಡವಾಳ ಪರ ಕಾರ್ಮಿಕ ವಿರೋಧಿ ಕಾನೂನುಗಳ ಸಂಹಿತೀಕರಣವನ್ನು ವಿರೋಧಿಸಲು ಹಾಗೂ ಕಟ್ಟುನಿಟ್ಟಿನ ಕಾನೂನು ಜಾರಿ ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಲು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ಸಿಐಟಿಯು ತಾಲೂಕು ಸಂಚಾಲಕ ಕೇಶವರಾವ್, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಶ್ರೀನಿವಾಸ್, ಎಐಸಿಸಿಟಿಯು ಪ್ರಭು, ಶಿವು, ಅಪ್ಪಯ್ಯಣ್ಣ, ಹನುಮಂತರಾಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ