ನನ್ನ ಪತಿಯನ್ನು ಕೊಂದವರನ್ನು ಸಾಯಿಸಿ; ಪೊಲೀಸರು ಮಾಡಿದ್ದು ಸರಿ- ಏನಂತಾರೆ ಆರೋಪಿಗಳ ಮನೆಯವರು?


Team Udayavani, Dec 6, 2019, 8:29 PM IST

Hyderabad-Encounter-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೈದರಾಬಾದ್: ಪಶುವೈದ್ಯೆಯನ್ನು ಅಮಾನುಷವಾಗಿ ಅತ್ಯಾಚಾರ ಮಾಡಿ ಬಳಿಕ ಬರ್ಭರವಾಗಿ ಸುಟ್ಟು ಕೊಲೆ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಇಂದು ಮುಂಜಾನೆ ಎನ್ ಕೌಂಟರ್ ನಲ್ಲಿ ಸಾಯಿಸಿರುವ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿದೆ. ಪೊಲೀಸರ ಈ ಕ್ರಮಕ್ಕೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಆದರೆ ಈ ಎನ್ ಕೌಂಟರ್ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಯವರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಎನ್ ಕೌಂಟರ್ ಪ್ರಕರಣದಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ಅತ್ಯಾಚಾರ ಆರೋಪಿಗಳಾದ ಮಹಮ್ಮದ್ ಆರೀಫ್, ಚಿಂತಕುಲ ಚೆನ್ನಕೇಶವುಲು, ಜೊಲ್ಲು ಶಿವ ಹಾಗೂ ಜೊಲ್ಲು ನವೀನ ಮನೆಯವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.


ಎನ್ ಕೌಂಟರ್ ಸುದ್ದಿ ತಿಳಿದು ಕುಸಿದುಬಿದ್ದ ಮಹಮ್ಮದ್ ಆರೀಫ್ ಕುಟುಂಬ

ಈ ಅತ್ಯಾಚಾರ ಪ್ರಕರಣದ ಮೊದಲನೇ ಆರೋಪಿ ಮಹಮ್ಮದ್ ಆರೀಫ್. ಇಂದು ಬೆಳಿಗ್ಗೆ ನಡೆದ ಪೊಲೀಸ್ ಎನ್ ಕೌಂಟರ್ ಸುದ್ದಿ ಆರೀಫ್ ಕುಟುಂಬಕ್ಕೆ ಪೊಲೀಸರು ನೀಡಿದ ಮಾಹಿತಿಯಿಂದ ತಿಳಿದುಬಂದಿದೆ. ಸುದ್ದಿ ತಿಳಿದ ತಕ್ಷಣ ಆತನ ತಂದೆ ಮತ್ತು ಮನೆಯವರು ಕುಸಿದುಬಿದ್ದಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆರೀಫ್ ತಂದೆ ಗದ್ಗದಿತರಾದರು. ಇನ್ನು ಆರೀಫ್ ಸ್ನೇಹಿತ ಈ ಘಟನೆಯನ್ನು ಖಂಡಿಸಿದ್ದಾನೆ. ಈ ನಾಲ್ವರನ್ನು ಪೊಲೀಸರು ಯೋಜನೆ ಮಾಡಿ ಸಾಯಿಸಿದ್ದಾರೆ ಎಂದಾತ ಆರೋಪಿಸಿದ್ದಾನೆ.

ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಸಾಯಿಸಿದ ಬಳಿಕ ಮನೆಗೆ ಬಂದಿದ್ದ ಮಹಮ್ಮದ್ ಆರೀಫ್ ತನ್ನ ತಾಯಿಯ ಬಳಿ ತಾನು ಚಲಾಯಿಸುತ್ತಿದ್ದ ಲಾರಿ ಒಂದು ಮಹಿಳೆಯಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದು ಆಕೆ ಮೃತಪಟ್ಟಲು ಎಂದು ಭಯದಿಂದ ಹೇಳಿಕೊಂಡಿದ್ದ. ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ನನ್ನ ಪತಿಯನ್ನು ಕೊಂದವರನ್ನು ಸಾಯಿಸಿ ಎಂದ ನವವಿವಾಹಿತೆ!
ಇನ್ನು ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಇನ್ನೊಬ್ಬ ಆರೋಪಿಯಾಗಿರುವ ಚಿಂತಕುಲ ಚೆನ್ನಕೇಶವುಲು ಪತ್ನಿ ತನ್ನ ಪತಿ ಪೊಲೀಸ್ ಎನ್ ಕೌಂಟರ್ ನಲ್ಲಿ ಮಡಿದ ಸುದ್ದಿ ಕೇಳಿ ಕೆಂಡಾಮಂಡಲವಾಗಿದ್ದಾಳೆ.

ವಿಚಾರಣೆ ನಡೆಸಿ ಬಿಟ್ಟು ಕಳಿಸುತ್ತೇವೆ ಎಂದು ನನ್ನ ಪತಿಯನ್ನು ಕರೆದೊಯ್ದು ಇದೀಗ ಆತನನ್ನು ಕೊಂದ ಪೊಲೀಸರನ್ನು ತಾನು ಕ್ಷಮಿಸುವುದಿಲ್ಲ, ನಮ್ಮ ವಿವಾಹವಾಗಿ ಆರು ತಿಂಗಳುಗಳಷ್ಟೇ ಕಳೆದಿದೆ ಎಂದು ರೋಧಿಸಿದ್ದಾಳೆ. ‘ನನ್ನ ಪತಿಯನ್ನು ಕೊಂದವರನ್ನು ಸಾಯಿಸಿಬಿಡಿ, ಅವರಿಲ್ಲದೆ ನಾನೂ ಬದುಕುವುದಿಲ್ಲ’ ಎಂದು ಆಕೆ ಆಕ್ರೋಶದಿಂದ ನುಡಿದಿದ್ದಾಳೆ.

ಪೊಲೀಸರು ಸರಿಯಾದುದನ್ನೇ ಮಾಡಿದ್ದಾರೆ
ಈ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಜೊಲ್ಲು ಶಿವ ಮತ್ತು ಜೊಲ್ಲು ನವೀನ ಕುಟುಂಬದವರು ಪೊಲೀಸರು ಈ ಕ್ರಮ ಸರಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಇವರ ತಂದೆಗೆ ಮತ್ತು ಮನೆಯವರಿಗೆ ಮಾಧ್ಯಮದವರು ಸಂಪರ್ಕ ಮಾಡುವವರೆಗೆ ತಮ್ಮ ಮಗ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿರುವ ವಿಚಾರವೇ ತಿಳಿದಿರಲಿಲ್ಲ.

ಅಮಾಯಕಿಯನ್ನು ಅಮಾನುಷವಾಗಿ ಕೊಂದವರನ್ನು ಪೊಲೀಸರು ಸಾಯಿಸಿ ಸರಿಯಾದುದನ್ನೇ ಮಾಡಿದ್ದಾರೆ. ಆದರೆ ಇಂತಹುದೇ ಇನ್ನಿತರ ಪ್ರಕರಣಗಳ ಆರೋಪಿಗಳಿಗೆ ಯಾಕೆ ಈ ರೀತಿಯ ಶಿಕ್ಷೆಯಾಗಿಲ್ಲ ಎಂದು ಶಿವ ಮತ್ತು ನವೀನರ ಮಾವ ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಪಶುವೈದ್ಯೆಯನ್ನು ಅಮಾನುಷವಾಗಿ ಬಲಿ ಪಡೆದ ಕಾಮುಕರನ್ನು ಎನ್ ಕೌಂಟರ್ ಮಾಡಿದ ಕ್ರಮವನ್ನು ಹಲವರು ಸಮರ್ಥಿಸುತ್ತಿದ್ದಾರೆ. ಆದರೆ ಆರೋಪಿಗಳ ಕುಟುಂಬ ಸದಸ್ಯರಿಗೆ ಈ ಘಟನೆಯ ಸುದ್ದಿ ಆಘಾತವನ್ನುಂಟುಮಾಡಿದೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.