ಚತುರ್ವಿಧ ಪ್ರಾರ್ಥನ ಯೋಜನೆ; ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು


Team Udayavani, Dec 7, 2019, 12:05 AM IST

Admar-Mutt–11

ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ ಕುರಿತು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ತಿಳಿಸಿದರು.

ಪರ್ಯಾಯೋತ್ಸವಕ್ಕೆ ಮುನ್ನ ನಡೆಯುವ ನಾಲ್ಕನೆಯದಾದ ಭತ್ತ ಮುಹೂರ್ತ ಶುಕ್ರವಾರ ಜರುಗಿದಾಗ ಆಶೀರ್ವಚನ ನೀಡಿದ ಶ್ರೀಗಳು, ಇವೇ ನಮ್ಮ ಪರ್ಯಾಯ ಕಾಲದ ಯೋಜನೆಗಳು ಎಂದರು.

ಕಾಲಕಾಲಕ್ಕೆ ಮಳೆ ಬರಬೇಕು. ಅತ್ತ ಮೂಲ ಸೌಕರ್ಯ ವಿಸ್ತಾರ, ಇತ್ತ ಪರಿಸರವಾದಿಗಳ ಅಡೆತಡೆ -ಇವು ಕಂಡುಬರುತ್ತಿರುವಾಗ ಸಸ್ಯ ಶ್ಯಾಮಲೆ ವೃದ್ಧಿಯಾಗಲಿ, ಯುದ್ಧ ಇತ್ಯಾದಿಗಳು ನಡೆಯದೆ ಕ್ಷೋಭೆ ರಹಿತವಾಗಿ ಇರಲಿ, ಸಜ್ಜನರಿಗೆ ನೆಮ್ಮದಿ, ದುರ್ಜನರು ನಿಯಂತ್ರಣದ ಲ್ಲಿ ಇರುವಂತೆ ಆಡಳಿತ ವಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

2 ವರ್ಷಗಳ ಪರ್ಯಾಯ ನಿರ್ವಿಘ್ನವಾಗಿ ನಡೆಯಲಿ ಎಂದು ಪ್ರಾರ್ಥಿಸಿ 4 ಮುಹೂರ್ತಗಳನ್ನು ವಾದಿರಾಜಸ್ವಾಮಿಗಳು ಆರಂಭಿಸಿ ದರು. ಅದರಂತೆ ನಾಲ್ಕೂ ಮುಹೂರ್ತ ಗಳು ನಡೆದಿವೆ. ನಾವು ಗುರುಶಿಷ್ಯರು ಸೇರಿ ಪರ್ಯಾಯ ಪೂಜೆಯನ್ನು ನಡೆಸಲಿದ್ದೇವೆ ಎಂದರು.

ಆರಂಭದಲ್ಲಿ ಅದಮಾರು ಮಠದಿಂದ ಪ್ರಾರ್ಥನೆ ಸಲ್ಲಿಸಿ ಅಕ್ಕಿಮುಡಿ ಗಳನ್ನು ಶ್ರೀ ಚಂದ್ರೇಶ್ವರ, ಶ್ರೀ ಅನಂತೇಶ್ವರ ದೇಗುಲ, ಶ್ರೀ ಕೃಷ್ಣ ಮಠಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಅಕ್ಕಿಮುಡಿಗಳನ್ನು ಬಡಗು ಮಾಳಿಗೆಯಲ್ಲಿರಿಸಿ ಪೂಜಿಸಲಾಯಿತು. ಕಟ್ಟಿಗೆ ರಥಕ್ಕೆ ಶಿಖರ ಪ್ರತಿಷ್ಠೆಯನ್ನು ನಡೆಸಲಾಯಿತು.

ಶಾಸಕ ರಘುಪತಿ ಭಟ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಹಿರಿಯರಾದ ಎ.ಜಿ. ಕೊಡ್ಗಿ, ಶ್ರೀಕೃಷ್ಣ ಸೇವಾ ಬಳಗದ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಉಪಸ್ಥಿತರಿದ್ದರು.

ಕೊನೆಯದು ಭತ್ತ ಮುಹೂರ್ತ
ಪರ್ಯಾಯ ಪೂಜಾ ಕೈಂಕರ್ಯ ವಹಿಸಿಕೊಳ್ಳುವುದಕ್ಕೆ ಪೂರ್ವಭಾವಿ ಯಾಗಿ ಬಾಳೆಮುಹೂರ್ತ, ಅಕ್ಕಿ ಮುಹೂರ್ತ, ಕಟ್ಟಿಗೆ ಮುಹೂರ್ತ ಮತ್ತು ಭತ್ತ ಮುಹೂರ್ತಗಳನ್ನು ನಡೆಸುವುದು ಉಡುಪಿಯ ಅಷ್ಟ ಮಠಗಳ ಪರಂಪರೆ. ಶ್ರೀಕೃಷ್ಣ ಮಠ ಮತ್ತು ಪರ್ಯಾಯ ಕಾಲದಲ್ಲಿ ಅನ್ನದಾನಕ್ಕೆ ಮಹತ್ವವಿರುವುದರಿಂದ ಅದಕ್ಕೆ ಸಂವಾದಿಯಾಗಿ ಈ ನಾಲ್ಕು ಮುಹೂರ್ತಗಳಿವೆ.

ಸಾಮಾನ್ಯವಾಗಿ ಭತ್ತದ ಮುಹೂರ್ತದಲ್ಲಿ ಸ್ವಾಮೀಜಿಯವರು ಇರುವುದಿಲ್ಲ. ಆದರೆ ಈ ಬಾರಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಪರ್ಯಾಯಕ್ಕೆ ಸನ್ನಿಹಿತವಾದ ಮುಹೂರ್ತ ಇದು. ಮೊದಲ 3 ಮುಹೂರ್ತಗಳು ಪರ್ಯಾಯ ಮಠದಲ್ಲಿ ನಡೆದರೆ ಕೊನೆಯ ಮುಹೂರ್ತ ಶ್ರೀಕೃಷ್ಣ ಮಠದ ಉಗ್ರಾಣದಲ್ಲಿ ನಡೆಯುವುದು ವಿಶೇಷ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.