ಉನ್ನಾವ್ ಸಂತ್ರಸ್ತೆ ಮನೆಗೆ ಇಬ್ಬರು ಸಚಿವರ ಭೇಟಿ; ಗ್ರಾಮಸ್ಥರಿಂದ ಘೇರಾವ್, ಆಕ್ರೋಶ
ಇಬ್ಬರು ಸಚಿವರು ಭೇಟಿ ನೀಡಲು ಆಗಮಿಸಿದ್ದ ವೇಳೆ ಉನ್ನಾವ್ ಗ್ರಾಮಸ್ಥರ ತೀವ್ರ ಆಕ್ರೋಶ
Team Udayavani, Dec 7, 2019, 5:40 PM IST
ಲಕ್ನೋ: ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಶನಿವಾರ ಸಂಜೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಇಬ್ಬರು ಸಚಿವರು ಭೇಟಿ ನೀಡಲು ಆಗಮಿಸಿದ್ದ ವೇಳೆ ಉನ್ನಾವ್ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಲಕ್ನೋದಿಂದ 65 ಕಿಲೋ ಮೀಟರ್ ದೂರದಲ್ಲಿರುವ ಉನ್ನಾವ್ ಗ್ರಾಮಕ್ಕೆ ಭೇಟಿ ನೀಡುವಂತೆ ಸಿಎಂ ಯೋಗಿ ಸಚಿವರಾದ ಕಮಲ್ ರಾಣಿ ವರುಣ್ ಮತ್ತು ಸ್ವಾಮಿ ಪ್ರಸಾದ್ ಯಾದವ್ ಅವರಿಗೆ ಸೂಚನೆ ನೀಡಿದ್ದರು. ಉನ್ನಾವ್ ಸಂತ್ರಸ್ತೆ ಸಾವನ್ನಪ್ಪಿರುವ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ಅಲ್ಲದೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಇಂದು ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದರು.
ಏತನ್ಮಧ್ಯೆ ಉನ್ನಾವ್ ಗ್ರಾಮಕ್ಕೆ ಸಚಿವರ ಕಾರು ಆಗಮಿಸುತ್ತಿದ್ದಂತೆಯೇ ಭಾರೀ ಸಂಖ್ಯೆಯಲ್ಲಿ ಒಗ್ಗೂಡಿದ ಗ್ರಾಮಸ್ಥರು..ಈಗ ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿ ಘೋಷಣೆ ಕೂಗಲು ಆರಂಭಿಸಿದ್ದರು. ಈ ವೇಳೆ ಪೊಲೀಸರು ಆಕ್ರೋಶಿತ ಗ್ರಾಮಸ್ಥರು ಕಾರನ್ನು ತಡೆಯದಂತೆ ಪ್ರಯತ್ನಿಸಿರುವುದಾಗಿ ವರದಿ ತಿಳಿಸಿದೆ.
ಕೊನೆಗೂ ಸಂತ್ರಸ್ತೆ ಮಹಿಳೆ ಮನೆಗೆ ಭೇಟಿ ನೀಡಿ ಮಾತನಾಡಿದ ಸಚಿವ ಮೌರ್ಯ ಅವರು, ಆರೋಪಿಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಯಾವ ರೀತಿಯ ತನಿಖೆ ನಡೆಸಬೇಕೆಂದು ನೀವು(ಕುಟುಂಬ) ಬಯಸುತ್ತಿರೋ ಅದೇ ರೀತಿ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಇದು ರಾಜಕೀಯ ಮಾಡುವ ವಿಚಾರವಲ್ಲ ಎಂದು ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು