ಕೂಲಿ ಕಾರ್ಮಿಕರಿಗೆ ಶ್ರಮಯೋಗಿ ಮಾನ್ಧನ್ ಆಸರೆ
Team Udayavani, Dec 8, 2019, 3:00 AM IST
ಗುಂಡ್ಲುಪೇಟೆ: ಕೂಲಿ ಕಾರ್ಮಿಕರು ತಮ್ಮ ವೃದ್ಧಾಪ್ಯದಲ್ಲಿ ತಮ್ಮ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಬಾರದು ಎಂಬ ಸದುದ್ದೇಶದಿಂದ ಕೇಂದ್ರ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಶ್ರಮಯೋಗಿ ಮಾನ್ಧನ್ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ಕಾರ್ಮಿಕ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣ ಮೂರ್ತಿ ಹೇಳಿದರು.
ಪಟ್ಟಣದ ಟಿ.ಬಿ.ಬಡಾವಣೆಯಲ್ಲಿರುವ ತಾಲೂಕು ಬೀಡಿ ಕಾರ್ಮಿಕರ ಅಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಿಂಚಿಣಿ ಅದಾಲತ್ ಮತ್ತು ಆರೋಗ್ಯ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಕೂಲಿ ಕಾರ್ಮಿಕರು ತಮ್ಮ ನಿವೃತ್ತಿ ಜೀವನದಲ್ಲಿ ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ಶ್ರಮಯೋಗಿ ಮಾನ್ಧನ್ಯೋಜನೆ (ಪಿಎಂಎಸ್ವೈಎಂ) ಅಸಂಘಟಿಕ ಕಾರ್ಮಿಕರ ಕನಿಷ್ಠ ಖಾತರಿ ಪಿಂಚಣಿ ಯೋಜನೆ ಜಾರಿಗೆ ತಂದಿದ್ದಾರೆ.
ಈ ಯೋಜನೆಯ ಫಲಾನುಭವಿಗೆ 60 ವರ್ಷಗಳ ನಂತರ ಜೀವನ ಪರ್ಯಂತ ಮಾಸಿಕ ಮೂರು ಸಾವಿರ ರೂ.ಗಳನ್ನು ಪಿಂಚಣಿ ರೂಪದಲ್ಲಿ ಪಡೆಯಬಹುದಾಗಿದೆ. ಈ ಪಿಂಚಣಿ ಕಾರ್ಡ್ ಪಡೆಯಲು 18-40 ವರ್ಷಗಳಾಗಿರಬೇಕು. ಮಾಸಿಕ ಅದಾಯ ಹದಿನೈದು ಸಾವಿರ ರೂ.ಗಳನ್ನು ದಾಟಿರಬಾರದು ಎಂದು ಮಾಹಿತಿ ನೀಡಿದರು.
ದಾಖಲಾತಿಗಾಗಿ ಅಧಾರ್ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಕಡ್ಡಾಯವಾಗಿದೆ. ತಾಲೂಕಿನ ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಮಿಕ ಇಲಾಖೆ ಅಧಿಕಾರಿ ಗಣೇಶ್ ಮಾತನಾಡಿ, ಕೇಂದ್ರ ಸರ್ಕಾರ ಈಗಾಗಲೇ ಕೂಲಿ ಕಾರ್ಮಿಕರ ಶ್ರಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಆದರೂ ಸಹ ಅನಕ್ಷರತೆಯ ಕಾರಣ ಕೂಲಿ ಕಾರ್ಮಿಕರು ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.
ಕೂಲಿ ಕಾರ್ಮಿಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಇದರಿಂದ ಇಲಾಖೆಯ ಎಲ್ಲಾ ಯೋಜನೆಯ ಅನುಕೂಲತೆಯನ್ನು ಪಡೆಯಲು ಸಾಧ್ಯವಾಗಲಿದೆ. ಇಲಾಖೆ ಮೂಲಕವೂ ಯೋಜನೆಗಳ ಬಗ್ಗೆ ತಾಲೂಕು ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಮಿಕ ಸಂಘಟನೆ ಅಧ್ಯಕ್ಷ ಸಿದ್ಧರಾಜು, ಕಾರ್ಮಿಕರ ಆಸ್ಪತ್ರೆಯ ವೈದ್ಯೆ ಡಾ.ಸಂಜೀತಾ, ನರ್ಸ್ ಜಿ.ಅನಿತಾ ಹಾಗೂ ಅಟೆಂಡರ್ ರಂಗಸ್ವಾಮಿ ಸೇರಿದಂತೆ ಕೂಲಿ ಕಾರ್ಮಿಕರು, ಕುಟುಂಬದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ