ಶಾಸಕರು ರಾಜೀನಾಮೆಯಿಂದ ಬಿಜೆಪಿ ಆಡಳಿತಕ್ಕೆ ಬಂದಿದೆ ವಿನಃ ನಮ್ಮ ಪಕ್ಷಕ್ಕೆ ಬಂದ ಕಾರಣವಲ್ಲ
Team Udayavani, Dec 8, 2019, 12:35 PM IST
ಹುಬ್ಬಳ್ಳಿ: ಕಾಂಗ್ರೆಸ್ – ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಕ್ಕೆ ನಮ್ಮ ಪಕ್ಷ ಆಡಳಿತಕ್ಕೆ ಬಂದಿದೆ ವಿನಃ ಅವರು ನಮ್ಮ ಪಕ್ಷಕ್ಕೆ ಬಂದಿರುವುದಕ್ಕೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಕೋರ್ಟ್ ತೀರ್ಪಿನ ಮೇರೆಗೆ ಚುನಾವಣೆಗೆ ಸ್ಪರ್ಧಿಸಲು ನಮ್ಮ ಪಕ್ಷದಿಂದ ಟಿಕೇಟ್ ಕೇಳಿದರು. ಕೊಟ್ಟಿದ್ದೇವೆ. ಅವರಿಗೆ ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ. ಮುಂದೆಯೂ ನ್ಯಾಯ ದೊರೆಯುತ್ತದೆ. ಇವರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಮಾಡುವುದಿಲ್ಲ ಅನರ್ಹ ಶಾಸಕರಿಗೆ ಮಂತ್ರಿ ಸ್ಥಾನ ನೀಡುವುದರ ಕುರಿತು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.
ಉಪಚುನಾವಣೆಯಲ್ಲಿ 15 ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನೂ ಆಪರೇಷನ್ ಕಮಲ ಮಾಡುವುದಿಲ್ಲ. ಕಾಂಗ್ರೆಸ್ ನಲ್ಲಿ ಶಾಸಕರು ಬೇಸರದಲ್ಲಿದ್ದಾರೆ, ಅಲ್ಲಿಯ ಶಾಸಕರು ಬಂದರೆ ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ವಿಚಾರ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ ಯಾರೇ ಬಂದರ ಕರೆದುಕೊಳ್ಳುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ