ಕಾಂಗ್ರೆಸ್, ಜೆಡಿಎಸ್ ಗೆದ್ದರೆ ತಲಾ ಒಂದು ಕ್ಷೇತ್ರವಷ್ಟೇ: ಧರ್ಮಸ್ಥಳದಲ್ಲಿ ಯಡಿಯೂರಪ್ಪ
Team Udayavani, Dec 8, 2019, 2:47 PM IST
ಬೆಳ್ತಂಗಡಿ: ಎಲ್ಲರ ನಿರೀಕ್ಷೆ ಚುನಾವಣೆ ಫಲಿತಾಂಶದ ಕಡೆ ಇದೆ. ಎಲ್ಲಾ ಕ್ಷೇತ್ರದಲ್ಲಿ ಸಚಿವರೊಂದಿಗೆ ನಾವು ಸುತ್ತು ಬಂದಿದ್ದು, ಸಮೀಕ್ಷೆ ಪ್ರಕಾರ 15 ಕ್ಷೇತ್ರದಲ್ಲಿ 13 ಕ್ಷೇತ್ರ ಗೆಲ್ಲುತ್ತೇವೆ. ಅಕಸ್ಮಾತ್ ಗೆದ್ದರೆ ಕಾಂಗ್ರೆಸ್ ಗೆ ಒಂದು, ಜೆಡಿಎಸ್ ಒಂದು ಸ್ಥಾನ ಬರಬಹುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ವಿವಿಧ ಯೋಜನೆಗಳ ಕಾಮಗಾರಿಗೆ ಶಿಲಾನ್ಯಾಸ ಮಾಡಲು ಧರ್ಮಸ್ಥಳಕ್ಕೆ ಆಗಮಿಸಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನಮ್ಮ ಲೆಕ್ಕಾಚಾರ ಮಿಸ್ ಆಗುವ ವಿಷಯವೇ ಇಲ್ಲ. ಇನ್ನೂ ಮೂರುವರೆ ವರ್ಷ ಬಿಜೆಪಿ ಸ್ಥಿರ ಸರಕಾರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಧರ್ಮಸ್ಥಳ ಕಿಂಡಿ ಅಣೆಕಟ್ಟು ಕಾಂಕ್ರೀಟ್ ಕಾಮಗಾರಿ ನಡೆಸುವ ವಿಚಾರವಾಗಿ ಡಾ. ಹೆಗ್ಗಡೆ ವಿನಂತಿಯಂತೆ ಅನುದಾನ ಬಿಡುಗಡೆ ಮಾಡಿದ್ದೇನೆ. ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದ ಅವರು ರಾಜ್ಯದ ಜನತೆಗೆ ಒಳಿತು ಮಾಡುವಂತೆ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಬೇಡುತ್ತೇನೆ ಎಂದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಯಿ ಜತೆಗಿದ್ದರು.
ಧರ್ಮಸ್ಥಳ ಹೆಲಿಪ್ಯಾಡ್ ಆಗಮಿಸಿದಾಗ ಶಾಸಕ ಹರೀಶ್ ಪೂಂಜ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಕ್ಷೇತ್ರದ ಪರವಾಗಿ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ