ಯೋಗಿ ರಾಜ್ಯದಲ್ಲಿ ನಿಲ್ಲದ ಮಹಿಳಾ ದೌರ್ಜನ್ಯ ; ಅತ್ಯಾಚಾರ ಸಂತ್ರಸ್ತೆ ಮೇಲೆ ಆಸಿಡ್ ದಾಳಿ
Team Udayavani, Dec 8, 2019, 4:35 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಝಾಫರನಗರ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಲೇ ಇದೆ. ಅತ್ಯಾಚಾರಕ್ಕೊಳಗಾಗಿದ್ದ 30 ವರ್ಷದ ಮಹಿಳೆ ತಾನು ನೀಡಿದ್ದ ದೂರನ್ನು ಹಿಂಪಡೆಯಲು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿದ್ದಾರೆ. ಉತ್ತರಪ್ರದೇಶದ ಮುಜಫರ್ ನಗರದ ಶಹಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.
ಸಂತ್ರಸ್ತೆಯು ಪೊಲೀಸ್ ದೂರನ್ನು ನೀಡಿದ್ದರೂ ಪೊಲೀಸರು ಅತ್ಯಾಚಾರಿಗಳ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ. ಮತ್ತು ಅತ್ಯಾಚಾರವಾಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಪ್ರಕರಣವವನ್ನೇ ಮುಗಿಸಿಬಿಟ್ಟಿದ್ದರು. ಹಾಗಾಗಿ ಸಂತ್ರಸ್ತ ಮಹಿಳೆಯು ಅತ್ಯಾಚಾರಕ್ಕೆ ಸಂಬಂಧಿಸಿದಂತೆ ನೇರವಾಗಿ ನ್ಯಾಯಲಯದಲ್ಲೇ ತನ್ನ ದೂರನ್ನು ಸಲ್ಲಿಸಿದ್ದಳು.
ದೂರನ್ನು ಹಿಂಪಡೆಯುವಂತೆ ಸಂತ್ರಸ್ತೆಯ ಮೇಲೆ ಸತತ ಒತ್ತಡಗಳನ್ನು ಹಾಕಲಾಗಿತ್ತು. ಕಳೆದ ಬುಧವಾರ ರಾತ್ರಿ ಸಂತ್ರಸ್ತೆಯ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಸಿಡ್ ದಾಳಿ ನಡೆಸಿರುವ ನಾಲ್ವರು ಸದ್ಯಕ್ಕೆ ತಲೆತಪ್ಪಿಸಿಕೊಂಡಿದ್ದು ಇವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!