ಸೈಮನ್ ಅಜೇಯ ಸಾಹಸ ; ಪೂರಣ್ ಸ್ಪೋಟಕ ಬ್ಯಾಟಿಂಗ್ : ಭಾರತಕ್ಕೆ ಎಂಟು ವಿಕೆಟ್ ಸೋಲು

ದುಬೆ-ಪಂತ್ ಸಾಹಸ ವ್ಯರ್ಥ ; ಲಿಂಡ್ಲೆ - ಪೂರಣ್ ಸ್ಪೋಟಕ ಜೊತೆಯಾಟಕ್ಕೆ ಗೆಲುವು!

Team Udayavani, Dec 8, 2019, 10:29 PM IST

WI-Simons

ತಿರುವನಂತಪುರಂ: ಪ್ರವಾಸಿ ವೆಸ್ಟ್ ವಿಂಡೀಸ್ ವಿರುದ್ದ ಇಲ್ಲಿನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಿಂ ಇಂಡಿಯಾ ಎಂಟು ವಿಕೆಟ್ ಗಳಿಂದ ಪರಾಜಯಗೊಂಡಿದೆ. ಭರ್ಜರಿ ಅಜೇಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಲಿಂಡ್ಲೆ ಸಿಮನ್ಸ್ (67* ) ಪಂದ್ಯಶ್ರೇಷ್ಠ ಪುರಸ್ಕಾರ ಪಡೆದರು.

ವೆಸ್ಟ್ ಇಂಡೀಸ್ ಅಂತಿಮವಾಗಿ 18.3 ಓವರುಗಳಲ್ಲಿ 02 ವಿಕೆಟ್ ಗಳನ್ನು ಕಳೆದುಕೊಂಡು 173 ರನ್ ಗಳಿಸಿ ವಿಜಯಿಯಾಯಿತು.

ಆರಂಭಿಕ ಆಟಗಾರ ಲಿಂಡ್ಲೆ ಸೈಮನ್ ಅವರ ಭರ್ಜರಿ ಅಜೇಯ 67 ರನ್ ಗಳ ನೆರವಿನಿಂದ ವೆಸ್ಟ್ ಇಂಡೀಸ್ ಭಾರತ ನೀಡಿದ್ದ 170 ರನ್ ಗಳ ಗುರಿಯನ್ನು 18.3 ಓವರುಗಳಲ್ಲಿ ತಲುಪಿ ಗೆಲುವಿನ ನಗು ಬೀರಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿ ಇದೀಗ 1-1 ಸಮಬಲದಲ್ಲಿದೆ.

ವೆಸ್ಟ್ ಇಂಡೀಸ್ ಆರಂಭ ಜೋಶ್ ನಿಂದ ಕೂಡಿತ್ತು. ಸೈಮನ್ಸ್ (67 ನಾಟೌಟ್) ಮತ್ತು ಲೆವಿಸ್ (40) ಸೇರಿಕೊಂಡು ಮೊದಲ ವಿಕೆಟಿಗೆ 73 ರನ್ ಗಳ ಜೊತೆಯಾಟವನ್ನು ನೀಡಿದರು. ಭಾರತೀಯ ಬೌಲರ್ ಗಳನ್ನು ಬೆಂಡೆತ್ತಿದ ಈ ಜೋಡಿ ಭರ್ಜರಿ ಆಟವಾಡಿದರು.

ವೆಸ್ಟ್ ಇಂಡೀಸ್ ಪರ ನಾಲ್ಕೂ ಬ್ಯಾಟ್ಸ್ ಮನ್ ಗಳೂ ಉತ್ತಮ ಆಟವಾಡಿದ್ದು ಕೆರಿಬಿಯನ್ನರ ಗೆಲುವಿಗೆ ಸಹಕಾರಿಯಾಯಿತು. ಸಿಮನ್ಸ್ 4 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 45 ಎಸೆತಗಳಲ್ಲಿ 67 ರನ್ ಸಿಡಿಸಿದರೆ, ಇನ್ನೋರ್ವ ಓಪನರ್ ಎವಿನ್ ಲೆವಿಸ್ 40 ರನ್ ಗಳಿಸಿದರು.

ಹೇಯ್ಟ್ ಮೇರ್ 14 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ನೊಂದಿಗೆ 23 ರನ್ ಸಿಡಿಸಿದರೆ ತಂಡಕ್ಕೆ ಪುನರಾಗಮನ ಮಾಡಿದ ವಿಕೆಟ್ ಕೀಪರ್ ಪೂರಣ್ ಅವರ ಆಟ ಇನ್ನಷ್ಟು ಸ್ಪೋಟಕವಾಗಿತ್ತು. ಪೂರಣ್ ಕೇವಲ 18 ಎಸೆತಗಳಲ್ಲಿ ಅಜೇಯ 38 ರನ್ ಸಿಡಿಸಿ ಕೊನೆಯಲ್ಲಿ ತಂಡದ ಗೆಲುವನ್ನು ಸರಾಗಗೊಳಿಸಿದರು.

ಭಾರತದ ಬೌಲಿಂಗ್ ನಿರೀಕ್ಷಿತ ಮಟ್ಟದಲ್ಲಿ ಇರಲೇ ಇಲ್ಲ. ಕೆರಿಬಿಯನ್ ಆರಂಭಿಕರನ್ನು ಕಟ್ಟಿಹಾಕಲು ವಿಫಲವಾಗಿದ್ದು ಮತ್ತು ಅಂತಿಮ ಹಂತದಲ್ಲಿ ಪೂರಣ್ ಸಿಡಿಯಲು ಅವಕಾಶ ಮಾಡಿಕೊಟ್ಟಿದ್ದು ಟಿಂ ಇಂಡಿಯಾ ಬೌಲಿಂಗ್ ಹುಳುಕನ್ನು ತೆರೆದಿಟ್ಟಿತು. ವಿಂಡೀಸ್ ಪರ ಉರುಳಿದ ಎರಡು ವಿಕೆಟ್ ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ಪಾಲಾಯಿತು.


ಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ : ವಿಂಡೀಸ್ ಗೆಲುವಿಗೆ 171 ರನ್ ಗುರಿ

ಬ್ಯಾಟಿಂಗ್ ಗೆ ಅಷ್ಟೇನೂ ಪೂರಕವಲ್ಲದ ಇಲ್ಲಿನ ಪಿಚ್ ನಲ್ಲಿ ಟಾಸ್ ಗೆದ್ದ ವಿಂಡೀಸ್ ಕಪ್ತಾನ ಕೈರನ್ ಪೊಲಾರ್ಡ್ ಅವರು ಭಾರತವನ್ನು ಮೊದಲು ಬ್ಯಾಟಿಂಗ್ ಗೆ ಇಳಿಸಿದರು. ಯುವ ಆಲ್ ರೌಂಡರ್ ಶಿವಂ ದುಬೆ (54) ಅವರ ಭರ್ಜರಿ ಅರ್ಧಶತಕ ಮತ್ತು ಇನ್ನಿಂಗ್ಸ್ ನ ಕೊನೆಯಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ (33) ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 20 ಓವರುಗಳಲ್ಲಿ ಒಟ್ಟು 07 ವಿಕೆಟುಗಳನ್ನು ಕಳೆದುಕೊಂಡು 170 ರನ್ ಗಳನ್ನು ಕಲೆಹಾಕಿತು.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಟೀಂ ಇಂಡಿಯಾ ತಂಡದ ಮೊತ್ತ 24 ಆಗುವಷ್ಟರಲ್ಲಿ ರೋಹಿತ್ ಶರ್ಮಾ (15) ಔಟಾದರೆ ಇವರ ಬೆನ್ನಿಗೇ ಕೆ.ಎಲ್. ರಾಹುಲ್ (11) ಸಹ ಪೆವಿಯಲಿಯನ್ ದಾರಿ ಹಿಡಿದರು. ಈ ಹಂತದಲ್ಲಿ ಜೊತೆಯಾದ ದುಬೆ ಮತ್ತು ಕೊಹ್ಲಿ ಜೋಡಿ ಅಮೂಲ್ಯ 34 ರನ್ ಗಳ ಜೊತೆಯಾಟ ನೀಡಿತು. ಇದರಲ್ಲಿ ದುಬೆ ಸಿಡಿದದ್ದೇ ಹೆಚ್ಚು. ನಾಯಕ ಕೊಹ್ಲಿ ಈ ಯುವ ಬ್ಯಾಟ್ಸ್ ಮನ್ ಗೆ ಉತ್ತಮ ಬೆಂಬಲ ನೀಡಿದರು. ಅಂತಿಮವಾಗಿ 30 ಎಸೆತೆಗಳಲ್ಲಿ 54 ರನ್ ಸಿಡಿಸಿದ ದುಬೆ ಕ್ಯಾಚ್ ನೀಡಿ ಔಟಾದರು. ಅವರ ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 4 ಭರ್ಜರಿ ಸಿಕ್ಸರ್ ಮತ್ತು 3 ಬೌಂಡರಿ ಸಿಡಿಸಿದರು. ನಾಯಕ ಪೊಲಾರ್ಡ್ ಓವರಿನಲ್ಲಿ ದುಬೆ ಹ್ಯಾಟ್ರಿಕ್ ಸಿಕ್ಸ್ ಬಾರಿಸಿ ತನ್ನ ಬ್ಯಾಟಿಂಗ್ ತಾಕತ್ತನ್ನು ಪ್ರದರ್ಶಿಸಿದರು.

ಭಾರತೀಯ ಇನ್ನಿಂಗ್ಸ್ ನಲ್ಲಿ ಶಿವಂ ದುಬೆ ಮತ್ತು ರಿಷಭ್ ಪಂತ್ (33 ನಾಟೌಟ್) ಮಾತ್ರವೇ ವಿಂಡೀಸ್ ಬೌಲರ್ ಗಳನ್ನು ಕಾಡಿದರು. ಪಂತ್ ಅವರು 22 ಎಸೆತೆಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 33 ರನ್ ಸಿಡಿಸಿ ಔಟಾಗದೆ ಉಳಿದರು. ಉಳಿದಂತೆ ನಾಯಕ ಕೊಹ್ಲಿ (19), ಶ್ರೇಯಸ್ ಐಯರ್ (10), ರವೀಂದ್ರ ಜಡೇಜಾ (9) ಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿದರು.

ವಿಂಡೀಸ್ ಪರ ಕೆಸ್ರಿಕ್ ವಿಲಿಯಮ್ಸ್ ಮತ್ತು ಲೆಗ್ ಬ್ರೇಕ್ ಸ್ಪಿನ್ನರ್ ಹೆಡೇನ್ ರಶೀದಿ ವಾಲ್ಷ್ ತಲಾ 02 ವಿಕೆಟ್ ಪಡೆದು ಮಿಂಚಿದರು.

ಟಾಪ್ ನ್ಯೂಸ್

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.