ಡಂಪಿಂಗ್‌ ಯಾರ್ಡ್‌ ಆಗುತ್ತಿರುವ ಕೆರೆ, ಕಡಲ ಕಿನಾರೆ

ಗಂಗೊಳ್ಳಿಯಲ್ಲಿ ದಿನೇ ದಿನೇ ಬಿಗಡಾಯಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆ; ಘನ ತ್ಯಾಜ್ಯ ಘಟಕ ಪುನರಾರಂಭಕ್ಕೆ ಆಗ್ರಹ

Team Udayavani, Dec 9, 2019, 5:27 AM IST

0812KDPP2

ಗಂಗೊಳ್ಳಿ: ಇಲ್ಲಿನ ಬೀಚ್‌ ಬಳಿ ಚರ್ಚ್‌ ರಸ್ತೆಗೆ ತಾಗಿಕೊಂಡಿರುವ ಮಡಿವಾಳರ ಕೆರೆ, ಗಂಗೊಳ್ಳಿಯ ಕಡಲ ಕಿನಾರೆಗಳು, ಸೇರಿದಂತೆ ರಸ್ತೆ ಬದಿಯ ಚರಂಡಿಗಳೆಲ್ಲ ಕಸ ಎಸೆಯುವ ಡಂಪಿಂಗ್‌ ಯಾರ್ಡ್‌ಗಳಾಗಿ ಮಾರ್ಪಾಡಾಗುತ್ತಿವೆ. ಇದಕ್ಕೆ ಪ್ರಮುಖ ಕಾರಣ ಗಂಗೊಳ್ಳಿ ಪಂಚಾಯತ್‌ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತಗೊಂಡಿರುವುದು.

ಗಂಗೊಳ್ಳಿ ಗ್ರಾ.ಪಂ.ನಿಂದ 2018ರಲ್ಲಿ ಆರಂಭವಾದ ಘನ ತ್ಯಾಜ್ಯ ವಿಲೇವಾರಿ ಘಟಕ ಕಳೆದ ಕೆಲ ತಿಂಗಳಿನಿಂದ ಸ್ಥಗಿತಗೊಂಡಿರುವುದರಿಂದ ಈಗ ಗ್ರಾಮದಲ್ಲಿ ಕಸ ವಿಲೇವಾರಿಯೇ ದೊಡ್ಡ ಸಮಸ್ಯೆಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವ ಬೆಳವಣಿಗೆ ನಡೆಯುತ್ತಿದೆ. ರಸ್ತೆ ಬದಿ, ಕೆರೆ, ಕಸ ಎಸೆಯುವ ಡಂಪಿಂಗ್‌ ಯಾರ್ಡ್‌ಗಳಾಗುತ್ತಿದೆ. ಇದಲ್ಲದೆ ಮೀನುಗಾರಿಕಾ ಪ್ರದೇಶ ವಾಗಿರುವುದರಿಂದ ಕಸ ವಿಲೇವಾರಿ ಇಲ್ಲಿನ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ.

ತ್ಯಾಜ್ಯದಿಂದ ತುಂಬಿದ ಕೆರೆ
ಮಡಿವಾಳರ ಕೆರೆಯಂತೂ ಈಗ ಕಸ ಎಸೆಯುವ ಡಂಪಿಂಗ್‌ ಯಾಡೇì ಆಗಿ ಬಿಟ್ಟಿದೆ. ಕೆರೆಯ ಸುತ್ತಲೂ ತ್ಯಾಜ್ಯ, ಪ್ಲಾಸ್ಟಿಕ್‌ ತುಂಬಿ ಹೋಗಿವೆ. ಇದು ರಸ್ತೆಯ ಬದಿಯೇ ಇರುವ ಕೆರೆಯಾಗಿರುವುದರಿಂದ ಅಪರಿಚಿತರು ವಾಹನದಲ್ಲಿ ಬಂದು ಕಸ ಎಸೆದು ಹೋಗುತ್ತಿರುವುದು ಕಂಡು ಬರುತ್ತಿದೆ. ಕೆರೆಯ ಸಮೀಪವೇ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿದ್ದು ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಇದೇ ಮಾರ್ಗವಾಗಿ ಶಾಲೆಗೆ ಬರುತ್ತಾರೆ.

ಇನ್ನು ಗಂಗೊಳ್ಳಿಯ ಕಡಲ ಕಿನಾರೆಯುದ್ದಕ್ಕೂ ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಕಸದ ರಾಶಿಯೇ ಕಂಡು ಬರುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರು ಅಸಹ್ಯ ವಾಸನೆಯಿಂದ ಮೂಗು ಮುಚ್ಚಿಕೊಂಡೇ ಇರಬೇಕಾದ ಸ್ಥಿತಿ. ಇನ್ನು ಜಾನುವಾರುಗಳು, ನಾಯಿಗಳೆಲ್ಲ ಇಲ್ಲಿ ಎಸೆಯಲಾದ ಆಹಾರ ತಿನ್ನಲು ಬರುತ್ತಿದ್ದು, ಅದರ ಆರೋಗ್ಯವು ಹದಗೆಡುವ ಸಾಧ್ಯತೆಯೂ ಇದೆ.

ಅತಿದೊಡ್ಡ ಗ್ರಾಮ
ಗಂಗೊಳ್ಳಿಯು ಕುಂದಾಪುರ ತಾಲೂಕಿ ನಲ್ಲಿಯೇ ದೊಡ್ಡ ಗ್ರಾಮವಾಗಿದೆ. 1 ಸಾವಿರ ಎಕರೆ ವಿಸ್ತೀರ್ಣದಲ್ಲಿ 3,041 ಮನೆಗಳಿದ್ದು, 13 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಸುಮಾರು 200 ಕ್ಕೂ ಮಿಕ್ಕಿ ಅಂಗಡಿ ಸೇರಿದಂತೆ ವಾಣಿಜ್ಯ ಮಳಿಗೆಗಳಿವೆ. 850 ಮನೆಗಳಿಂದ ಕಸ ಸಂಗ್ರಹ ಮಾಡುತ್ತಿದ್ದಾಗ ದಿನಕ್ಕೆ 2 ಕ್ವಿಂಟಾಲ್‌ ಕಸ ಸಂಗ್ರಹವಾಗುತ್ತಿತ್ತು. ಈಗ ಇದನ್ನು ಮತ್ತಷ್ಟು ವಿಸ್ತರಿಸಿದರೆ ಇನ್ನೂ ಹೆಚ್ಚು ಕಸ ಸಂಗ್ರಹವಾಗಬಹುದು.

ಶೀಘ್ರ ವಿಲೇವಾರಿ ಘಟಕ ಆರಂಭ
ಕೆರೆಗಳು, ರಸ್ತೆ ಬದಿ, ಬೀಚ್‌ ಬಳಿ ಕಸ ಎಸೆಯದಂತೆ ಈಗಾಗಲೇ ಗ್ರಾಮಸ್ಥರಿಗೆ ಮನವಿ ಮಾಡಿಕೊಳ್ಳಲಾಗಿದೆ. ಇದಲ್ಲದೆ ಪಂಚಾಯತ್‌ ವತಿಯಿಂದಲೇ ಈ ಎಲ್ಲ ಪ್ರದೇಶಗಳಲ್ಲಿ ಎಸೆಯಲಾದ ತ್ಯಾಜ್ಯ ರಾಶಿಯನ್ನು ಕೂಡ ವಿಲೇವಾರಿ ಮಾಡಲಾಗಿದೆ. ಘನ ತ್ಯಾಜ್ಯ ವಿಲೇವಾರಿ ಘಟಕವು ಕಸ ಸಂಗ್ರಹ ವಾಹನ ಹಾಗೂ ಅನುದಾನ ಕೊರತೆಯಿಂದ ಸ್ಥಗಿತಗೊಂಡಿದ್ದು, ಶೀಘ್ರ ಪುನಾರಂಭಗೊಳ್ಳಲಿದೆ. ಪಂಚಾಯತ್‌ ಹಾಗೂ ಒಬ್ಬರು ದಾನಿಗಳ ನೆರವಿನಿಂದ 4 ಲಕ್ಷ ರೂ. ವೆಚ್ಚದಲ್ಲಿ ವಾಹನವೊಂದನ್ನು ಆದಷ್ಟು ಬೇಗ ಖರೀದಿ ಮಾಡಿ ಕಸ ಸಂಗ್ರಹಿಸಲಾಗುವುದು. ಈ ಬಗ್ಗೆ ಜಿ.ಪಂ. ಸಿಇಒ ಅವರ ಗಮನಕ್ಕೂ ತರಲಾಗಿದೆ. ತ್ಯಾಜ್ಯ ವಿಲೇವಾರಿ ತಡೆಯಲು ಕೂಡಲೇ ಸೂಕ್ತ ಕ್ರಮಕೈಗೊಳ್ಳಲಾಗುವುದು.
– ಶ್ರೀನಿವಾಸ ಖಾರ್ವಿ,
ಅಧ್ಯಕ್ಷರು, ಗಂಗೊಳ್ಳಿ ಗ್ರಾ. ಪಂ.

ಸೊಳ್ಳೆ ಉತ್ಪತ್ತಿ ಕೇಂದ್ರ
ಕೆರೆಗಳು, ಕಡಲ ಕಿನಾರೆ, ರಸ್ತೆ ಬದಿಯ ಚರಂಡಿಗಳಲ್ಲಿ ಪ್ಲಾಸ್ಟಿಕ್‌, ಆಹಾರ, ಕೊಳೆತ ತರಕಾರಿ ಮತ್ತಿತರ ವಸ್ತುಗಳನ್ನು ಎಸೆಯುತ್ತಿರುವುದರಿಂದ ಈ ಪ್ರದೇಶಗಳು ಸೊಳ್ಳೆ ಉತ್ಪಾದನಾ ಕೇಂದ್ರಗಳಾಗಿ ಬಿಟ್ಟಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಕೂಡ ಹರಡುವ ಭೀತಿ ಇಲ್ಲಿನ ಗ್ರಾಮಸ್ಥರಲ್ಲಿ ಆವರಿಸಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.