ಆಧುನಿಕತೆ ಮತ್ತು ಮಾನಸಿಕ ನೆಮ್ಮದಿ


Team Udayavani, Dec 9, 2019, 5:54 AM IST

lead-2

ಆಧುನಿಕತೆ ಬೆಳೆದಂತೆ, ತಂತ್ರಜ್ಞಾನ ಮುಂದುವರಿದಂತೆ ಮಾನಸಿಕ ನೆಮ್ಮದಿ ಎನ್ನುವುದು ಮರೀಚಿಕೆಯಾಗುತ್ತಿದೆ. ಎಲ್ಲವೂ ಬೆರಳ ತುದಿಯಲ್ಲೇ ದೊರೆಯುತ್ತದೆ ಎನ್ನುವುದೇನೋ ನಿಜ. ಆದರೆ ಅದರ ಜತೆ ನಮ್ಮತನವನ್ನು ಕಳೆದುಕೊಳ್ಳುತ್ತಿದ್ದೇವೆ. ತಂತ್ರಜ್ಞಾನದ ಭರಾಟೆಯಲ್ಲಿ ಕಳೆದು ಕೊಳ್ಳುವ ಮುನ್ನ ನಮ್ಮನ್ನು ನಾವೇ ಕಂಡುಕೊಳ್ಳಬೇಕಿದೆ.

ನಮ್ಮ ಜೀವನದಲ್ಲಿ ಹಲವು ಘಟನೆಗಳು ನಡೆಯುತ್ತವೆ. ನಾವು ಹುಟ್ಟಿದಂದಿನಿಂದ ಜೀವನದ ಪ್ರತಿಯೊಂದು ಹಂತದಲ್ಲೂ ಹಲವು ಪಾಠ ಕಲಿಯುತ್ತೇವೆ. ಶಿಶುವಿನಿಂದ ಹಿಡಿದು ನಮ್ಮ ವ್ಯಕ್ತಿತ್ವ ವಿಕಸನ ಆಗುವವರೆಗೆ ಪ್ರತಿಯೊಂದು ಹಂತದಲ್ಲೂ ನಾವು ಜಾಗರೂಕತೆಯಿಂದ ಇರಬೇಕಾಗುತ್ತದೆ.

ಸೌಲಭ್ಯಗಳ ದುರುಪಯೋಗ
ತಾನಿರುವಲ್ಲಿಯೇ ದೇಶ ವಿದೇಶಗಳಲ್ಲಿ ನಡೆಯುವ ಪ್ರಮುಖ ವಿಷಯಗಳನ್ನು ಕ್ಷಣಾರ್ಧದಲ್ಲಿ ಸ್ಮಾಟ್‌ ಫೋನ್‌ ಮೂಲಕ ತಿಳಿಯುತ್ತೇವೆ. ವಾರಗಟ್ಟಲೆ ಪತ್ರಕ್ಕಾಗಿ ಕಾಯುವ ಪ್ರಮೇಯವೇ ಇಂದಿಲ್ಲ. ವಾಟ್ಸಾéಪ್‌, ಫೇಸ್‌ಬುಕ್‌, ಟ್ವೀಟರ್‌ಗಳ ಮೂಲಕ ಸಂದೇಶ ತ್ವರಿತವಾಗಿ ರವಾನೆಯಾಗುತ್ತಿದೆ. ಶಾಪಿಂಗ್‌ ಮಾಲ್‌ಗೆ ತೆರಳದೆ ಆನ್‌ಲೈನ್‌ನಲ್ಲಿ ಬೇಕಾದ ವಸ್ತುವನ್ನು ನಮ್ಮ ಮನೆಗೇ ತರಿಸಿಕೊಳ್ಳುವಷ್ಟು ನಾವು ಮುಂದುವರಿದಿದ್ದೇವೆ. ಆದರೆ ವಿಜ್ಞಾನ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದ‌ರೂ ಮನುಷ್ಯನ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ತೃಪ್ತಿಪಡುತ್ತೇವೆ.

ಮಕ್ಕಳಲ್ಲಿ ಸಂಸ್ಕೃತಿ,
ಆದರ್ಶದ ಕೊರತೆ
ಕೆಲ ವರ್ಷಗಳ ಹಿಂದಿನ ಮಾತು. ಬೇರೆ ಚಾನೆಲ್‌ಗ‌ಳ ಹಾವಳಿ ಇಲ್ಲದೆ ಕೇವಲ ದೂರದರ್ಶನದಲ್ಲಿ ಮಾತ್ರ ವಾರಕ್ಕೊಮ್ಮೆ ಸಿನಿಮಾ ಪ್ರಸಾರವಾಗುತ್ತಿತ್ತು. ಆಗ ಎಲ್ಲರೂ ಮಾನಸಿಕವಾಗಿ ಸದೃಢರಾಗಿ ಇರುತ್ತಿದ್ದರು. ಯಾವುದೇ ಒತ್ತಡ ಇರುತ್ತಿರಲಿಲ್ಲ. ಇಂದಿನಂತೆ ನೂರಾರು ಆ್ಯಪ್‌, ಸ್ಮಾರ್ಟ್‌ ಫೋನ್‌ಗಳ ಹಾವಳಿ ಇರಲಿಲ್ಲ. ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ತಾಯಿ ತನ್ನ ಕೆಲಸ ಬಿಟ್ಟು ಟಿವಿ ಮುಂದೆ ಕೂರುತ್ತಿದ್ದರೆ, ತಂದೆ ಲ್ಯಾಪ್‌ಟಾಪ್‌ನಲ್ಲಿ ಮಗ್ನರಾಗಿರುತ್ತಾರೆ. ಹೀಗಾದಾಗ ಮಕ್ಕಳಿಗೆ ಸಂಸ್ಕೃತಿ, ದೇಶದ ಹಿರಿಮೆ, ಆದರ್ಶ ಬೋಧಿಸುವುದಕ್ಕೆ ಇವರಿಗೆ ಸಮಯ ಎಲ್ಲಿಂದ ಬರಬೇಕು? ಈಗ ಕುಳಿತಲ್ಲೇ ಕೆಲಸ ಮಾಡುವುದರಿಂದ ದೈಹಿಕ ಶ್ರಮ ಇಲ್ಲದೆ ಬೊಜ್ಜಿನ ಸಮಸ್ಯೆಯೂ ಉಂಟಾಗಿದೆ. ಅಪ್ಪ, ಅಮ್ಮ, ಸುತ್ತಮುತ್ತಲಿನ ವಾತಾವರಣ ಅನುಸರಿಸುತ್ತಿರುವ ಮಗುವು ಅವರಿಂದ ಏನೂ ಪಡೆಯಲು ಸಾಧ್ಯವಿಲ್ಲ. ಮೊಬೈಲ್‌ ಬಳಕೆಯ ಅರಿವಿಲ್ಲದೆ ಮಗು ಗೇಮ್‌ ಆಡಲು ಹೋಗಿ ರೇಡಿಯಂ ಕಿರಣಗಳಿಗೆ ತುತ್ತಾಗಿ ನೆನಪಿನ ಶಕ್ತಿ ಕಳೆದುಕೊಳ್ಳುತ್ತದೆ. ಕೆಲವು ಧಾರಾವಾಹಿಗಳನ್ನು ನೋಡಿ ಅದನ್ನು ಅನುಕರಿಸಲು ಹೋಗಿ ಹಲವು ಮಕ್ಕಳು ಜೀವ ಕಳೆದುಕೊಂಡಿರುವ ಉದಾಹರಣೆಯೂ ನಮ್ಮಲ್ಲಿದೆ.

ಹಿಂದೆ ಮನೆಯಲ್ಲಿ ಇರುವ ಸದಸ್ಯರ ನಡುವೆ ಅನುಬಂಧ, ಪ್ರೀತಿ, ವಾತ್ಸಲ್ಯ ಇರುತ್ತಿತ್ತು. ಅವರ ಬೇಡಿಕೆ, ಆಕಾಂಕ್ಷೆ ಒಂದೇ ಇರುತ್ತಿತ್ತು. ಪ್ರತಿಯೊಂದು ಹಂತದಲ್ಲೂ ಹಿರಿಯರ, ಅಪ್ಪ-ಅಮ್ಮನ ವಾತ್ಸಲ್ಯ ಇರುತ್ತಿತ್ತು. ಉತ್ತಮ ಪುಸ್ತಕ ಓದುವ ಹವ್ಯಾಸ, ಆರೋಗ್ಯ, ನೆಮ್ಮದಿಯ ಬದುಕು ಸಮಾಜಮುಖೀ ಕಾರ್ಯದಲ್ಲಿ ಯಾವುದೇ ಕಾರ್ಯಕ್ಕೂ ಹಿಂಜರಿಯದೆ ಸಹಾಯ ಮಾಡುತ್ತಿದ್ದರು. ಈಗ ಅದೆಲ್ಲವೂ ಮರೀಚಿಕೆಯಾಗಿದೆ.

ಗಳಿಕೆಯೇ ಅವಿಭಾಜ್ಯ ಅಂಗವಲ್ಲ
ಜೀವನದಲ್ಲಿ ಕಾರು, ಮಹಡಿ ಮನೆ, ಆಳುಕಾಳು, ಬಂಗಾರ ಇದ್ದರೆ ಮಾತ್ರ ಮಾನಸಿಕ ನೆಮ್ಮದಿ ಎಂಬ ತಪ್ಪು ಕಲ್ಪನೆ ಇದೆ. ಅದು ಎಷ್ಟೇ ಇದ್ದರೂ ಅದನ್ನು ಅನುಭವಿಸುವ ಅರ್ಹತೆಯೂ ಪಡೆದಿರಬೇಕು. ಚಿಂತೆಯೆಂಬ ಚಿತೆಯಿಂದಾಗಿ ಮೃದುವಾದ ಹಾಸಿಗೆಯಲ್ಲಿ ಮಲಗಿದ್ದರೂ ನಿದ್ರೆ ಬಾರದೆ ನಿದ್ರೆ ಮಾತ್ರೆ ತೆಗೆದುಕೊಂಡು ಮಲಗುವ ಅನಿವಾರ್ಯತೆ ಎದುರಾಗಿದೆ. ಬದುಕಿರುವ ತನಕವೂ ಆರೋಗ್ಯ ಇದ್ದರೆ ಅದಕ್ಕಿಂತ ದೊಡ್ಡ ಸಂಪತ್ತು ಮತ್ತೇನೂ ಇಲ್ಲ. ಬದುಕಿಗಾಗಿ ದುಡ್ಡಿನ ಆವಶ್ಯಕತೆ ಇದೆಯೇ ಹೊರತು ಬದುಕಿನ ಅವಿಭಾಜ್ಯ ಅಂಗವೇ ದುಡ್ಡಿನ ಗಳಿಕೆ ಅಲ್ಲ. ಎಷ್ಟೇ ಇದ್ದರೂ ಒಂದು ದಿನ ಬರಿಗೈಯಲ್ಲಿ ಹೋಗಬೇಕು. ನಮ್ಮಲ್ಲಿಯೇ ಇರುವ ಪ್ರೀತಿ ಬಿಟ್ಟು ಉಳಿದೆಲ್ಲೆಡೆ ಹುಡುಕುವುದು ತಪ್ಪು. ಮನಸ್ಸಿನ ನಿಯಂತ್ರಣ, ಅದರೊಂದಿಗೆ ಸಂಗೀತದ ನಿನಾದ, ಮಕ್ಕಳೊಡನೆ ಮುದ್ದಾದ ಮಾತು, ಆಟಪಾಠ ಎಲ್ಲವೂ ನೆಮ್ಮದಿಯ ಬದುಕಿಗೆ ಅವಶ್ಯ ಎನ್ನುವುದನ್ನು ಅರಿಯೋಣ.

-   ಜಯಾನಂದ ಅಮೀನ್‌, ಬನ್ನಂಜೆ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.