ಗೋ ಸೇವೆಯಿಂದ ಅಪರಾಧಿ ಮನೋಭಾವ ಇಳಿಕೆ

ಗೋವುಗಳಿಂದಾಗಿ ಮನುಷ್ಯರ ಹೃದಯ ಕೋಮಲ: ಮೋಹನ್‌ ಭಾಗವತ್‌

Team Udayavani, Dec 9, 2019, 6:05 AM IST

mohan

ಹೊಸದಿಲ್ಲಿ: “ಗೋವುಗಳ ಆರೈಕೆಯಿಂದ ಕೈದಿಗಳ ಮನಃ ಪರಿವರ್ತನೆಯಾಗಿ ಅವರಲ್ಲಿನ ಅಪರಾಧಿ ಮನೋಭಾವ ಗಣನೀಯವಾಗಿ ತಗ್ಗುವುದು ಕಂಡು ಬಂದಿದೆ. ಇದನ್ನು ಕೂಲಂಕಷವಾಗಿ ಅಧ್ಯಯನ ಮಾಡಿ, ವೈಜ್ಞಾನಿಕವಾಗಿ ಅಂಕಿ-ಅಂಶಗಳನ್ನು ದಾಖಲಿಸುವ ಮೂಲಕ ಗೋವುಗಳ ಸೇವೆಯಿಂದ ಮಾನವನಲ್ಲಿ ಕಂಡು ಬರುವ ಪರಿವರ್ತನೆಗಳನ್ನು ವಿಶ್ವಕ್ಕೆ ತೋರ್ಪಡಿಸುವ ಆವಶ್ಯಕತೆಯಿದೆ’ ಎಂದು ಆರ್‌ಎಸ್‌ಎಸ್‌ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ದಿಲ್ಲಿಯಲ್ಲಿ ರವಿವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಗೋವುಗಳು ಈ ವಿಶ್ವದ ಮಾತೆಯರು. ಇವು ಮಣ್ಣನ್ನು, ಜಗದ ಜೀವರಾಶಿಗಳನ್ನು, ಪಕ್ಷಿಗಳನ್ನು, ಮನುಷ್ಯರನ್ನು ಕಾಯಿಲೆಗಳಿಂದ ರಕ್ಷಿಸುತ್ತವೆ. ಜತೆಗೆ ಮನುಷ್ಯರ ಹೃದಯವನ್ನು ಹೂವಿನಷ್ಟು ಕೋಮಲವಾಗಿಸುತ್ತವೆ ಎಂದರು. ಜೈಲಿನಲ್ಲಿರುವ ಕೈದಿಗಳನ್ನು ಜೈಲಿನ ಗೋ ಶಾಲೆಗಳ ಸೇವೆಗೆ ನಿಯೋಜಿಸಿದ ಅನಂತರ ಅವರ ಮನೋಭಾವದಲ್ಲಿ ದೊಡ್ಡ ಬದಲಾವಣೆಯಾಗಿರುವುದನ್ನು ಕಂಡುಕೊಳ್ಳಲಾಗಿದೆ. ಇದನ್ನು ಮತ್ತಷ್ಟು ವ್ಯವಸ್ಥಿತವಾಗಿ ಅಧ್ಯಯನ ಮಾಡಿ, ಅಂಕಿ-ಅಂಶಗಳ ಮೂಲಕ ಗೋವುಗಳ ಮಹತ್ವವನ್ನು ಜಗತ್ತಿಗೆ ಸಾರಬೇಕಿದೆ ಎಂದು ಅವರು ಆಗ್ರಹಿಸಿದರು.

ಗೋ ಶಾಲೆಗಳಲ್ಲಿನ ಅವ್ಯವಸ್ಥೆಗಳ ಬಗ್ಗೆ ಮಾತನಾಡಿದ ಅವರು, ಸೀಮಿತ ಸಂಖ್ಯೆಯಲ್ಲಿ ಗೋವುಗಳನ್ನು ಸಾಕುವ ಕಡೆಗೆ ಮಿತಿಮೀರಿದ ಸಂಖ್ಯೆಯಲ್ಲಿ ಗೋವುಗಳು ಬಂದು ಸೇರಿಕೊಂಡರೆ ಸಮಸ್ಯೆಗಳು ಉಲ್ಬಣವಾಗುವುದು ಖಚಿತ. ಹಾಗಾಗಿ ದೇಶದ ಒಬ್ಬೊಬ್ಬರೂ ಒಂದೊಂದು ಗೋವನ್ನು ಸಾಕುವ ಜವಾಬ್ದಾರಿ ಹೊತ್ತರೆ, ಬೀದಿದನಗಳ ಹಾವಳಿಯೂ ನಿಯಂತ್ರಣವಾಗಿ, ಗೋ ಶಾಲೆಗಳ ಸಮಸ್ಯೆಯೂ ನಿರ್ಮೂಲನೆಯಾಗುತ್ತದೆ ಎಂದು ತಿಳಿಸಿದ್ದಾರೆ.

ರಾಸುಗಳ ಸಂರಕ್ಷಣೆಗೆ “ಗೋವು ಸಫಾರಿ’
ಬೀದಿ ಗೋವುಗಳ ಹಾವಳಿಯಿಂದ ಕಂಗೆಟ್ಟಿರುವ ಉತ್ತರ ಪ್ರದೇಶದ ಜನತೆಯ ಸಮಸ್ಯೆಗೆ ಸ್ಪಂದಿಸಿರುವ ಅಲ್ಲಿನ ಸರಕಾರ, ಸದ್ಯದಲ್ಲೇ ಗೋವು ಸಫಾರಿ ಎಂಬ ಹೆಸರಿನ ವಿನೂತನ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.

ಬೀದಿಹಸುಗಳ ಸಂರಕ್ಷಣೆ, ಪುನರುಜ್ಜೀವನಕ್ಕಾಗಿ ಈ ಯೋಜನೆಯನ್ನು ಆರಂಭಿಸಲು ನಿರ್ಧರಿಸಿದೆ. ಅಗಾಧ ಸಂಖ್ಯೆಯಲ್ಲಿರುವ ಗೋ ಶಾಲೆಗಳಲ್ಲಿ ಗೋವುಗಳಿಗೆ ಒದಗಿಸಲಾಗಿರುವ ಸೌಲಭ್ಯಗಳು ಹಾಗೂ ಅವುಗಳಿಂದ ಪಡೆಯಲಾಗುತ್ತಿರುವ ಪ್ರಯೋಜನಗಳ ಕುರಿತಂತೆ ಪ್ರವಾಸಿಗರಿಗೆ ತೋರಿಸುವ ಉದ್ದೇಶವನ್ನು ಈ ಯೋಜನೆ ಒಳಗೊಂಡಿದೆ.

ಇದರ ವಿವರಣೆ ನೀಡಿದ ಪಶುಸಂಗೋಪನ ಸಚಿವ ಲಕ್ಷ್ಮೀ ನಾರಾಯಣ್‌ ಚೌಧರಿ, ಅಧಿಕ ಸಂಖ್ಯೆಯಲ್ಲಿ ಗೋವುಗಳನ್ನು ಇರಿಸಬಲ್ಲ ಬೃಹತ್‌ ಗೋ ಶಾಲೆಗಳು ಉತ್ತರ ಪ್ರದೇಶದ ಬಾರಾಬಂಕಿ ಹಾಗೂ ಮಹಾರಾಜಗಂಜ್‌ ಪ್ರಾಂತ್ಯಗಳಲ್ಲಿವೆ. ಈ ಪ್ರದೇಶಗಳಲ್ಲಿ ಸಫಾರಿಗಳನ್ನು ಆರಂಭಿಸಿದರೆ, ಪ್ರವಾಸೋದ್ಯಮಕ್ಕೂ ನೆರವಾಗುತ್ತದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.