ಮೋತಕಪಲ್ಲಿ ಬಲಭೀಮಸೇನ ಜಾತ್ರೆ

ತಿರುಪತಿ ಮಾದರಿಯಲ್ಲಿ ಸೇವೆ 12ರಂದು ಮಧ್ಯರಾತ್ರಿ ರಥೋತ್ಸವ

Team Udayavani, Dec 9, 2019, 10:42 AM IST

December-1

„ಶಿವಕುಮಾರ ಬಿ. ನಿಡಗುಂದಾ
ಸೇಡಂ:
ಈ ದೇವಾಲಯಕ್ಕಿದೆ 1200 ವರ್ಷಗಳ ಇತಿಹಾಸ. ಈ ದೇವನಿಗೆ ಭಕ್ತಿಯಿಂದ ನಮಿಸಿದರೆ ಸರ್ವ ದುಃಖ ಪರಿಹಾರವಾಗಿ, ಸುಖ-ಶಾಂತಿ ನೆಲೆಸುತ್ತದೆ. ತೆಲಂಗಾಣ, ಮಹಾರಾಷ್ಟ್ರ , ಕರ್ನಾಟಕ ರಾಜ್ಯದ ಅನೇಕ ಭಕ್ತರಿಗೆ ಈತ ಆರಾಧ್ಯ ದೈವ. ಈ ದೇವಾಲಯಕ್ಕೆ ತಿರುಪತಿ ತಿಮ್ಮಪ್ಪನ ಮಹಾದ್ವಾರವೆಂದು ಕರೆಯಲಾಗುತ್ತದೆ.

ಸ್ವಯಂ ಉದ್ಭವ ಮೂರ್ತಿಯಾಗಿ ಭಕ್ತರ ಇಷ್ಟಾರ್ಥ ಪೂರೈಸುತ್ತಿರುವ ಈ ಮಹಾಬಲನಿಗೆ ತಿರುಪತಿ ತಿಮ್ಮಪ್ಪನಿಗೆ ಸಲ್ಲುವ ಎಲ್ಲ ಸೇವೆಗಳು ಯಥಾವತ್ತಾಗಿ ಸಲ್ಲುತ್ತವೆ. ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಬಲಭೀಮಸೇನ ದೇವರ ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಚಾಲನೆ ದೊರೆತಿದ್ದು, ಡಿ. 12ರಂದು ಮಧ್ಯರಾತ್ರಿ ಮಹಾ ರಥೋತ್ಸವ ನಡೆಯಲಿದೆ.

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ದೇವಾಲಯದ ಜಾತ್ರಾ ಮಹೋತ್ಸವ ನಿಮಿತ್ತ ಪೂರ್ವ ತಯಾರಿ ಜೋರಾಗಿ ನಡೆದಿದೆ. ಗಡಿ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ ಹಾಗೂ ರಾಜ್ಯದ ಅನೇಕ ಕಡೆಗಳಿಂದ ಸಾವಿರಾರು ಭಕ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ, ಸೂಕ್ತ ವ್ಯವಸ್ಥೆ ಕಲ್ಪಿಸಲು ತಾಲೂಕು ಆಡಳಿತ, ದೇವಾಲಯ ಸಮಿತಿ, ಪೂಜಾರಿಗಳ ವೃಂದ ಶ್ರಮಿಸುತ್ತಿದೆ.

ಸತತ 11 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ನಿಮಿತ್ತ ಹೊಸ್ತಿಲ ಹುಣ್ಣಿಮೆ ಮಧ್ಯರಾತ್ರಿ 12:10ಕ್ಕೆ ರಥೋತ್ಸವ ನಡೆಯುತ್ತದೆ. ಇದಾದ ನಂತರ ಶ್ರೀ ಬಲಭೀಮ ದೇವರ ಉತ್ಸವ ಮೂರ್ತಿಗೆ ಹೂವಿನ ಅಲಂಕಾರ ಮಾಡಿ, ಹೂವಿನ ತೇರು ಸೇವೆ, ಆನೆ ಮೇಲೆ ಮೆರವಣಿಗೆ ಮಾಡುವ ಗಜ ಸೇವೆ ನಡೆಸಲಾಗುತ್ತದೆ. ಜಾತ್ರೆಗೆ ಬರುವ ಭಕ್ತರಿಗಾಗಿ ಗುರುಮಠಕಲ್‌, ಯಾದಗಿರಿ, ನಾರಾಯಣಪೇಟ, ಕೊಡಂಗಲ್‌, ಮುಧೋಳ, ಸೇಡಂನಿಂದ ವಿಶೇಷ ಬಸ್‌ ಕಲ್ಪಿಸಲಾಗಿದೆ. ನೆಲೆಸಲು ಯಾತ್ರಿಕ ನಿವಾಸದ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ವರ್ಷ ಶ್ರೀ ಬಲಭೀಮಸೇನ ದೇವರ ದರ್ಶನ ಪಡೆಯುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇವಾಲಯದ ಎದುರಿಗಿರುವ ಪುಷ್ಕರಣಿಯಲ್ಲಿ ಮಿಂದೆದ್ದು, ಆರಾಧ್ಯ ದೇವರ ದರ್ಶನ ಪಡೆಯುವ ಲಕ್ಷಾಂತರ ಭಕ್ತರ ಮನೋಕಾಮನೆಗಳು ಪೂರ್ತಿಯಾಗಿವೆ.
ಭೀಮಾಚಾರಿ,
ಅರ್ಚಕರು, ಮೋತಕಪಲ್ಲಿ

ಭಕ್ತರಿಗಾಗಿ ಸೌಕರ್ಯ ಕಲ್ಪಿಸುವ ಸಂಬಂಧ ತಾಲೂಕು ಆಡಳಿತ ವತಿಯಿಂದ ಸಕಲ ಸಿದ್ಧತೆ ಕಾರ್ಯ ಕೈಗೊಳ್ಳಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗಾಗಿ ಸಾರಿಗೆ ಇಲಾಖೆ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಿದೆ.
ಬಸವರಾಜ ಬೆಣ್ಣೆಶಿರೂರ್‌,
ತಹಶೀಲ್ದಾರ್‌, ಸೇಡಂ

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.