ನೀರಿನ ಸಮಸ್ಯೆಗಿದೆ ಪರಿಹಾರ

ನೀರು ಸಾಕ್ಷರತಾ ಆಂದೋಲನದಿಂದ ಬಿಕ್ಕಟ್ಟು ಪರಿಹಾರ: ರಾಜೇಂದ್ರಸಿಂಗ್‌

Team Udayavani, Dec 9, 2019, 10:55 AM IST

December-2

ಕಲಬುರಗಿ: ವಿಶ್ವ ಎದುರಿಸುತ್ತಿರುವ ನೀರಿನ ಸಮಸ್ಯೆಗೆ ಭಾರತ ಪರಿಹಾರ ಮಾರ್ಗ ಹೊಂದಿದೆಯಲ್ಲದೇ, ನೀರಿಗಾಗಿ ರಾಷ್ಟ್ರಗಳ ಮಧ್ಯೆ ಮುಂಬರುವ ಮೂರನೇ ಮಹಾಯುದ್ಧವನ್ನು ತಪ್ಪಿಸುತ್ತದೆ ಎಂದು ರಾಜಸ್ಥಾನದ ಜಲ ತಜ್ಞ ಮತ್ತು ಪ್ರತಿಷ್ಠಿತ ವಿಶ್ವ ಜಲ ಪ್ರಶಸ್ತಿ ವಿಜೇತ ರಾಜೇಂದ್ರಸಿಂಗ್‌ ಹೇಳಿದರು.

ನಗರದ ಶರಣಬಸವ ಶತಮಾನೋತ್ಸವ ಭವನದಲ್ಲಿ ಶರಣಬಸವ ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಕೋಶ, ಗುಲ್ಬರ್ಗಾ ವಿಶ್ವವಿದ್ಯಾಲಯ, ಜಲ ಸಮಿತಿಗಳ ಒಕ್ಕೂಟ, ಜಲಜಾಗೃತಿ ಅಭಿಯಾನ ವೇದಿಕೆ, ಥ್ರೀಜೆ ಕ್ಲಬ್‌ ಆಳಂದ, ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಜಲ ಜಾಗೃತಿ ಸಮಾವೇಶದಲ್ಲಿ ಜಲ ಸಂರಕ್ಷಣೆ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ನೀರಿನ ಬಿಕ್ಕಟ್ಟು ಜಾಗತಿಕವಾಗಿದ್ದರೂ, ಪರಿಹಾರ ಮಾತ್ರ ಸ್ಥಳೀಯವಾಗಿದೆ. ನೀರನ್ನು ಗೌರವಿಸುವ ಮತ್ತು ಅನಾದಿ ಕಾಲದಿಂದ ಮರುಬಳಕೆ ಮಾಡುವ ತತ್ವವನ್ನು ಅನುಸರಿಸುವ ಅಂತರ್ಗತ ಸಂಸ್ಕೃತಿ ಹೊಂದಿರುವ ದೇಶ ಭಾರತವಾಗಿದೆ ಎಂದು ಹೇಳಿದರು.

ಇತ್ತೀಚೆಯ ದಿನಗಳಲ್ಲಿ ದೇಶದ ಕೆಲವು ಪ್ರದೇಶಗಳಲ್ಲಿ ಈ ತತ್ವಗಳನ್ನು ಅಭ್ಯಾಸ ಮಾಡುವಲ್ಲಿ ಕೆಲವು ವಿರೂಪಗಳು ಕಂಡು ಬಂದಿವೆ. ಆದರೂ ನೀರಿನ ಸಂರಕ್ಷಣೆ ಮತ್ತು ನೀರಿನ ನಿರ್ವಹಣಾ ಪದ್ದತಿಗಳನ್ನು ನಮ್ಮ ಹಿರಿಯರು ಅಳವಡಿಸಿಕೊಂಡ ರೀತಿಯನ್ನು ದೇಶದ ಜನರು ಇನ್ನೂ ಅನುಸರಿಸುತ್ತಿದ್ದಾರೆ. ಇಂತಹ ತತ್ವಗಳನ್ನು
ವಿಶ್ವಾದ್ಯಂತ ಅಳವಡಿಸಿಕೊಂಡರೆ ನೀರಿನ ನಿರ್ವಹಣೆ ಮತ್ತು ಬಿಕ್ಕಟ್ಟನ್ನು ಸುಲಭವಾಗಿ ತಪ್ಪಿಸಬಹುದಾಗಿದೆ ಎಂದರು.

ರಾಜಸ್ಥಾನದ ಬರ ಪೀಡಿತ ಗ್ರಾಮಗಳ ಮುಖವನ್ನು ಬದಲಾಯಿಸಲು ಮತ್ತು ಅವುಗಳನ್ನು ನೀರಿನ ಸ್ವಾವಲಂಬಿಯನ್ನಾಗಿ ಮಾಡಲು ಮಾಡಿದ ಪ್ರಯತ್ನಗಳಿಗಾಗಿ ಪ್ರತಿಷ್ಠಿತ ಮ್ಯಾಗ್ಸೆಸ್ಸೆ ಪ್ರಶಸ್ತಿ ಪಡೆದಿರುವ ಡಾ| ಸಿಂಗ್‌, ನೀರಿನ ಸಾಕ್ಷರತಾ ಆಂದೋಲನ ಆರಂಭಿಸುವ ಮೂಲಕ ಬಿಕ್ಕಟ್ಟು ನಿವಾರಿಸಬಹುದು ಎಂದು ಹೇಳಿದರು.

ರಾಜಸ್ಥಾನದ ಬರ ಪೀಡಿತ ಹಳ್ಳಿಗಳಲ್ಲಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಸರ್ಕಾರದ ಸಹಾಯವಿಲ್ಲದೇ ಮತ್ತು ಜನರ ಸಹಕಾರ ಪಡೆದು 12 ಬತ್ತಿ ಹೋದ ನದಿಗಳನ್ನು ಪುನರುಜ್ಜೀವಗೊಳಿಸಿದ ಕುರಿತು, ಲಕ್ಷಾಂತರ ಬತ್ತಿದ ಕೊಳವೆಬಾವಿಗಳ ಸುಧಾರಿತ ಅಂತರ್ಜಲ ಮಟ್ಟ ಭರ್ತಿ ಮಾಡಿದ ಕುರಿತು, ಬರ ಪೀಡಿತ ಪ್ರದೇಶಗಳಲ್ಲಿ ತರಕಾರಿ ಬೆಳೆದು ನವದೆಹಲಿ ಮತ್ತು ರಾಜಸ್ಥಾನದ ಜೈಪುರ ಮಾರುಕಟ್ಟೆಯಲ್ಲಿ ಮಾರಾಟವಾಗುವಂತೆ ಮಾಡಿದ ಕುರಿತು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಅಂತರ್ಜಲ ಸಂಪನ್ಮೂಲಗಳ ಪುನರುಜ್ಜೀವನದ ತುರ್ತು ಅವಶ್ಯಕತೆ ಇದೆ. ಈ ಮೂಲಗಳನ್ನು ರಕ್ಷಿಸುವ ಜವಾಬ್ದಾರಿ ಯುವಪೀಳಿಗೆ ಮೇಲಿದೆ ಎಂದು ಹೇಳಿದರು.

ಮಾಜಿ ಶಾಸಕ ಬಿ.ಆರ್‌. ಪಾಟೀಲ ಮಾತನಾಡಿದರು. ಶರಣಬಸವ ವಿಶ್ವವಿದ್ಯಾಲಯ ಕುಲಸಚಿವ ಡಾ| ಅನೀಲಕುಮಾರ ಬಿಡವೆ ಮಾತನಾಡಿ, ನೀರನ್ನು ಉಳಿಸಲು ಮತ್ತು ರಕ್ಷಿಸಲು ವಿದ್ಯಾರ್ಥಿಗಳಿಗೆ ಪ್ರತಿಜ್ಞಾನವಿಧಿ  ಬೋಧಿಸಿದರು.

ಗೌರವಾನ್ವಿತ ಅತಿಥಿಯಾಗಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ತೆಲಂಗಾಣದ ಜಲಸಂಪನ್ಮೂಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಕಾಶ ರಾವ್‌, ಧಾರವಾಡ ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆ ನಿರ್ದೇಶಕ ರಾಜೇಂದ್ರ ಪೋದ್ದಾರ ಇದ್ದರು.

ವಿವಿ ಮೌಲ್ಯಮಾಪನ ಕುಲಸಚಿವ ಲಿಂಗರಾಜ ಶಾಸ್ತ್ರೀ ನಿರೂಪಿಸಿದರು, ಕೆ. ನೀಲಾ ಸ್ವಾಗತಿಸಿದರು, ಡಾ| ಸಂಪತರಾವ್‌ ವಂದಿಸಿದರು.

ಸಮಾಜದ ಎಲ್ಲ ವರ್ಗದವರು ವಿಶೇಷವಾಗಿ ಯುವ ಪೀಳಿಗೆಗಳು ಮತ್ತು ವಿದ್ಯಾರ್ಥಿಗಳ ಸಹಯೋಗದ ಪ್ರಯತ್ನದಿಂದ ಜಲ-ಜಂಗಲ್‌-ಜಮೀನ್‌ ಸಂರಕ್ಷಣೆ ಚಳವಳಿ ಮತ್ತು ತತ್ವಗಳ ಆಧಾರದ ಮೇಲೆ ಪರಿಣಾಮಕಾರಿಯಾದ ನೀರಿನ ಸಾಕ್ಷರತಾ ಆಂದೋಲನವನ್ನು ಜನಸಮುದಾಯದಿಂದ ನಡೆಸಬಹುದಾಗಿದೆ.
ರಾಜೇಂದ್ರಸಿಂಗ್‌,
ಜಲತಜ್ಞ, ರಾಜಸ್ಥಾನ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.