ಅನರ್ಹ ಶಾಸಕರನ್ನು ಜನರು ಒಪ್ಪಿಕೊಂಡಿದ್ದಾರೆ, ಜನಾದೇಶ ಒಪ್ಪಿಕೊಳ್ಳುತ್ತೇವೆ: ಡಿಕೆ ಶಿವಕುಮಾರ್
15 ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಅಂತಿಮ ಹಂತ ತಲುಪಿದೆ
Team Udayavani, Dec 9, 2019, 11:42 AM IST
ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದ್ದು, 12ರಲ್ಲಿ ಕಾಂಗ್ರೆಸ್ 9 ಕ್ಷೇತ್ರಗಳನ್ನು ಕಳೆದುಕೊಂಡಿದೆ. ನಾವು ಈ ಜನಾದೇಶವನ್ನು ಒಪ್ಪಿಕೊಳ್ಳುವುದಾಗಿ ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
15 ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಅಂತಿಮ ಹಂತ ತಲುಪಿದ್ದು, ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭದ್ರವಾದಂತಾಗಿದೆ.
“ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ. ಅನರ್ಹ ಶಾಸಕರನ್ನು ಜನರನ್ನು ಒಪ್ಪಿಕೊಂಡಿದ್ದಾರೆ ಎಂದು ಮತಎಣಿಕೆ ಆರಂಭಗೊಂಡ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಗಮನಿಸಿದ ನಂತರ ಡಿಕೆ ಶಿವಕುಮಾರ್ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.