ಬಿಎಸ್ ವೈ ಸರ್ಕಾರಕ್ಕೀಗ ಸ್ಪಷ್ಟ ಬಹುಮತ; ತಲೆಕೆಳಗಾದ ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರ
ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 112 ಶಾಸಕರ ಅಗತ್ಯವಿತ್ತು
Team Udayavani, Dec 9, 2019, 1:09 PM IST
ಬೆಂಗಳೂರು:ರಾಜ್ಯದ ಹದಿನೈದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ 12 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಭರ್ಜರಿ ಬಹುಮತ ಪಡೆದಿದೆ. ಇದರೊಂದಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಮೂರುವರೆ ವರ್ಷಗಳ ಕಾಲ ಭದ್ರವಾದಂತಾಗಿದೆ.
ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳಲ್ಲಿ ಗೆಲ್ಲಲೇಬೇಕಾದ ಅನಿರ್ವಾಯತೆಗೆ ಸಿಲುಕಿತ್ತು. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 112 ಶಾಸಕರ ಅಗತ್ಯವಿತ್ತು. ಇದೀಗ ಉಪಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಜಯ ಸಾಧಿಸುವುದರೊಂದಿಗೆ ಪ್ರಸ್ತುತ ವಿಧಾನಸಭೆಯಲ್ಲಿ ಬಿಜೆಪಿ ಬಲ 117ಕ್ಕೆ ಏರಿದಂತಾಗಿದೆ.
105 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿಗೆ ವಿಧಾನಸಭೆಯಲ್ಲಿ ಸರಳ ಬಹುಮತ ಸಾಬೀತುಪಡಿಸಲು 112 ಶಾಸಕರ ಅಗತ್ಯವಿತ್ತು. ಹಾಲಿ 222 ಸದಸ್ಯಬಲದ(2 ಕ್ಷೇತ್ರಗಳಿಗೆ ಉಪಚುನಾವಣೆ ಇನ್ನಷ್ಟೇ ಘೋಷಣೆಯಾಗಬೇಕಿದೆ) ವಿಧಾನಸಭೆಯಲ್ಲಿ ಬಿಜೆಪಿ ಪ್ರಸ್ತುತ 117 ಸಂಖ್ಯಾಬಲ ಹೊಂದಿದೆ. ಕಾಂಗ್ರೆಸ್ 68, ಜೆಡಿಎಸ್ 34 ಸ್ಥಾನ ಹೊಂದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತ ಹೊಂದಿದ್ದು, ಬಿಎಸ್ ಯಡಿಯೂರಪ್ಪ ಸಿಎಂ ಕುರ್ಚಿ ಭದ್ರವಾದಂತಾಗಿದೆ.
15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಒಂಬತ್ತು ಕ್ಷೇತ್ರಗಳನ್ನು ಕಳೆದುಕೊಂಡಿದ್ದು, ಜೆಡಿಎಸ್ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇದರಿಂದ ಮತ್ತೆ ಅಧಿಕಾರದ ಗದ್ದುಗೆ ಏರಬೇಕೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ಕುಮಾರಸ್ವಾಮಿ ಲೆಕ್ಕಾಚಾರ ತಲೆಕೆಳಗಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್