ಜನ್ನಾಪುರ ಕೆರೆಗೆ ಕಾಯಕಲ್ಪ ಒದಗಿಸಲು ಸೂಡಾ ನಿರ್ಧಾರ

ತಿಂಗಳೊಳಗೆ ಕಾಮಗಾರಿಗೆ ಟೆಂಡರ್‌ ಆಹ್ವಾನಕೆರೆ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ

Team Udayavani, Dec 9, 2019, 3:55 PM IST

December-15

ಶಿವಮೊಗ್ಗ: ಕೊಳಕು ವಾಸನೆ, ಕಸ ಸುರಿಯುವ ತಾಣವಾಗಿದ್ದ ಕೆರೆಗೆ ಕಾಯಕಲ್ಪ ಒದಗಿಸಲು ಸೂಡಾ (ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿ ಕಾರ) ನಿರ್ಧರಿಸಿದೆ. ಕಡತ ವಿಧಾನ ಸೌಧದಲ್ಲಿದ್ದು ವಿಲೇವಾರಿಗೆ ಕಾಯುತ್ತಿದೆ. ಭದ್ರಾವತಿ ತಾಲೂಕಿನ ಜನ್ನಾಪುರದಲ್ಲಿರುವ ಕೆರೆಯು ಸುತ್ತಲೂ ವಸತಿ ಸಂಕೀರ್ಣ ಹೊಂದಿದ್ದು ಸಿಟಿ ಮಧ್ಯೆ ಇರುವುದರಿಂದ ಕೊಳಚೆ ಸೇರುವ, ಕಸ ಹಾಕುವ ತಾಣವಾಗಿ ಮಾರ್ಪಟ್ಟಿದೆ.

ಸುಮಾರು 10 ಹಳ್ಳಿ ಜನರು ಪಟ್ಟಣಕ್ಕೆ ಹೋಗಲು ಇದೇ ಕೆರೆ ಮೂಲಕ ಹಾದುಹೋಗಬೇಕಾಗಿದ್ದು ಗಬ್ಬು ವಾಸನೆ ಸಹಿಸಿಕೊಂಡೇ ಹೋಗಬೇಕಿದೆ. ಕೆರೆಯಲ್ಲಿ ನೀರು ಕಡಿಮೆಯಾದಾಗ ಈ ಕೊಳಕು ವಾಸನೆ ಉಪಟಳ ತೀವ್ರಗೊಳ್ಳುತ್ತದೆ. ಇಂತಹ ಕೆರೆಯನ್ನು ಜನ, ಜಲಚರ ಸ್ನೇಹಿಯಾಗಿಸಲು ಸೂಡಾ ಮುಂದೆ ಬಂದಿದ್ದು ತಿಂಗಳೊಳಗೆ ಟೆಂಡರ್‌ ಕರೆಯುವ ವಿಶ್ವಾಸದಲ್ಲಿದೆ.

ಎರಡು ವರ್ಷದ ಹಿಂದೆ ಎಂಟು ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧವಾಗಿತ್ತು. ತಾಂತ್ರಿಕ ಕಾರಣಗಳಿಂದ ಅನುಮೋದನೆ ಸಿಕ್ಕಿರಲಿಲ್ಲ. ಮತ್ತೆ ಕಾಮಗಾರಿ ಪುನರ್‌ ಪರಿಶೀಲಿಸಿ ಕೆಲವು ಕಾಮಗಾರಿಗಳನ್ನು ಕೈಬಿಟ್ಟು ಹೊಸ ಯೋಜನೆ ಸಿದ್ಧಪಡಿಸಲಾಗಿದೆ.

5.08 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಜನ್ನಾಪುರ ಕೆರೆಯನ್ನು 5.08 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನೀಲನಕ್ಷೆ ಸಿದ್ಧವಾಗಿದೆ. ಕೆರೆಯು 45.08 ಎಕರೆ ವಿಸ್ತೀರ್ಣವಿದ್ದು ಅದರ ಬೌಂಡರಿಯನ್ನು ಗುರುತಿಸಿ ಸುತ್ತಲೂ ಕೆರೆ ಏರಿ ನಿರ್ಮಾಣ ಮಾಡುವುದು, ಕೆರೆಗೆ ಸೇರುತ್ತಿರುವ ಕೊಳಚೆ ನೀರನ್ನು ಪೈಪ್‌ ಮೂಲಕ ನದಿಗೆ ಸೇರುವ ಹಳ್ಳಕ್ಕೆ ಲಿಂಕ್‌ ಮಾಡುವುದು, ಏರಿ ಸುತ್ತಲೂ ವಾಕಿಂಗ್‌ ಪಥ ನಿರ್ಮಾಣ, ಕಾಲುಸಂಕ, ಕೆರೆಗೆ ಸೇರುವ ನೀರಿನಲ್ಲಿ ಮಣ್ಣಿನ ಅಂಶವನ್ನು ನಿಯಂತ್ರಣ ಮಾಡಲು ಸಿಲ್ಟ್ ನಿಯಂತ್ರಣ ಘಟಕ, ಹೆಚ್ಚುವರಿ ಹೊರ ಹೋಗಲು ಕೋಡಿ ನಿರ್ಮಾಣ, ಮಕ್ಕಳ ಆಟದ ಪಾರ್ಕ್‌, ಬೇಲಿ ಹಾಗೂ ಸೆಕ್ಯುರಿಟ್‌ ಕ್ಯಾಬಿನ್‌ ಸಹ ಬರಲಿದೆ.

ಬೋಟ್‌ ಬಿಡುವ ಹಾಗೂ ಮಧ್ಯೆ ದ್ವೀಪ ನಿರ್ಮಿಸುವ ಬಗ್ಗೆ ಈ ಹಿಂದೆ ತೀರ್ಮಾನಿಸಲಾಗಿತ್ತು. ಕೆರೆ ಮಧ್ಯೆ ವಿದ್ಯುತ್‌ ಲೈನ್‌ ಹಾದುಹೋಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಯೋಜನೆ ಹಿಂಪಡೆಯಲಾಗಿದೆ. ಕೆರೆಗೆ ಚಾನಲ್‌ ನೀರು, ಮಳೆ ನೀರು ಮಾತ್ರ ಸಂಗ್ರಹಗೊಳ್ಳಲಿದೆ.

5 ಕೆರೆ ಅಭಿವೃದ್ಧಿ
ಸೂಡಾದಿಂದ ಜನ್ನಾಪುರ ಕೆರೆ ಜತೆ ಇತರೆ ಕೆರೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಜನ್ನಾಪುರ ಕೆರೆಗೆ 5.08 ಕೋಟಿ, 92.3 ಕೆರೆ ವಿಸ್ತೀರ್ಣದ ಸೋಮಿನಕೊಪ್ಪ ಕೆರೆಗೆ 3.80 ಕೋಟಿ, ಆಲ್ಕೋಳ ವ್ಯಾಪ್ತಿಯ ಸರ್ವೇ ನಂ.10ರ ಕೆರೆಗೆ 80 ಲಕ್ಷ, ಸರ್ವೇ ನಂ.46ರ ಕೆರೆಗೆ 65 ಲಕ್ಷ, ತ್ಯಾವರಚಟ್ನಹಳ್ಳಿ ಕುವೆಂಪು ಬಡಾವಣೆ ಸರ್ವೇ ನಂ.71ರ ಕೆರೆಗೆ 35 ಲಕ್ಷ, ಸರ್ವೇ ನಂ.58ರ ಕೆರೆಗೆ 32 ಲಕ್ಷ, ನಿದಿಗೆ ಕೆರೆಯ ಸರ್ವೇ ನಂ.12ರ ಕೆರೆಗೆ 18 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ.

ಸಿದ್ದರಾಮಯ್ಯನವರು ಬಂದಾಗಲೇ ಯೋಜನೆಗೆ ಚಾಲನೆ ನೀಡಲಾಗಿತ್ತು. ಮತ್ತೆ ಅದರ ಬಗ್ಗೆ ನಿಗಾ ವಹಿಸಲು ಆಗಿರಲಿಲ್ಲ. ಅಧಿಕಾರಿಗಳ ಜತೆ ಮಾತನಾಡುವೆ.
.ಎಂ.ಜೆ.ಅಪ್ಪಾಜಿ ಗೌಡ,
 ಮಾಜಿ ಶಾಸಕ

ಸೂಡಾ ವ್ಯಾಪ್ತಿಯ 5 ಕೆರೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಸಿದ್ಧವಾಗಿದೆ. ಜನ್ನಾಪುರ ಕೆರೆ ಅಭಿವೃದ್ಧಿಗೆ ಸಂಬಂಧಿಸಿದ ಕಡತ ವಿಧಾನಸೌಧದಲ್ಲಿದೆ. ತಕ್ಷಣ ಮಂಜೂರಾಗುವ ವಿಶ್ವಾಸವಿದೆ. ನಂತರ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಲಾಗುವುದು.
.ಮೂಕಪ್ಪ ಕರಿಭೀಮಣ್ಣನವರ್‌,
ಸೂಡಾ ಆಯುಕ್ತ

ಟಾಪ್ ನ್ಯೂಸ್

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.