ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ
Team Udayavani, Dec 9, 2019, 5:07 PM IST
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ವಿಭೂತಿಕೆರೆ ಗ್ರಾಮದ ಮಾವಿನ ತೋಟವೊಂದರಲ್ಲಿ ಶನಿವಾರ ರಾತ್ರಿ ನಡೆಯುತ್ತಿದ್ದ ಅಕ್ರಮ ರೇವ್ ಪಾರ್ಟಿಯ ಮೇಲೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಭೂತಿಕೆರೆ ಗ್ರಾಮದ ಬಳಿ ವೆಂಕಟೇಶ್ ಎಂಬುವರಿಗೆ ಸೇರಿದ ಸುಮಾರು 32 ಎಕರೆ ವಿಸ್ತೀರ್ಣದ ಮಾವಿನ ತೋಟದಲ್ಲಿ ಶನಿವಾರ ತಡರಾತ್ರಿ ಅಕ್ರಮವಾಗಿ ಪಾರ್ಟಿ ಏರ್ಪಡಿಸಲಾಗಿತ್ತು. ಕೇರಳ, ತಮಿಳುನಾಡು, ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಿಂದ 500ಕ್ಕೂ ಹೆಚ್ಚು ಮಂದಿ ಯುವಕ, ಯುವತಿಯರು ಇಲ್ಲಿ ಜಮಾಯಿಸಿ ಮೋಜು, ಮಸ್ತಿಯಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಮಧುಮಿತ ಎಂಬುವರು ರೇವ್ ಪಾರ್ಟಿ ಆಯೋಜನೆ ಮಾಡಿದ್ದರು. ಇವರಿಗೆ ಪುರಾಣಿಕ್ ಪುರೋಹಿತ್, ನಬಿರಾ,ರಿಚು ಎಂಬುವವರು ಸಾಥ್ ನೀಡಿದ್ದಾರೆ. ಪಾರ್ಟಿಗಾಗಿ ಯುವಕ ಯುವತಿಯರು ದ್ವಿಚಕ್ರ ವಾಹನ, ಕಾರುಗಳಲ್ಲಿ ಆಗಮಿಸಿ ಮೋಜು ಮಸ್ತಿಯಲ್ಲಿ ತೊಡಗಿದ್ದರು ಎನ್ನಲಾಗಿದೆ.
ಗೊತ್ತಾಗಿದ್ದು ಹೇಗೆ?: ತಡರಾತ್ರಿ ತೋಟದಿಂದ ಬರುತ್ತಿದ್ದ ಸಂಗೀತದ, ಕಿರುಚಾಟದ ಸದ್ದು, ಬೆಳಕು ಇತ್ಯಾದಿಗಳನ್ನು ಗಮನಿಸಿದ ಸಾರ್ವಜನಿಕರು ತಡ ರಾತ್ರಿಯಲ್ಲಿ ಗ್ರಾಮಾಂತರ ಪೊಲೀಸರಿಗೆ ತಿಳಿಸಿದ್ದಾರೆ. ಡಿಜೆ ಸೌಂಡ್ಗೆ ನೃತ್ಯ ಮಾಡುತ್ತಿದ್ದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ನೇತೃತ್ವದಲ್ಲಿ ರಾಮ ನ ಗರ ಗ್ರಾಮಾಂತರ ಠಾಣೆ
ಪೊಲೀಸರು ದಾಳಿ ನಡೆಸಿದ್ದಾರೆ. ಈ ಪಾರ್ಟಿಗಾಗಿ ಕಳೆದ ಒಂದು ತಿಂಗಳಿನಿಂದಲೂ ತಂಡ ತಯಾರಿ ನಡೆಸಿತ್ತು ಎಂದು ಗೊತ್ತಾಗಿದೆ. ಇದಕ್ಕಾಗಿ ಮೊಬೈಲ್ ಆ್ಯಪ್ ಕೂಡಸಿದ್ಧವಾಗಿತ್ತು. ಆ್ಯಪ್ ಮೂಲಕವೇ ಪಾರ್ಟಿಗೆ ಯುವಕ ಮತ್ತು ಯುವತಿಯರನ್ನು ಸಳೆಯಲಾಗಿದೆ.
ಮದ್ಯವಶ: ದಾಳಿ ವೇಳೆ ಮದ್ಯ , ಡಿಜೆ ಬಾಕ್ಸ್ಗಳು, ಶಾಮಿಯಾನ,ಕ್ಯಾಮೆರಗಳು ಸೇರಿದಂತೆ ಹಲವು ವಸ್ತು ಗಳನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ. ಅನಧಿಕೃತವಾಗಿ ರೇವ್ ಪಾರ್ಟಿ ಆಯೋಜನೆ ಮಾಡಿದ್ದರ ಸಂಬಂಧ ಆಯೋಜಕರ ವಿರುದ್ಧ ಕೇಸು ದಾಖಲಿಸಲು ರಾಮನಗರ ಗ್ರಾಮಾಂತರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ