ಪೌರತ್ವ ಮಸೂದೆ ದೇಶದ ಅಲ್ಪಸಂಖ್ಯಾತರಿಗೆ ಶೇ.0.001ರಷ್ಟೂ ವಿರುದ್ಧವಾಗಿಲ್ಲ: ಲೋಕಸಭೆಯಲ್ಲಿ ಶಾ
ಕಾಂಗ್ರೆಸ್ ಪಕ್ಷವೇ ದೇಶವನ್ನು ಧರ್ಮದ ಎಳೆಯ ಮೇಲೆ ಇಬ್ಭಾಗಿಸಲು ಹೊರಟಂತೆ
Team Udayavani, Dec 9, 2019, 6:30 PM IST
ನವದೆಹಲಿ:ಪೌರತ್ವ(ತಿದ್ದುಪಡಿ) ಮಸೂದೆ ದೇಶದ ಸಂವಿಧಾನದ ಜಾತ್ಯತೀತ ಹಾಗೂ ಸಮಾನತೆಯ ನೆಲೆಗಟ್ಟಿನ ವಿರುದ್ಧವಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮತ್ ಶಾ ಸೋಮವಾರ ಲೋಕಸಭೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಲೋಕಸಭೆಯಲ್ಲಿ ಪೌರತ್ವ ಮಸೂದೆಯನ್ನು ಮಂಡಿಸಲು ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉತ್ತರಿಸಿದ ಶಾ, ಒಂದು ವೇಳೆ ಕಾಂಗ್ರೆಸ್ ಪಕ್ಷಕ್ಕೆ ಧರ್ಮದ ಆಧಾರದ ಮೇಲೆ ಪೌರತ್ವ (ತಿದ್ದುಪಡಿ)ಮಸೂದೆ ಅಗತ್ಯವಿಲ್ಲ ಎಂದಾದರೆ. ಕಾಂಗ್ರೆಸ್ ಪಕ್ಷವೇ ದೇಶವನ್ನು ಧರ್ಮದ ಎಳೆಯ ಮೇಲೆ ಇಬ್ಭಾಗಿಸಲು ಹೊರಟಂತೆ ಎಂಬುದಾಗಿ ತಿರುಗೇಟು ನೀಡಿದರು.
ಪ್ರಸ್ತಾಪಿತ ಪೌರತ್ವ (ತಿದ್ದುಪಡಿ) ಮಸೂದೆ ಸಂವಿಧಾನದ ಯಾವುದೇ ಕಲಂ ಅನ್ನು ಉಲ್ಲಂಘಿಸಿಲ್ಲ. ಅಲ್ಲದೇ ಇದು ಶೇ.0.001ರಷ್ಟು ದೇಶದ ಅಲ್ಪಸಂಖ್ಯಾತರ ವಿರುದ್ಧವಾಗಿಲ್ಲ ಎಂಬುದಾಗಿ ಸ್ಪಷ್ಟಪಡಿಸುವುದಾಗಿ ಶಾ ಈ ಸಂದರ್ಭದಲ್ಲಿ ಲೋಕಸಭೆಯಲ್ಲಿ ಹೇಳಿದರು.
ಪೌರತ್ವ ತಿದ್ದುಪಡಿ ಮಸೂದೆ ಕುರಿತು ಸೂಕ್ತವಾದ ಸ್ಪಷ್ಟನೆ ನೀಡಿದ್ದೇನೆ. ಇನ್ನು ನಾನು ಏಕತೆ ಕುರಿತ ಜಗತ್ತಿನಾದ್ಯಂತ ಇರುವ ಕಾನೂನಿನ ಬಗ್ಗೆ ನಾನು ಚರ್ಚಿಸುತ್ತೇನೆ. ಒಂದು ವೇಳೆ ಇದನ್ನು ನಾವು ಸಮಾನತೆ ಅಂತ ಹೇಗೆ ಪರಿಭಾವಿಸಬೇಕು. ಶಿಕ್ಷಣ ಸೇರಿದಂತೆ ಅಲ್ಪಸಂಖ್ಯಾತರಿಗೆ ಇರುವ ವಿಶೇಷ ಕೋಟಾದ ಬಗ್ಗೆ ದಯವಿಟ್ಟು ವಿವರಣೆ ನೀಡಿ ಎಂದು ಶಾ ಹೇಳಿದರು.
ಇದೊಂದು ಪ್ರತಿಗಾಮಿ ಶಾಸನ ಎಂದು ಹಣೆಪಟ್ಟಿ ಹಚ್ಚಿ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದ ನಡುವೆಯೇ ಲೋಕಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ ಪರ ಸಂಸದರು ಮತ ಚಲಾಯಿಸಿದ್ದರು. ಈ ಮಸೂದೆ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿರಿಸಿಕೊಂಡ ಶಾಸನವಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ದಾಸ್ ವಾಗ್ದಾಳಿ ನಡೆಸಿದ್ದರು. ಕೆಳಮನೆಯಲ್ಲಿ ಮಸೂದೆ ಬಗ್ಗೆ ಗೃಹ ಸಚಿವ ಶಾ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ