ನಾಣಿ ಈಗ ಕೆಇಬಿ ಕೆಂಪಣ್ಣ!

ಹಾಸ್ಯ ಕಲಾವಿದರ ನಗೆಹಬ್ಬ

Team Udayavani, Dec 10, 2019, 5:01 AM IST

Tabala-Nani-1-(3)

ಈ ಹಿಂದೆ “ಕರಿಯಪ್ಪ’ನಾಗಿ ಗಮನಸೆಳೆದಿದ್ದ ಹಾಸ್ಯ ನಟ ತಬಲನಾಣಿ ಈಗ ಮತ್ತೊಂದು ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಬಳಿಕ ತಬಲ ನಾಣಿ ಅವರು ಸಿಕ್ಕಾಪಟ್ಟೆ ಬಿಝಿಯಾಗಿದ್ದು ಗೊತ್ತೇ ಇದೆ. ಈಗ ಪ್ರಮುಖ ಪಾತ್ರ ನಿರ್ವಹಿಸುವ ಮೂಲಕ ಮತ್ತೂಮ್ಮೆ ಕಚಗುಳಿ ಇಡಲು ಸಜ್ಜಾಗಿದ್ದಾರೆ. ಹೌದು, ತಬಲನಾಣಿ ಅವರೀಗ ಚಿತ್ರವೊಂದರ ಮುಖ್ಯ ಆಕರ್ಷಣೆ. ಆ ಚಿತ್ರಕ್ಕೆ “ಕೆಇಬಿ ಕೆಂಪಣ್ಣ’ ಎಂದು ನಾಮಕರಣ ಮಾಡಲಾಗಿದೆ.

ಸೋಮವಾರ ನಗರದ ಶ್ರೀಕಂಠೇಶ್ವರ ದೇವಾಲಯದಲ್ಲಿ ಚಿತ್ರಕ್ಕೆ ಮುಹೂರ್ತವೂ ನಡೆದಿದ್ದು, ಮೊದಲ ದೃಶ್ಯಕ್ಕೆ ನಿರ್ದೇಶಕ ಎಎಂಆರ್‌ ರಮೇಶ್‌ ಅವರು ಚಾಲನೆ ನೀಡಿದರೆ, ಮಂಜುಳ ನಾಣಿ ಕ್ಲಾಪ್‌ ಮಾಡಿದ್ದಾರೆ. ಈ ಚಿತ್ರಕ್ಕೆ ಶ್ರೀನಾಥ್‌ ನಿರ್ದೇಶಕರು. ಈ ಹಿಂದೆ “ರ್‍ಯಾಂಬೋ’, “ಪುಂಗಿದಾಸ’ ನಿರ್ದೇಶಿಸಿದ್ದ ಶ್ರೀನಾಥ್‌, “ವಿಕ್ಟರಿ’ ಸಿನಿಮಾಗೆ ಕಥೆ, ಚಿತ್ರಕಥೆ ಕೂಡ ಬರೆದಿದ್ದರು. ಈಗ “ಕೆಇಬಿ ಕೆಂಪಣ್ಣ’ ಚಿತ್ರಕ್ಕೆ ಸಜ್ಜಾಗಿದ್ದಾರೆ.

ತಬಲನಾಣಿ ಇದ್ದಾರೆಂದ ಮೇಲೆ ಅದೊಂದು ಹಾಸ್ಯ ಪ್ರಧಾನ ಚಿತ್ರವೇ ಇರುತ್ತೆ. ಅದರಲ್ಲೂ ಶೀರ್ಷಿಕೆಯೇ ಒಂದು ಮಜ ಕೊಡುವಂತಹ ಸೂಚನೆಯನ್ನೂ ಕೊಡುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವ ತಬಲನಾಣಿ, “ಇದೊಂದು ಗಂಭೀರವಾಗಿರುವ ವಿಷಯದ ಮೇಲೆ ಸಾಗುವ ಕಥೆ. ಅದರಲ್ಲೂ ತಂದೆ-ತಾಯಿ ತಮ್ಮ ಮಕ್ಕಳ ಮೇಲೆ ಏನೆಲ್ಲಾ ಆಸೆ, ಆಕಾಂಕ್ಷೆ ಇಟ್ಟುಕೊಂಡಿರುತ್ತಾರೆ, ಅವರನ್ನು ಭವಿಷ್ಯದಲ್ಲಿ ಹೇಗೆಲ್ಲಾ ಕಾಣಬೇಕು ಅಂದುಕೊಂಡಿರುತ್ತಾರೆ ಎಂಬ ಹಿನ್ನೆಲೆಯಲ್ಲಿ ಸಾಗುವ ಕಥೆ ಇಲ್ಲಿದೆ.

ಜ್ಯೋತಿಷಿ, ಸಂಖ್ಯಾಶಾಸ್ತ್ರಗಳನ್ನು ನಂಬುವ ತಂದೆ, ತನ್ನ ಮಗನ ಭವಿಷ್ಯ ಹೇಗಿದೆ ಅಂತ ತಿಳಿದುಕೊಳ್ಳಲು ಜ್ಯೋತಿಷಿಗಳ ಹಿಂದೆ ಬೀಳುತ್ತಲೇ, ಅವರ ಮಾತುಗಳೆಲ್ಲವೂ ಸುಳ್ಳು ಎನಿಸಿದಾಗ, ಆಗುವ ನೋವು, ನಿರಾಸೆ ಹೇಗೆಲ್ಲಾ ಇರುತ್ತೆ ಅನ್ನುವ ಸಿನಿಮಾದಲ್ಲಿ ವಾಸ್ತವ ಅಂಶಗಳಿವೆ. ಇಡೀ ಸಿನಿಮಾ ಜ್ಯೋತಿಷಿ ಮಾತುಗಳ ಮೇಲೆಯೇ ಕೇಂದ್ರೀಕೃತವಾಗಿರುತ್ತೆ. ಮಕ್ಕಳ ಭವಿಷ್ಯಕ್ಕಾಗಿ ತಂದೆ, ತಾಯಿಗಳು ಹೇಗೆಲ್ಲಾ ಅಲೆಯುತ್ತಾರೆ ಎಂಬ ವಿಷಯವನ್ನು ಹಾಸ್ಯವಾಗಿಯೇ ತೋರಿಸುತ್ತ, ಗಂಭೀರ ವಿಷಯ ಹೇಳುವ ಪ್ರಯತ್ನ ಇಲ್ಲಿದೆ’ ಎನ್ನುತ್ತಾರೆ ತಬಲನಾಣಿ.

ಚಿತ್ರದಲ್ಲಿ ವೀಣಾ ಸುಂದರ್‌, ಮಿತ್ರ, ಪ್ರವೀಣ್‌, ಮಿಮಿಕ್ರಿ ದಯಾನಂದ್‌ ಇತರರು ನಟಿಸುತ್ತಿದ್ದಾರೆ. ಬೆಂಗಳೂರಲ್ಲಿ 15 ದಿನಗಳ ಚಿತ್ರೀಕರಣ ನಡೆಸಿ, ನಂತರ ಚನ್ನಪಟ್ಟಣ ಹಾಗು ಇತರೆ ಹಳ್ಳಿಗಳಲ್ಲಿ ಚಿತ್ರೀಕರಣ ನಡೆಸುವ ಉದ್ದೇಶ ಚಿತ್ರತಂಡಕ್ಕಿದೆ. ಚಿತ್ರಕ್ಕೆ ಆಕಾಶ್‌ ಪರ್ವ ಸಂಗೀತವಿದೆ. ರಾಜ ಶಿವಶಂಕರ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.