ಜೀವನದಲ್ಲಿ ಹೋರಾಡಿ, ಸಾಧನೆ ಮಾಡಬೇಕು


Team Udayavani, Dec 10, 2019, 11:44 AM IST

dg-tdy-2

ದಾವಣಗೆರೆ: ಅಂಗವಿಕಲರು ಉತ್ತಮ ಸಾಧನೆಯ ಮೂಲಕ ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.. ರವೀಂದ್ರನಾಥ್‌ ತಿಳಿಸಿದರು.

ಸೋಮವಾರ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಅಂಗವಿಕಲರ ಆಶಾಕಿರಣ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ವಿಶೇಷ ಮಕ್ಕಳ ರಾಜ್ಯಮಟ್ಟದ ವಿಶೇಷ ಒಲಿಂಪಿಕ್‌ ಅಥ್ಲೆಟಿಕ್ಸ್‌ ಉದ್ಘಾಟಿಸಿ ಮಾತನಾಡಿದ ಅವರು, ಅಂಗವಿಕಲರು ಜೀವನದಲ್ಲಿ ಹೋರಾಡಿ, ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಅಂಗವಿಕಲರಾಗಿ ಜನಿಸಿದರೂ ಅದನ್ನೂ ಮೀರಿ ಬೆಳೆದು ಸಾಧನೆ ಮಾಡಬೇಕು. ಸಾಮಾನ್ಯ ಮಕ್ಕಳು ಆಡುವುದು ನೋಡಿದ್ದೇವೆ. ಅಂಗವಿಕಲ ಮಕ್ಕಳು ಜಾಣ್ಮೆಯಿಂದ ಆಡುತ್ತಾರೆ. ಈಜು ಸೇರಿ ವಿವಿಧ ಕ್ರೀಡೆಗಳಲ್ಲಿ ಸಾಕಷ್ಟು ಸಾಧಕರು ಇದ್ದಾರೆ. ನೀವು ಜೀವನದಲ್ಲಿ ಹೋರಾಡಿ, ಸಾಧನೆ ಮಾಡಬೇಕು ಎಂದು ಹೇಳಿದರು.

ಬೆಂಗಳೂರಿನ ಎಸ್‌ಒಬಿಕೆ ವಲಯ ನಿರ್ದೇಶಕಿ ಕುಮುದಾ ಮಾತನಾಡಿ, ವಿಶೇಷ ಮಕ್ಕಳು ಏನು ಮಾಡಬಲ್ಲರು ಎಂಬ ತಪ್ಪು ಕಲ್ಪನೆ ಇದೆ. ಅನೇಕ ವಿಕಲಚೇತನರು ಸಾಮಾನ್ಯರಂತೆ ಆಡಬಲ್ಲೆವು, ಎಲ್ಲರಂತೆ ನಾವು ಸಮರ್ಥರು ಎಂಬುದನ್ನು ಸಾಬೀತುಪಡಿಸಿದ್ದಾರೆ. ಇನ್ನೂ ಹೆಚ್ಚಿನ ಪ್ರೋತ್ಸಾಹ ದೊರೆತಲ್ಲಿ ಸಾಧನೆ ಮಾಡಲಿದ್ದಾರೆ ಎಂದು ತಿಳಿಸಿದರು. ಹಿಂದಿನ ಅಂತಾರಾಷ್ಟ್ರೀಯ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ 398 ಕ್ರೀಡಾಪಟುಗಳು 358 ಪದಕ ತಂದಿದ್ದಾರೆ. 11 ಜನರು ನಮ್ಮ ರಾಜ್ಯದವರು ಎಂದು ತಿಳಿಸಿದರು.

ಜಿಲ್ಲಾ ಚಿಗಟೇರಿ ಆಸ್ಪತ್ರೆ ಅಧೀಕ್ಷಕ ಡಾ| ನಾಗರಾಜ್‌ ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದು ವಿಶೇಷ ಶಕ್ತಿ ಇದೆ. ಗುರಿ ತಲುಪಲು ಸತತ ಪ್ರಯತ್ನ, ಮನಸಿದ್ದರೆ ಉತ್ತೇಜನ ಅಗತ್ಯ ಎಂದರು. ಮಹಾನಗರ ಪಾಲಿಕೆ ಸದಸ್ಯೆ ರೇಖಾ ಸುರೇಶ್‌ ಗಂಡಗಾಳೆ, ಅಂಗವಿಕಲರ ಆಶಾಕಿರಣ ಟ್ರಸ್ಟ್‌ ಕಾರ್ಯದರ್ಶಿ ಪೋಪಟ್‌ಲಾಲ್‌ ಜೈನ್‌, ಕಾರ್ಯಾಧ್ಯಕ್ಷ ರಮಣ್‌ ಲಾಲ್‌ ಪಿ.ಸಂಘವಿ, ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಾಜನಹಳ್ಳಿ ರಮಾನಂದ್‌, ದಾವಣಗೆರೆಯ ಸಿಆರ್‌ಸಿ ಕೇಂದ್ರದ ನಿರ್ದೇಶಕ ಡಾ| ಜ್ಞಾನವೇಲು, ಎಸ್‌ಒಬಿಕೆ ಕ್ರೀಡಾ ನಿರ್ದೇಶಕ ಎ.ಅಮರೇಂದ್ರ, ಡಾ|ಪಿ.ಎಂ.ಮರುಳಸಿದ್ದಪ್ಪ ಇತರರು ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.