ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೇಲಿ ಪಾಸ್, ರಾಜ್ಯಸಭೆಯಲ್ಲಿ ಶಾ ಲೆಕ್ಕಚಾರ ಹೇಗಿದೆ ಗೊತ್ತಾ?


Team Udayavani, Dec 10, 2019, 1:04 PM IST

Amit-Shah1

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಸತತ 7ಗಂಟೆಗಳ ಕಾಲ ಸುದೀರ್ಘ ಚರ್ಚೆಯ ನಂತರ ಲೋಕಸಭೆಯಲ್ಲಿ ಸೋಮವಾರ ತಡರಾತ್ರಿ ಅಂಗೀಕಾರಗೊಂಡಿದೆ. ಇದೀಗ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಬುಧವಾರ ಅಂಗೀಕಾರಗೊಳ್ಳುವ ನಿರೀಕ್ಷೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರದ್ದಾಗಿದೆ.

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಬಹುಮತದೊಂದಿಗೆ ಅಂಗೀಕಾರಗೊಂಡಿತ್ತು. ಅದೇ ರೀತಿ ಮೇಲ್ಮನೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳಲು ಎನ್ ಡಿಎ ಸರ್ಕಾರಕ್ಕೆ ದೊಡ್ಡ ಸಮಸ್ಯೆ ಎದುರಾಗಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಲೆಕ್ಕಾಚಾರವಾಗಿದೆ.

ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಜೆಡಿಯು, ಶಿವಸೇನಾ, ಬಿಜೆಪಿ ಹಾಗೂ ಈಶಾನ್ಯ ರಾಜ್ಯದ ಕೆಲವು ಪಕ್ಷಗಳು ಬೆಂಬಲ ನೀಡಿದ್ದರಿಂದ ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು. 311 ಸಂಸದರು ಮಸೂದೆ ಪರವಾಗಿ ಹಾಗೂ 80 ಸಂಸದರು ಮಸೂದೆ ವಿರುದ್ಧವಾಗಿ ಮತ ಚಲಾಯಿಸಿದ್ದರು. ಏತನ್ಮಧ್ಯೆ ರಾಜ್ಯಸಭೆಯಲ್ಲಿ ಮಸೂದೆ ಏನಾಗಲಿದೆ ಎಂಬುದು ಎಲ್ಲರ ಚಿತ್ತ ನೆಟ್ಟಿದೆ.

ಕಳೆದ ಎರಡು ವರ್ಷಗಳಲ್ಲಿ ರಾಜ್ಯಸಭೆಯಲ್ಲಿ ಬಿಜೆಪಿ ಮತ್ತು ಎನ್ ಡಿಎ ತನ್ನ ಸಂಖ್ಯಾಬಲವನ್ನು ವೃದ್ಧಿಸಿಕೊಂಡಿದೆ. 245 ಸದಸ್ಯಬಲ ಹೊಂದಿರುವ ರಾಜ್ಯಸಭೆಯಲ್ಲಿ ಐದು ಸ್ಥಾನಗಳು ಖಾಲಿಯಾಗಿವೆ. ಇದರೊಂದಿಗೆ ರಾಜ್ಯಸಭೆ ಒಟ್ಟು ಸದಸ್ಯ ಬಲ ಈಗ 240. ಒಂದು ವೇಳೆ ರಾಜ್ಯಸಭೆಯಲ್ಲಿಯೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾಗಬೇಕಾದರೆ 121 ಮತಗಳ ಅಗತ್ಯವಿದೆ.

ರಾಜ್ಯಸಭೆಯಲ್ಲಿ ಮೋದಿ ಸರ್ಕಾರದ ಸಂಖ್ಯಾಬಲ ಎಷ್ಟು?

ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾಗಬೇಕಾದರೆ ಶಾಗೆ 121 ಸದಸ್ಯರ ಬೆಂಬಲದ ಅಗತ್ಯವಿದೆ. ಮೇಲ್ಮನೆಯಲ್ಲಿ ಬಿಜೆಪಿಯ 83, ಬಿಜೆಡಿ 07, ಎಐಎಡಿಎಂಕೆ 11, ಅಕಾಲಿ ದಳ್ 03, ಶಿವಸೇನಾ 03, ಜೆಡಿಯು 06, ವೈಎಸ್ ಆರ್ 2, ಎಲ್ ಜೆಪಿ 01, ಆರ್ ಪಿಐ 01 ಹಾಗೂ ನಾಲ್ವರು ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರು ಸೇರಿ ಒಟ್ಟು 121 ಸದಸ್ಯರ ಬೆಂಬಲ ಸರಳವಾಗಿ ಪಡೆಯಬಹುದಾಗಿದೆ.

ಮತ್ತೊಂದೆಡೆ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸುತ್ತಿರುವ ಪ್ರತಿಪಕ್ಷಗಳಿಗೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗುವುದನ್ನು ತಡೆಯಲು ಸಾಧ್ಯವಿಲ್ಲ. ಮೇಲ್ಮನೆಯಲ್ಲಿ ಕಾಂಗ್ರೆಸ್ 46, ಟಿಎಂಸಿ 13, ಸಮಾಜವಾದಿ 09, ಎಡಪಕ್ಷ 06, ಡಿಎಂಕೆ 05, ಆರ್ ಜೆಡಿ , ಎನ್ ಸಿಪಿ, ಬಿಎಸ್ಪಿ ಸೇರಿ 04, ಟಿಡಿಪಿ 02, ಮುಸ್ಲಿಂ ಲೀಗ್ 2, ಪಿಡಿಪಿ 01, ಜೆಡಿಎಸ್ 01, ಕೇರಳ ಕಾಂಗ್ರೆಸ್ 01, ಟಿಆರ್ ಎಸ್ 6 ಸೇರಿ ಒಟ್ಟು 100 ಮಂದಿ ಸದಸ್ಯ ಬಲ ಹೊಂದಿದೆ.

ಟಾಪ್ ನ್ಯೂಸ್

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

15

Manipal: ಸಿಟಿ ಬಸ್‌ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

14

IMDb ಟಾಪ್​ 100 ಇಂಡಿಯನ್ ಸೆಲೆಬ್ರಿಟಿ ಲಿಸ್ಟ್: ದೀಪಿಕಾ ನಂ.1, ಸ್ಥಾನ ಪಡೆದ ಕನ್ನಡದ ಈ ನಟ

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

ಪ್ರೇರಣೆ ನೀಡಿದ ಪ್ರವಚನ-ಆನ್‌ಲೈನ್‌ನಿಂದ ಗಡಿ ದಾಟಿದ ರಾಯಚೂರು ಮಾವು!

ಪ್ರೇರಣೆ ನೀಡಿದ ಪ್ರವಚನ-ಆನ್‌ಲೈನ್‌ನಿಂದ ಗಡಿ ದಾಟಿದ ರಾಯಚೂರು ಮಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.