ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Dec 10, 2019, 2:41 PM IST
ಶಿವಮೊಗ್ಗ: ಹೊಸನಗರ ತಾಲೂಕು ಆಹಾರ ನಿರೀಕ್ಷಕ ಐ.ಡಿ.ದತ್ತಾತ್ರೆಯ ಅವರ ಆತ್ಮಹತ್ಯೆಗೆ ಅಧಿಕಾರಿಗಳೇ ಕಾರಣ, ಅವರ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಶಾಖೆಯ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಆಹಾರ ನಿರೀಕ್ಷಕ ದತ್ತಾತ್ರೇಯ ಅವರ ಆತ್ಮಹತ್ಯೆಗೆ ಹೊಸನಗರ ತಾಲೂಕಿನ ತಹಶೀಲ್ದಾರ್, ಉಪ ತಹಶೀಲ್ದಾರ್ ಸೇರಿದಂತೆ ಸುಮಾರು 9 ಅಧಿ ಕಾರಿಗಳು ಕಾರಣರಾಗಿದ್ದಾರೆ. ತಮ್ಮ ಸಾವಿಗೆ ಇವರೇ ಕಾರಣ ಎಂದು ಡೆತ್ನೋಟ್ ಸಹ ಅವರು ಬರೆದಿದ್ದಾರೆ. ಈಗಾಗಲೇ 9 ಜನರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣರಾದ ಈ ಎಲ್ಲರನ್ನು ಕೆಲಸದಿಂದ ಅಮಾನತುಗೊಳಿಸಿ ಕೂಡಲೇ ಬಂಧಿಸುವಂತೆ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.
ದತ್ತಾತ್ರೇಯ ಅವರಿಗೆ ಗ್ರಾಮ ಲೆಕ್ಕಿಗ ಹುದ್ದೆಯಿಂದ ಪದೋನ್ನತಿ ಆಗಿತ್ತು. ಇದರ ವೇತನವನ್ನು ಮಾಡಲು ತಹಶೀಲ್ದಾರ್ ಸೇರಿದಂತೆ ಕಚೇರಿಯ ಇತರರು ವಿನಾಕಾರಣ ವಿಳಂಬ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಮಗಳ ಮದುವೆಗೂ ರಜೆ ಕೊಟ್ಟಿರಲಿಲ್ಲ. ಅಲ್ಲದೇ ದತ್ತಾತ್ರೇಯ ಮೇಲೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದರು. ಆರೋಗ್ಯ ತಪಾಸಣೆಗೂ ರಜೆ ನೀಡಲಿಲ್ಲ. ಈ ಅ ಧಿಕಾರಿಗಳು ದಬ್ಟಾಳಿಕೆ ಮಾಡುತ್ತಿದ್ದಾರೆ ಎಂದು ಕುಟುಂಬದವರು ಈಗಾಗಲೇ ದೂರು ನೀಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಅಲ್ಲದೇ ತಹಶೀಲ್ದಾರ್ ಅವರು ಪದೋನ್ನತಿ ಹೊಂದಿದ ನೌಕರರನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದಾರೆ ಎಂದು ದೂರುಗಳು ಬಂದಿವೆ. ಶಿರಸ್ತೇದಾರ್ ಇದಕ್ಕೆ ಮಧ್ಯವರ್ತಿ ಆಗಿದ್ದಾರೆ. ಅಷ್ಟೆ ಅಲ್ಲ ಮಹಿಳಾ ಸಿಬ್ಬಂದಿಗೂ ಸಹ ಕಿರುಕುಳ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ಮತ್ತು ಆತ್ಮಹತ್ಯೆಗೆ ಕಾರಣವಾಗಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಮೃತ ದತ್ತಾತ್ರೇಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಕಿರಿಯ ಮಗಳಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿಕೆಲಸ ನೀಡಬೇಕು ಎಂದು ಆಗ್ರಹಿಸಲಾಗಿದೆ. ಮನವಿ ನೀಡುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕೆ.ಅರುಣ್ ಕುಮಾರ್, ಗ್ರಾಮ ಲೆಕ್ಕಿಗರ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ನಾಯ್ಕ, ಪ್ರಮುಖರಾದ ಕೃಷ್ಣಪ್ಪ, ಎಚ್.ಪಿ.ಗಣೇಶ್ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್