ಅಕ್ರಮ ವಲಸಿಗರ ಮಾಹಿತಿಗೆ ಸಮೀಕ್ಷೆ: ಬೊಮ್ಮಾಯಿ


Team Udayavani, Dec 11, 2019, 3:07 AM IST

akrama-vala

ಹರಿಹರ: ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರ ಸಂಖ್ಯೆ ಕುರಿತು ಮಾಹಿತಿ ಇಲ್ಲದ್ದರಿಂದ ಸಮೀಕ್ಷೆ ನಡೆಸಲು ಪೊಲೀಸ್‌ ಠಾಣೆಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಹನಗವಾಡಿ ಸಮೀಪದ ವೀರಶೈವ ಲಿಂಗಾಯಿತ ಪಂಚಮಸಾಲಿ ಮಠಕ್ಕೆ ಮಂಗಳವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಇರಬಹುದಾದ ಬೇರೆ ರಾಷ್ಟ್ರದ ಪ್ರಜೆಗಳ ಕುರಿತು ಈಗಾಗಲೆ ಸರ್ವೇ ಕಾರ್ಯ ನಡೆದಿದೆ. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ರಾಷ್ಟ್ರೀಯ ನೀತಿಯಾಗಬೇಕೆಂಬುದು ಕೇಂದ್ರ ಸರ್ಕಾರದ ಆಶಯ. ರಾಜ್ಯದಲ್ಲಿ ಎಷ್ಟು ಜನ ವಿದೇಶಿಯರಿದ್ದಾರೆಂದು ಈವರೆಗೂ ಅಂದಾಜು ಸಿಕ್ಕದ ಕಾರಣ ರಾಜ್ಯದಲ್ಲಿನ ಎಲ್ಲಾ ಭಾಗದಲ್ಲೂ ಸರ್ವೇ ಕಾರ್ಯ ಕೈಗೊಳ್ಳಲು ಠಾಣೆಗಳಿಗೂ ಸೂಚನೆ ನೀಡಲಾಗುತ್ತಿದೆ ಎಂದರು.

ಬೇರೆ ರಾಷ್ಟ್ರದ ಪ್ರಜೆಗಳ ಪತ್ತೆ ಮಾಡುವುದು ಅವರನ್ನು ಅವರ ಮಾತೃದೇಶಕ್ಕೆ ಹಸ್ತಾಂತರ ಮಾಡುವುದು ಎನ್‌ಆರ್‌ಸಿ ಉದ್ದೇಶವಾಗಿದ್ದು, ಈಗಾಗಲೇ ನೈಜೀರಿಯಾದ 16 ಜನರು, 63 ಬಾಂಗ್ಲಾ ನಾಗರಿಕರನ್ನು ಪತ್ತೆ ಹಚ್ಚಿ ಅವರವರ ದೇಶಕ್ಕೆ ಹಸ್ತಾಂತರಿಸಲಾಗಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾ, ಅಪಘಾನಿಸ್ತಾನ ಮುಂತಾದ ರಾಷ್ಟ್ರಗಳು ಇಸ್ಲಾಂ ಧರ್ಮಾಧಾರಿತ ರಾಷ್ಟ್ರಗಳಾಗಿದ್ದು, ಮುಸ್ಲಿಮರಿಗೆ ಅಬಾಧಿತವಾಗಿ ಆಶ್ರಯ ನೀಡುತ್ತಿವೆ.

ಆದರೆ ಈ ರಾಷ್ಟ್ರಗಳಿಂದ ಹೊರದಬ್ಬಲ್ಪಡುವ ಹಿಂದೂ, ಸಿಖ್‌, ಬೌದ್ಧ, ಪಾರ್ಸಿ, ಜೈನ, ಕ್ರಿಶ್ಚಿಯನ್‌ರಿಗೆ ವಾಸಿಸಲು ಬೇರೆ ಸ್ಥಳಗಳಿಲ್ಲದ ಕಾರಣ ಅವರಿಗೆ ಭಾರತದ ನಾಗರಿಕತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ ಅಗತ್ಯವಾಗಿ ಬೇಕಿದೆ ಎಂದರು. ಸಿಎಂ ಬಿಎಸ್‌ವೈ ಎರಡು ಅಂಶಗಳನ್ನು ಹೇಳಿದ್ದಾರೆ. ಮೊದಲನೆಯದಾಗಿ ಆಡಳಿತ ಯಂತ್ರವನ್ನು ಚುರುಕು ಮಾಡಿ ಸುಧಾರಣೆ ತರುವುದು, ಎರಡನೆಯದಾಗಿ ಅಭಿವೃದ್ಧಿ ಕಾರ್ಯಕ್ಕೆ ಗಮನ ನೀಡುವುದು.

ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಈಗಾಗಲೇ ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳ ಪರಮಾರ್ಶೆ ಮಾಡಲು ಹಾಗೂ ಬಜೆಟ್‌ಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು. ಉಪ ಚುನಾವಣೆಯಲ್ಲಿ ತೋಳ್ಬಲ, ಹಣಬಲದಿಂದ ಬಿಜೆಪಿಗೆ ಜಯಸಿಕ್ಕಿದೆ ಎನ್ನುವುದು ಸೋತಾಗ ಮಾಡುವ ಸಾಮಾನ್ಯ ಆರೋಪ.

ಈ ಹಿಂದೆ ರಾಣಿಬೆನ್ನೂರು ಕ್ಷೇತ್ರದಲ್ಲಿ ಐದು ಬಾರಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿ ಚುನಾವಣೆ ಹೇಗೆ ಮಾಡಿದ್ದರೆಂದು ನಾವೂ ಪ್ರಶ್ನಿಸಬಹುದು. ಮಾಜಿ ಸಿಎಂ ಸಿದ್ದರಾಮಯ್ಯ ರಾಣಿಬೆನ್ನೂರಿಗೆ ಬಂದಾಗ ಹಣ ಹಂಚಿರುವ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ ಎಂದರು. ಇದಕ್ಕೂ ಮುನ್ನ ಬೊಮ್ಮಾಯಿಯವರು ವಚನಾನಂದ ಸ್ವಾಮೀಜಿ ಆಶೀರ್ವಾದ ಪಡೆದರು. ರಾಣಿಬೆನ್ನೂರು ಶಾಸಕ ಅರುಣಕುಮಾರ್‌, ಪೀಠದ ಟ್ರಸ್ಟ್‌ ಧರ್ಮದರ್ಶಿ ಬಿ.ಸಿ.ಉಮಾಪತಿ ಇತರರಿದ್ದರು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.