ಮತ್ತೆ ಶರತ್ ಸೇರ್ಪಡೆ ಇಲ್ಲ
Team Udayavani, Dec 11, 2019, 3:02 AM IST
ಹುಬ್ಬಳ್ಳಿ: ಪಕ್ಷ ತೊರೆದು ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿರುವ ಶರತ್ ಬಚ್ಚೇಗೌಡ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿ ಕೊಳ್ಳು ವುದಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದರು.ಅವರು ಮಾತೃ ಪಕ್ಷ ಬಿಟ್ಟು ಹೋಗಿದ್ದು ತಾಯಿಗೆ ಅನ್ಯಾಯ ಮಾಡಿದಂತೆ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ ಸೋಲಿಗೆ ಸಂಸದ ಬಚ್ಚೇಗೌಡ ಕಾರಣವಾಗಿ ದ್ದಾರೆ. ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಭಾಗಿ ಯಾಗಿಲ್ಲ. ಅವರ ನಡೆಯನ್ನು ವರಿಷ್ಠರು ಗಮನಿಸುತ್ತಿದ್ದು ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದರು.