ಹವಾಮಾನ ಬದಲಾವಣೆಯಲ್ಲಿ ಸೂಚ್ಯಂಕದಲ್ಲಿ ಸುಧಾರಣೆ
Team Udayavani, Dec 11, 2019, 3:52 PM IST
ಸ್ಪ್ಯಾನೀಶ್ : ಹವಮಾನ ವೈಪರೀತ್ಯದಿಂದ ದೇಶ ನಲುಗುತ್ತಿದೆ. ತಾಪಮಾನ ಏರಿಳಿತದಿಂದ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಪೆಟ್ಟು ಬೀಲುತ್ತಿದೆ ಎಂಬಿತ್ಯಾದಿ ಅಭಿಪ್ರಾಯಗಳು ಕೆಲ ತಿಂಗಳಿನಿಂದ ಕೇಳಿ ಬರುತ್ತಿರುವುದು ಸುಳ್ಳಲ್ಲ. ಆದರೆ ಇಂತಹ ಹೇಳಿಕೆಗಳನ್ನು ತಳ್ಳಿಹಾಕುವಂತಹ ಬೆಳವಣಿಗೆಯೊಂದು ನಡೆದಿದ್ದು, ಹವಾಮಾನ ಬದಲಾವಣೆ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ (ಸಿಸಿಪಿಐ) ಭಾರತ ಬೆಳವಣಿಗೆ ಕಂಡಿದೆ.
ಹವಾಮಾನ ಶೃಂಗಸಭೆಯಲ್ಲಿ ವರದಿ
ಮಂಗಳವಾರ ನಡೆದ ಸಿಒಪಿ25 ಹವಾಮಾನ ಶೃಂಗಸಭೆಯಲ್ಲಿ ಸಿಸಿಪಿಐ ಕುರಿತು ವರದಿಯನ್ನು ಬಿಡುಗಡೆ ಮಾಡಿದ್ದು, ಮೊದಲ ಬಾರಿಗೆ ಅಗ್ರ ಹತ್ತು ಸ್ಥಾನಗಳ ಪಟ್ಟಿಯಲ್ಲಿ ಮೊದಲ ಬಾರಿಗೆ ದೇಶ ಗುರುತಿಸಿಕೊಂಡಿದೆ.
9ನೇ ಸ್ಥಾನ
ಉನ್ನತ ವರ್ಗದ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿರುವ ದೇಶ, ಪ್ರಸ್ತುತ ಬಳಕೆ ಮಾಡುತ್ತಿರುವ ಇಂಧನದ ಪ್ರಮಾಣ ಮತ್ತು ಹೊರಸೂಸುತ್ತಿರುವ ಮಾಲಿನ್ಯದ ಮಟ್ಟದಲ್ಲಿ ಸುಧಾರಣೆ ಕಂಡಿದ್ದು, 2030ರ ಹಸಿರು ಮನೆ ಅನಿಲ ಮಹತ್ವಾಕಾಂಕ್ಷೆ ಯೋಜನೆಯ ಉದ್ದೇಶ ಸಾಧನೆಗಾಗಿ ಪೂರಕವಾದ ವಾತಾವರಣ ಕಲ್ಪಿಸಿಕೊಡುತ್ತಿದೆ ಎಂದು ವರದಿ ಹೇಳಿದೆ.
ಉತ್ತಮ ಅಂಕ
ನವೀಕರಿಸಬಹುದಾದ ಇಂಧನಗಳ ಮರುಬಳಕೆಯಲ್ಲಿ ದೇಶಕ್ಕೆ ಉತ್ತಮ ಅಂಕ ಲಭಿಸಿದ್ದು, ನವೀಕರಿಸಬಹುದಾದ ಇಂಧನ ಬಳಕೆ ಹೆಚ್ಚಿಸುವ (2030)ಗುರಿಯ ಅವಧಿಗಿಂತ 2 ಡಿಗ್ರಿ ಸೆಲ್ಸಿಯಸ್ ಹೊಂದಾಣಿಕೆಯಷ್ಟು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಸಂಶೋಧಕರಿಂದ ಶ್ಲಾಘನೆ
ಅಧ್ಯಯನ ನಡೆಸಿದ ಸಂಧೋಧಕರು ಭಾರತೀಯ ನೀತಿಗಳನ್ನು ಶ್ಲಾ ಸಿದ್ದು, ನವೀಕರಿಸಬಹುದಾದ ಇಂಧನಗಳ ಮರುಬಳಕೆಯನ್ನು ಹೆಚ್ಚಿಸಲು ಮತ್ತು ಈ ಯೋಜನೆಯನ್ನು ಉತ್ತೇಜಿಸಲು ದೇಶ ತೆಗೆದುಕೊಂಡಿರುವ ವಿಸ್ತರಣಾ ನೀತಿಗಳು ಮಹತ್ವಾಕಾಂಕ್ಷೆಯ ಗುರಿಯನ್ನು ಪೂರೈಸಲು ಪೂರಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನೂ ಆಸ್ಟ್ರೇಲಿಯಾ, ಸೌದಿ ಅರೇಬಿಯಾ ಮತ್ತು ಯುಎಸ್ ಮಾಲಿನ್ಯ ಹೊರಸೂಸುವಿಕೆ,ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮತ್ತು ಹವಾಮಾನ ನೀತಿಯಲ್ಲಿ ಕಳೆಪೆ ಪ್ರದರ್ಶನ ನೀಡಿದ್ದು, ಉತ್ತಮ ಪ್ರದರ್ಶನಗಳ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಸ್ವೀಡನ್, ಡೆನ್ಮಾರ್ಕ್ ಮತ್ತು ಯುಕೆ ರಾಷ್ಟ್ರಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ