ಶಿಥಿಲಾವಸ್ಥೆಯಲ್ಲಿ ಮಾಡದಗುಡ್ಡೆ ಅಂಗನವಾಡಿ ಕೇಂದ್ರ

ಕಡತದಲ್ಲೇ ಬಾಕಿ ಉಳಿದ ನಿರ್ಮಾಣ ಕಾರ್ಯ

Team Udayavani, Dec 12, 2019, 5:23 AM IST

sx-13

ಬೋಳಿಯಾರ್‌: ಮುರಿದು ಬೀಳುವ ಹಂತದಲ್ಲಿರುವ ಛಾವಣಿ, ನೇತಾಡುತ್ತಿರುವ ಬಾಗಿಲು ಇದು ಬೋಳಿಯಾರು ಮಾಡದಗುಡ್ಡೆ ಅಂಗನವಾಡಿ ಕೇಂದ್ರದ ಕಟ್ಟಡದ ದುರಾವಸ್ಥೆ. ಪುಟ್ಟ ಪುಟ್ಟ ಕಂದಮ್ಮಗಳು ಯಾವುದೇ ಪರಿವಿಲ್ಲದೆ ಈ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ಹೆಜ್ಜೆ ಹಾಕಿ ಆಟವಾಡುತ್ತಿದ್ದರೆ, ಕಟ್ಟಡ ನಿರ್ಮಾಣಕ್ಕೆ ಪಂಚಾಯತ್‌ ಅಧಿಕಾರಿಗಳಿಗೆ ಅಂಗನವಾಡಿ ಸಹಾಯಕಿಯರು ಮತ್ತು ಮಕ್ಕಳ ಹೆತ್ತವರು ಮಾಡಿದ ಮನವಿ ಕೇವಲ ಕಡತದಲ್ಲಿಯೇ ಧೂಳು ತಿನ್ನುತ್ತಿದೆ.

ಮಂಗಳೂರು ತಾಲೂಕಿನ ಬೋಳಿಯಾರ್‌ ಗ್ರಾ.ಪಂ. ವ್ಯಾಪ್ತಿಯ ಮಾಡದಗುಡ್ಡೆ ಅಂಗನವಾಡಿ ಕೇಂದ್ರ ಪಂಚಾಯತ್‌ ಕಚೇರಿಯ ಬದಿಯಲ್ಲೇ ಇದ್ದರೂ ಅಂಗನವಾಡಿ ಕೇಂದ್ರದ ದುರವಸ್ಥೆ ಪಂಚಾಯತ್‌ನ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ದಿನಾಲೂ ಕಣ್ಣಿಗೆ ಕಂಡರೂ ಕೇಂದ್ರಕ್ಕೆ ನೂತನ ಕಟ್ಟಡ ಕಲ್ಪಿಸುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎನ್ನುತ್ತಾರೆ ಅಂಗನವಾಡಿ ಕೇಂದ್ರದ ಮಕ್ಕಳ ಹೆತ್ತವರು.

6 ವರ್ಷದಿಂದ ಪಂಚಾಯತ್‌ಗೆ ಮನವಿ
ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಆರು ವರ್ಷಗಳಿಂದ ಅಂಗನವಾಡಿ ಸಹಾಯಕಿಯರು ಮತ್ತು ಮಕ್ಕಳ ಹೆತ್ತವರು ಪ್ರತೀ ಗ್ರಾಮ ಸಭೆಯಲ್ಲಿ ಮನವಿ ಮಾಡಿ ಒತ್ತಾಯಿಸುತ್ತಿದ್ದಾರೆ. ಆದರೆ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಸಭೆಯಲ್ಲಿ ನಿರ್ಣಯ ತೆಗೆದುಕೊಂಡರೂ ಯಾವುದೇ ಫಲಿತಾಂಶ ಲಭ್ಯವಾಗಿಲ್ಲ. ಮನವಿ ಸಲ್ಲಿಸಿದರೂ ಪಂಚಾಯತ್‌ ಸ್ಪಂದಿಸದೇ ಇರುವಾಗ ಹಿಂದಿನ ಗ್ರಾಮಸಭೆಯಲ್ಲಿ ಮನವಿ ಸಲ್ಲಿಸುವುದನ್ನೇ ಕೈಬಿಡಲಾಗಿದೆ ಎನ್ನುತ್ತಾರೆ ಅಂಗನವಾಡಿ ಕೇಂದ್ರದ ಮಕ್ಕಳ ಹೆತ್ತವರು.

ಮಳೆಗಾಲದಲ್ಲಿ ಹಾವುಗಳ ಕಾಟ
ಒಂದೆಡೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ಮಕ್ಕಳ ದೈನಂದಿನ ಕಲಿಕೆ ನಡೆದರೆ ಮಳೆಗಾಲ ಬಂತೆಂದರೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳು ಬರಲು ಹೆದರುವ ಸ್ಥಿತಿ ನಿರ್ಮಾಣವಾಗುತ್ತದೆ. ಮಳೆ ನೀರಿಗೆ ಅಂಗನವಾಡಿ ಕೇಂದ್ರ ಜಲಾವೃತಗೊಂಡರೆ ಮಕ್ಕಳಿಗೆ ಪಂಚಾಯತ್‌ ಕಚೇರಿಗೆ ಸ್ಥಳಾಂತರಗೊಳ್ಳುತ್ತದೆ. ಇನ್ನೊಂದೆಡೆ ಮುರಿದಿರುವ ಕಿಟಕಿಗಳ ಎಡೆಯಿಂದ ಹಾವುಗಳು ಅಂಗನವಾಡಿ ಕೇಂದ್ರದ ಒಳಗೆ ನುಸುಳುತ್ತವೆ. ಹಲವಾರು ಬಾರಿ ಮಕ್ಕಳು ಹಾವಿಗೆ ಹೆದರಿ ಹೊರ ಓಡಿ ಬಂದಿರುವ ಘಟನೆ ಸಂಭವಿಸಿದ್ದುಂಟು. ಹಾವಿನ ಭಯದಿಂದ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬರಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆಲವು ಹೆತ್ತವರು ಹಾವು ಬರುವ ಕಾರಣದಿಂದ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಕಳುಹಿಸುತ್ತಿಲ್ಲ ಎನ್ನುತ್ತಾರೆ ಸ್ತ್ರೀ ಶಕ್ತಿ ಸಂಘದಲ್ಲಿ ಸಕ್ರಿಯವಾಗಿರುವ ಆಸಿಯಾ ಅವರು. ನಾವು ಹೆಚ್ಚಾಗಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು ಹಲವು ಬಾರಿ ಹಾವುಗಳನ್ನು ಕೇಂದ್ರದಿಂದ ಹೊರ ಓಡಿಸಲು ಸ್ಥಳೀಯರಿಗೆ ಮೊರೆ ಹೋಗಿದ್ದೇವೆ ಎನ್ನುತ್ತಾರೆ.

ಕುಸಿಯುವ ಹಂತದಲ್ಲಿರುವ ಬಾಗಿಲು
ಸುಮಾರು 25ಕ್ಕೂ ಹೆಚ್ಚು ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸಹಿತ ಇಬ್ಬರು ಕಾರ್ಯನಿರ್ವಹಿಸುತ್ತಾರೆ.

ಸ್ಥಳೀಯ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುವಾಗ ಮಕ್ಕಳನ್ನು ಆಟವಾಡಿಸುತ್ತಿದ್ದರೆ, ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಇಬ್ಬರೇ ಇರುವ ಸಂದರ್ಭದಲ್ಲಿ ಮಕ್ಕಳು ಅವರಿಂದ ತಪ್ಪಿಸಿಕೊಂಡು ಮುರಿದು ಬೀಳುವ ಹಂತದಲ್ಲಿರುವ ಬಾಗಿಲು ಮತ್ತು ದಾರಂದದ ಎಡೆಯಲ್ಲಿ ಆಟವಾಡುತ್ತಿದ್ದು ಅಪಾಯಕಾರಿಯಾಗಿರುವ ಈ ಅಂಗನವಾಡಿಗೆ ಸುಸಜ್ಜಿತ ಕಟ್ಟಡವಾದರೆ ಮಾತ್ರ ಮಕ್ಕಳು ಸುರಕ್ಷಿತವಾಗಿರಲು ಸಾಧ್ಯ. ಉದ್ಯೋಗ ಖಾತ್ರಿ ಯೋಜನೆಯಡಿ ಈ ಕಟ್ಟಡಕ್ಕೆ ಅನುದಾನ ನೀಡಲು ಪಂಚಾಯತ್‌ಗೆ ಅಧಿಕಾರವಿದ್ದು, ಶೀಘ್ರವೇ ಅನುದಾನ ಬಿಡುಗಡೆ ಮಾಡಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಬೇಕಾಗಿದೆ.

ನೂತನ ಕಟ್ಟಡದಿಂದ ಸಮಸ್ಯೆ ಪರಿಹಾರ
ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಕಟ್ಟಡದೊಳಗೆ ಹಾವು, ಇಲಿಗಳ ಕಾಟ ಹೆಚ್ಚಿದೆ. ಮಳೆಗಾಲದಲ್ಲಿ ನೀರು ಒಳಬರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ನೂತನ ಕಟ್ಟಡ ನಿರ್ಮಾಣವಾದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ
– ರಂಜಿನಿ ಬೋಳಿಯಾರ್‌, ಸ್ತ್ರೀ ಶಕ್ತಿ ಸಂಘದ ಸದಸ್ಯೆ

ತಾಂತ್ರಿಕ ತೊಂದರೆಯಿಂದ ಅನುದಾನ ದೊರೆತಿಲ್ಲ
ಬೋಳಿಯಾರ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಡದಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಕೆಲವೊಂದು ತಾಂತ್ರಿಕ ತೊಂದರೆಯಿಂದಾಗಿ ಅನುದಾನ ಹೊಂದಿಸಲು ಸಾಧ್ಯವಾಗಿಲ್ಲ. ಮಾಡದಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು.
– ಸತೀಶ್‌ ಆಚಾರ್ಯ, ಅಧ್ಯಕ್ಷರು, ಬೋಳಿಯಾರು ಗ್ರಾ.ಪಂ.

ಅಧಿಕಾರಿಗಳ ಸ್ಪಂದನೆ ಸಿಗಬೇಕಿದೆ
ಅಂಗನವಾಡಿ ಕಟ್ಟಡ ದುರಸ್ತಿಗೆ ತಾ.ಪಂ.ನಿಂದ ಅನುದಾನ ಬಿಡುಗಡೆಯಾಗಿದೆ. ಈ ಹಿಂದೆಯೂ ಕಟ್ಟಡದ ಛಾವಣಿ ದುರಸ್ತಿ ನಡೆದಿತ್ತು. ಆದರೆ ಇಡೀ ಕಟ್ಟಡವೇ ಶಿಥಿಲಾವಸ್ಥೆಯಲ್ಲಿರುವುದರಿಂದ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾದರೆ ಮಾತ್ರ ಸಮಸ್ಯೆ ಪರಿಹಾರವಾಗಲು ಸಾಧ್ಯ.
– ಕೆ.ಪಿ. ಪೂರ್ಣಿಮಾ, ಅಂಗನವಾಡಿ ಶಿಕ್ಷಕಿ

– ವಸಂತ್‌ ಎನ್‌. ಕೊಣಾಜೆ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.