ಗಂಗೂಲಿಯೊಂದಿಗೆ ಬಿರುಕು ಶುದ್ಧಸುಳ್ಳು: ರವಿಶಾಸ್ತ್ರಿ
Team Udayavani, Dec 12, 2019, 12:17 AM IST
ಮುಂಬೈ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿಶಾಸ್ತ್ರಿ ನಡುವೆ ಭಿನ್ನಮತವಿದೆ ಎಂಬ ಸುದ್ದಿ ನಿಧಾನಕ್ಕೆ ಜೋರಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ರವಿಶಾಸ್ತ್ರಿ, ಇದು ಶುದ್ಧಸುಳ್ಳು, ಮಾಧ್ಯಮಗಳಿಗೆ ಅತ್ಯುತ್ತಮ ಆಹಾರ ಎಂದು ಹೇಳಿದ್ದಾರೆ.
ಗಂಗೂಲಿ-ರವಿಶಾಸ್ತ್ರಿ ನಡುವೆ ಬಹಳ ಹಿಂದಿನಿಂದಲೇ ವಿವಾದವಿದೆ. 2016ರಲ್ಲಿ ಗಂಗೂಲಿ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ ಮುಖ್ಯಸ್ಥರಾಗಿದ್ದರು. ಆ ವೇಳೆ ರವಿಶಾಸ್ತ್ರಿಯ ಬದಲು ಕುಂಬ್ಳೆಯನ್ನು ತರಬೇತುದಾರರಾಗಿ ನೇಮಿಸಿದ್ದರು. ಆಗ ಇಬ್ಬರ ನಡುವೆ ಬಹಿರಂಗ ವಾಕ್ಸಮರ ನಡೆದಿತ್ತು. ಅದಾದ ನಂತರ ಪ್ರಕರಣ ತಣ್ಣಗಾಗಿತ್ತು. ಈಗ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದಾರೆ. ರವಿಶಾಸ್ತ್ರಿ ಮತ್ತೆ ತರಬೇತುದಾರರಾಗಿದ್ದಾರೆ. ಆದ್ದರಿಂದ ಇಬ್ಬರ ನಡುವಿನ ಹಳೆಯ ಸಿಟ್ಟು ಜೋರಾಗಿದೆ ಎಂಬ ವರದಿಗಳಾಗುತ್ತಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರವಿಶಾಸ್ತ್ರಿ, ಸೌರವ್ ಗಂಗೂಲಿಯ ಕ್ರಿಕೆಟ್ ಸಾಧನೆಗಳ ಬಗ್ಗೆ ನನಗೆ ಬಹಳ ಗೌರವವಿದೆ. ಅವರು ಬಹಳ ಕಷ್ಟದ ಸಮಯದಲ್ಲಿ ಭಾರತ ಕ್ರಿಕೆಟ್ನ ಚುಕ್ಕಾಣಿ ಹಿಡಿದಿದ್ದಾರೆ. ಅದಕ್ಕೆಲ್ಲ ಜನರ ನಂಬಿಕೆಯಿದ್ದರೆ ಮಾತ್ರ ಸಾಧ್ಯ. ಗಂಗೂಲಿಯ ಬಗ್ಗೆ ನನಗೆ ಗೌರವವಿಲ್ಲವೆಂದು ಜನ ಭಾವಿಸಿದ್ದರೆ, ಅದು ಮುಟಾuಳತನದ ಪರಮಾವಧಿ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ