ಪೌರತ್ವ ತಿದ್ದುಪಡಿ ವಿರುದ್ಧ ಧರಣಿ
Team Udayavani, Dec 12, 2019, 3:05 AM IST
ಬೆಂಗಳೂರು: ಕೇಂದ್ರದ ಪೌರತ್ವ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಕಚೇರಿ ಮುಂಭಾಗ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಬಿಜೆಪಿ ನಾಯಕರು ಹಾಗೂ ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸುವುದನ್ನು ರದ್ದುಪಡಿಸಬೇಕು.
ದೇಶದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದ್ದು, ಆ ಹಕ್ಕನ್ನು ಕಸಿದುಕೊಳ್ಳಬಾರದು. ಬಿಜೆಪಿ ಮುಸಲ್ಮಾನರನ್ನು ಗುರಿಯಾಗಿಸಿ ಕೊಂಡು ಪೌರತ್ವ ಮಸೂದೆಗೆ ತಿದ್ದಪಡಿ ತಂದಿರುವುದು ಸಂವಿಧಾನ ವಿರೋಧಿ ಕ್ರಮ. ಈ ಕೂಡಲೇ ಈ ಕಾಯ್ದೆಯನ್ನ ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಪೌರತ್ವ ಮಸೂದೆ ನಮಗೆ ಬೇಡ.ಅಕ್ರಮ ವಲಸಿಗರ ಹೆಸರಿನಲ್ಲಿ ವಂಚನೆ ನಡೆಯುತ್ತಿದ್ದು, ಬಿಜೆಪಿ ಕಾಯಿದೆ ಹೆಸರಿನಲ್ಲಿ ಮುಸ್ಲಿಮರನ್ನು ಹೊರಹಾಕುವ ಪ್ರಯತ್ನ ಮಾಡು ತ್ತಿದೆ. ಕೇಂದ್ರದ ನಡೆ ಸಂವಿಧಾನದ ಮೇಲೆ ಅಕ್ರಮಣಕಾರಿಯಾಗಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನಕ್ಕೆ ಧಕ್ಕೆ ತರುತ್ತಿದ್ದಾರೆ ಎಂದರು.
ಯಾವುದೇ ಹುದ್ದೆ ನಿಭಾಯಿಸುವೆ-ಖಂಡ್ರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟಿದ್ದಾರೆ. ಮೊದಲು ಅವರ ರಾಜಿನಾಮೆ ಅಂಗೀಕಾರವಾಗಬೇಕು. ರಾಜೀ ನಾಮೆ ಅಂಗೀಕಾರವಾದ ಬಳಿಕ ಮುಂದೆ ಯಾರು ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ನನಗೆ ಹೈಕಮಾಂಡ್ ಯಾವುದೇ ಹುದ್ದೆ ಕೊಟ್ಟರೂ ನಿಭಾಯಿಸಲು ನಾನು ಸಿದ್ಧ ಎಂದು ಈಶ್ವರ್ ಖಂಡ್ರೆ ಹೇಳಿದರು. ಗುರುವಾರ ಭಾರತ ಬಚಾವೋ ಪ್ರತಿಭಟನೆಗೆ ಎಲ್ಲ ನಾಯಕರು ದೆಹಲಿಗೆ ಹೋಗುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
Re Release; ಭರ್ಜರಿ ಓಪನಿಂಗ್ ಪಡೆದ ಉಪ್ಪಿ ‘ಎ’
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ