ಎನ್ಕೌಂಟರ್ ತನಿಖೆಗೆ ನಿವೃತ್ತ ಜಡ್ಜ್ ನೇಮಕ?
Team Udayavani, Dec 12, 2019, 12:46 AM IST
ಹೊಸದಿಲ್ಲಿ: ಹೈದರಾಬಾದ್ನಲ್ಲಿ ಪಶುವೈದ್ಯೆಯ ಅತ್ಯಾಚಾರಿಗಳ ಎನ್ಕೌಂಟರ್ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ದಿಲ್ಲಿ ಮೂಲದ ನಿವೃತ್ತ ನ್ಯಾಯಮೂರ್ತಿಯಿಂದ ಈ ಕುರಿತು ತನಿಖೆ ನಡೆಸುವ ಕುರಿತು ಪರಿಶೀಲಿಸುವುದಾಗಿ ಸಿಜೆಐ ಎಸ್.ಎ.ಬೋಬ್ದೆ ನೇತೃತ್ವದ ಪೀಠ ಬುಧವಾರ ತಿಳಿಸಿದೆ.
ಎಫ್ಐಆರ್ ದಾಖಲಿಗೆ ಮನವಿ: ಈ ನಡುವೆ, ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾನ ತಂದೆ ಹೀರಾಲಾಲ್ ಗುಪ್ತಾ ದಿಲ್ಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪ್ರಕರ ಣದ ಏಕೈಕ ಸಾಕ್ಷಿಯಾದ ಆಕೆಯ ಗೆಳೆಯನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದಾರೆ. ನಿರ್ಭಯಾಳ ಗೆಳೆ ಯ ಹಣ ಪಡೆದುಕೊಂಡು ಚಾನೆಲ್ಗಳಿಗೆ ಸಂದ ರ್ಶನ ನೀಡಿದ್ದು, ಕೇಸಿನ ಮೇಲೆ ಪ್ರಭಾವ ಬೀರಿತು ಎಂದು ಆರೋ ಪಿಸಿ ದ್ದಾರೆ. ಏತನ್ಮಧ್ಯೆ, ಕ್ಷಮಾದಾನ ಅರ್ಜಿಗಳನ್ನು ಕಾಲಮಿತಿ ಯೊಳಗೆ ಇತ್ಯರ್ಥಗೊಳಿಸಬೇಕೆಂದು ಕೇಂದ್ರಕ್ಕೆ ನಿರ್ದೇಶಿಸುವಂತೆ ಕೋರಿ ಸುಪ್ರೀಂಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ