ಸಂತ್ರಸ್ತ ಕುಟುಂಬಕ್ಕೆ ಪುನರ್ವಸತಿ: ಡಿಸಿ ಶರತ್‌ ಭರವಸೆ


Team Udayavani, Dec 12, 2019, 10:52 AM IST

12-December-2

ಚಿಂಚೋಳಿ: ತಾಲೂಕಿನ ಯಾಕಾಪುರ ಗ್ರಾಮದಲ್ಲಿ ನಡೆದಿರುವ ಅತ್ಯಾಚಾರ ಮತ್ತು ಕೊಲೆಯಾದ ಬಾಲಕಿಯ ಸಂತ್ರಸ್ತ ಕುಟುಂಬಕ್ಕೆ ಸಂತಾಪ ಹೇಳಿದರೆ ಸಾಲದು. ಅವರಿಗೆ ಸರ್ಕಾರದಿಂದ ಪರಿಹಾರ ಮತ್ತು ಪುನರ್ವಸತಿಗಾಗಿ ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬಿ.  ಶರತ್‌ ಭರವಸೆ ನೀಡಿದರು.

ಯಾಕಾಪುರ ಗ್ರಾಮದ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಯನ್ನು ಈಗಾಗಲೇ ಎಸ್ಪಿ ಬಂಧಿಸಿದ್ದಾರೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿ, ಆದಷ್ಟು ಬೇಗನೆ ಆರೋಪಿಗೆ ಶಿಕ್ಷೆ ವಿಧಿಸಲಾಗುವುದು ಎಂದರು.

ಪ್ರಕರಣದ ಬಗ್ಗೆ ಎಸ್ಪಿಯಿಂದ ಮಾಹಿತಿ ಪಡೆದು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡುವುದಕ್ಕಾಗಿ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಗಮನಕ್ಕೆ ತರಲಾಗಿದೆ.

ಕಲಬುರಗಿಯಲ್ಲಿ ಉಪ ಮುಖ್ಯಮಂತ್ರಿಗಳ ಕೆಡಿಪಿ ಸಭೆ ಇರುವುದರಿಂದ ಪ್ರಕರಣವನ್ನು ಅವರ ಗಮನಕ್ಕೆ ತರುತ್ತೇನೆ. ಅಲ್ಲದೇ ಗ್ರಾಮಕ್ಕೂ ಭೇಟಿ ನೀಡುವಂತೆ ತಿಳಿಸಲಾಗುವುದು ಎಂದು ಹೇಳಿದರು.

ಮುಸ್ಲಿಂ ಸಮಾಜದ ಮುಖಂಡರಾದ ಕೆ.ಎಂ. ಬಾರಿ, ಅಬ್ದುಲ್‌ ಬಾಸೀತ ಮಾತನಾಡಿ, ಸಂತ್ರಸ್ತೆ ಕುಟುಂಬದ ಉಪಜೀವನ ತುಂಬಾ ಕಷ್ಟವಾಗಿದೆ. ತುಂಬ ಬಡತನದಿಂದ ಕೂಡಿದೆ. ಕೂಲಿ ಕೆಲಸ ಮಾಡಿ ಬದುಕುತ್ತಿರುವುದರಿಂದ ಕುಟುಂಬಕ್ಕೆ ಗ್ರಾಮದಲ್ಲಿ ಜಮೀನು, 25ಲಕ್ಷ ರೂ. ಪರಿಹಾರ ಮತ್ತು ಸರಕಾರಿ ಉದ್ಯೋಗ ಕೊಡಿಸಬೇಕೆಂದು ಆಗ್ರಹಿಸಿ, ಮನವಿ ಪತ್ರ ಸಲ್ಲಿಸಿದರು.

ಅಕ್ರಮ ಮದ್ಯ ಮಾರಾಟ ಆಗದಂತೆ ಗ್ರಾ.ಪಂ ಮಟ್ಟದಲ್ಲಿ ಪಿಡಿಒ ಮತ್ತು ಕಾರ್ಯದರ್ಶಿಗಳು ತೀವ್ರ ನಿಗಾ ವಹಿಸಬೇಕು. ಈ ಬಗ್ಗೆ ನಾನು ಕೂಡ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಪತ್ರಬರೆದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ. ತಾ.ಪಂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿಗಳು ತಾ.ಪಂ ಇಒ ಅನೀಲಕುಮಾರ ರಾಠೊಡಗೆ ಸೂಚಿಸಿದರು.

ಸಂತ್ರಸ್ತೆಯ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಪಡೆದುಕೊಳ್ಳಬೇಕು. ಶಿಕ್ಷಣ ಇಲಾಖೆಯಿಂದ ಸಿಗುವ ಪರಿಹಾರವನ್ನು ನೀಡಬೇಕೆಂದು ಬಿಇಒಗೆ ತಿಳಿಸಿದರು. ಶಿಕ್ಷಣ ಇಲಾಖೆಯಿಂದ ಮಕ್ಕಳ ಕಲ್ಯಾಣ ಕ್ಷೇಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಒಂದು ಲಕ್ಷ ರೂ. ಪರಿಹಾರ ಕೊಡಲಾಗುವುದು ಎಂದು ಬಿಇಒ ದತ್ತಪ್ಪ ತಳವಾರ ಜಿಲ್ಲಾ ಧಿಕಾರಿ ಗಮನಕ್ಕೆ ತಂದರು.

ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಮುನಾವರ ದೌಲಾ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ಲತೀಫ್‌, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಬನ್ಸಿಲಾಲ್‌ ಪವಾರ, ತಾ.ಪಂ ಅಧಿಕಾರಿ ಅನೀಲಕುಮಾರ ರಾಠೊಡ, ಅಧ್ಯಕ್ಷೆ ರೇಣುಕಾ ಚವ್ಹಾಣ, ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ, ಸಿಪಿಐ ವಿಜಯಮಹಾಂತೇಶ ಮಠಪತಿ, ತಾಲೂಕು ಅಲ್ಪಸಂಖ್ಯಾತರ ಕಲ್ಯಾಣಾಧಿ ಕಾರಿ ಶಾಂತವೀರ ಮಠಪತಿ, ಸಿಡಿಪಿಒ ಪರಿಮಳ, ಪುರಸಭೆ ಸದಸ್ಯ ಶಬ್ಬೀರ ಅಹೆಮದ್‌, ಮೊಮಿನ್‌, ಮಾಳಪ್ಪ ಪೂಜಾರಿ, ನಾಸೀರ ಹುಸೇನ, ಲಾಡ್ಲೆ ಪಟೇಲ್‌, ಶರೀಫ ಕೊಹಿರ್‌, ಮೋಹೀನ ಮೋಮಿನ, ಅಖೀಲ ಕೋಹಿರ ಇನ್ನಿತರರು ಇದ್ದರು.

ಚಿಂಚೋಳಿ ತಾಲೂಕಿನಲ್ಲಿ ಕಿರಾಣಿ ಅಂಗಡಿ ಮತ್ತು ಚಹಾ ಹೋಟೆಲ್‌ ಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಕೆಲವು ಮದ್ಯ ವ್ಯಾಪಾರಿಗಳು ಗ್ರಾಮಗಳಿಗೆ ಹೋಗಿ ಮದ್ಯದ ಬಾಟಲಿಗಳನ್ನು ಕೊಡುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಇಂತಹ ಘಟನೆಗಳು ನಡೆಯುತ್ತಿವೆ. ಗ್ರಾಮ ಮತ್ತು ತಾಂಡಾಗಳಲ್ಲಿ ತರಕಾರಿ, ಹಾಲು, ನೀರು ಸರಿಯಾಗಿ ಸಿಗುವುದಿಲ್ಲ. ಆದರೆ ಮದ್ಯ ಸಿಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಸಂತ್ರಸ್ತ ಕುಟುಂಬಕ್ಕೆ ಐದು ಎಕರೆ ಜಮೀನು, ಪರಿಹಾರ ನೀಡಬೇಕು. ಶರಣಪ್ಪ ತಳವಾರ,
ಬಿಜೆಪಿ ಜಿಲ್ಲಾ ಮುಖಂಡ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.